Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗ್ನಿಪಥ್ ವಿವಾದ: ಪಂಜಾಬ್...

ಅಗ್ನಿಪಥ್ ವಿವಾದ: ಪಂಜಾಬ್ ಮುಖ್ಯಮಂತ್ರಿಯಿಂದ ಯೋಜನೆಗೆ ಬೆಂಬಲದ ಭರವಸೆ

ವಾರ್ತಾಭಾರತಿವಾರ್ತಾಭಾರತಿ14 Sept 2022 9:04 PM IST
share
ಅಗ್ನಿಪಥ್ ವಿವಾದ: ಪಂಜಾಬ್ ಮುಖ್ಯಮಂತ್ರಿಯಿಂದ ಯೋಜನೆಗೆ ಬೆಂಬಲದ ಭರವಸೆ

ಚಂಡಿಗಡ,ಸೆ.14: ಸ್ಥಳೀಯ ಆಡಳಿತದಿಂದ ಬೆಂಬಲದ ಕೊರತೆಯಿದೆ ಎಂದು ಸೇನೆಯು ಹೇಳಿರುವ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ‘ಅಗ್ನಿಪಥ್’ ನೇಮಕಾತಿ ರ್ಯಾಲಿಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುವಂತೆ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

ಯೋಧರನ್ನು ನೇಮಕಾತಿ ಮಾಡಿಕೊಳ್ಳಲು ರ್ಯಾಲಿಗಳನ್ನು ಆಯೋಜಿಸಲು ಸೇನೆಗೆ ಸಂಪೂರ್ಣ ಬೆಂಬಲವನ್ನು ಒದಗಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿರುವ ಮಾನ್,ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ರಾಜ್ಯದಿಂದ ಸೇನೆಗೆ ಗರಿಷ್ಠ ಅಭ್ಯರ್ಥಿಗಳ ಭರ್ತಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಹೇಳಿದ್ದಾರೆ.

 ಜಲಂಧರ್‌ನಲ್ಲಿಯ ಸೇನೆಯ ವಲಯ ನೇಮಕಾತಿ ಅಧಿಕಾರಿ ಮೇ.ಜ.ಶರದ್ ಬಿಕ್ರಮಸಿಂಗ್ ಅವರು ಸೆ.8ರಂದು ಪಂಜಾಬಿನ ಮುಖ್ಯ ಕಾರ್ಯದರ್ಶಿ ವಿ.ಕೆ.ಜನುಜಾ ಹಾಗೂ ಪ್ರಧಾನ ಕಾರ್ಯದರ್ಶಿ (ಉದ್ಯೋಗ ಸೃಷ್ಟಿ,ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ) ಕುಮಾರ್  ರಾಹುಲ್ ಅವರಿಗೆ ಪತ್ರವೊಂದನ್ನು ಬರೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಭರವಸೆಯನ್ನು ನೀಡಿದ್ದಾರೆ.

ರ್ಯಾಲಿಗಳನ್ನು ಸಂಘಟಿಸುವುದಕ್ಕೆ ತಮಗೆ ಸ್ಥಳೀಯ ಆಡಳಿತದಿಂದ ಸಾಕಷ್ಟು ಬೆಂಬಲ ದೊರೆಯುತ್ತಿಲ್ಲ. ರಾಜ್ಯ ಸರಕಾರದಿಂದ ನಿರ್ದೇಶನಗಳ ಕೊರತೆ ಅಥವಾ ಹಣದ ಅಭಾವದಿಂದಾಗಿ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಸಿಂಗ್ ಪತ್ರದಲ್ಲಿ ಬರೆದಿದ್ದರು.

ಇಂತಹ ರ್ಯಾಲಿಗಳನ್ನು ನಡೆಸಲು ಅಗತ್ಯಗಳನ್ನು ಪಟ್ಟಿ ಮಾಡಿದ್ದ ಅವರು,ಪೊಲೀಸ್ ನೆರವು,ವೈದ್ಯಕೀಯ,ಆಹಾರ ಮತ್ತು ನೀರಿನ ವ್ಯವಸ್ಥೆಗಳು ಹಾಗೂ ಟಾಯ್ಲೆಟ್‌ಗಳು ರ್ಯಾಲಿ ಸ್ಥಳದಲ್ಲಿರುವುದು ಅಗತ್ಯವಾಗಿದೆ ಎಂದು ತಿಳಿಸಿದ್ದರು.

ಇತರ ರಾಜ್ಯಗಳು ರ್ಯಾಲಿಗಳಿಗೆ ನೀಡುತ್ತಿರುವ ಆಡಳಿತಾತ್ಮಕ ಮತ್ತು ಹಣಕಾಸು ಬೆಂಬಲ ಪ್ರಶಂಸಾರ್ಹವಾಗಿದೆ ಎಂದೂ ಬೆಟ್ಟು ಮಾಡಿದ್ದ ಸಿಂಗ್,ಇತರ ರಾಜ್ಯಗಳಲ್ಲಿಯ ವ್ಯವಸ್ಥೆಗಳ ಕೆಲವು ಚಿತ್ರಗಳನ್ನು ತಾನು ಕಳುಹಿಸುವುದಾಗಿ ತಿಳಿಸಿದ್ದರು.

ಸರಕಾರವು ತನ್ನ ಸ್ಪಷ್ಟ ಬದ್ಧತೆಯನ್ನು ವ್ಯಕ್ತಪಡಿಸದಿದ್ದರೆ ಪಂಜಾಬಿನಲ್ಲಿ ಭವಿಷ್ಯದ ಎಲ್ಲ ರ್ಯಾಲಿಗಳನ್ನು ಮತ್ತು ಕಾರ್ಯವಿಧಾನಗಳನ್ನು ಸ್ಥಗಿತಗೊಳಿಸುವಂತೆ ಸೇನಾ ಮುಖ್ಯಕಚೇರಿಗೆ ತಿಳಿಸುತ್ತೇವೆ ಮತ್ತು ಪರ್ಯಾಯವಾಗಿ ನೆರೆಯ ರಾಜ್ಯಗಳಲ್ಲಿ ರ್ಯಾಲಿಗಳನ್ನು ನಡೆಸುತ್ತೇವೆ ಎಂದು ಸಿಂಗ್ ಪತ್ರದಲ್ಲಿ ಖಡಕ್ಕಾಗಿ ತಿಳಿಸಿದ್ದರು. ಲೂಧಿಯಾನಾ ಮತ್ತು ಗುರುದಾಸಪುರಗಳಲ್ಲಿ ರ್ಯಾಲಿಗಳನ್ನು ಜಿಲ್ಲಾಡಳಿತದ ಸಂಪೂರ್ಣ ಬೆಂಬಲದೊಂದಿಗೆ ನಡೆಸಲಾಗಿದೆ ಎಂದು ಸೇನಾ ಮೂಲಗಳು ನಂತರ ಸ್ಪಷ್ಟನೆಯನ್ನು ನೀಡಿವೆ. ನೇಮಕಾತಿ ರ್ಯಾಲಿಗಳನ್ನು ಪಂಜಾಬಿನಿಂದ ಇತರ ಯಾವುದೇ ರಾಜ್ಯಕ್ಕೆ ಸ್ಥಳಾಂತರಿಸುವ ಯೋಜನೆಯಿಲ್ಲ ಎಂದು ಅವು ಒತ್ತಿ ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X