Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೇರ ನಗದು ವರ್ಗಾವಣೆ: ಯೋಜನೆ...

ನೇರ ನಗದು ವರ್ಗಾವಣೆ: ಯೋಜನೆ ಅನುಷ್ಠಾನಕ್ಕೆ ಕಾಲಮಿತಿ ನಿಗದಿಪಡಿಸಲು CAG ಶಿಫಾರಸ್ಸು

ವಾರ್ತಾಭಾರತಿವಾರ್ತಾಭಾರತಿ14 Sept 2022 9:56 PM IST
share
ನೇರ ನಗದು ವರ್ಗಾವಣೆ: ಯೋಜನೆ ಅನುಷ್ಠಾನಕ್ಕೆ ಕಾಲಮಿತಿ ನಿಗದಿಪಡಿಸಲು CAG ಶಿಫಾರಸ್ಸು

ಬೆಂಗಳೂರು, ಸೆ. 14: ‘ನೇರ ನಗದು ವರ್ಗಾವಣೆ ಒಳಗೊಂಡಿರುವ ಸರಕಾರದ ಎಲ್ಲ ಯೋಜನೆಗಳನ್ನು ಗುರುತಿಸಲು ಮತ್ತು ಡಿಬಿಟಿ ಅಡಿ ಸೇರ್ಪಡೆ ಮಾಡಲು ರಾಜ್ಯ ಸರಕಾರವು ಹೊಸದಾಗಿ ಕಾಲಮಿತಿಯನ್ನು ನಿಗದಿಪಡಿಸಬೇಕು' ಎಂದು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ(ಸಿಎಜಿ) ವರದಿ ಶಿಫಾರಸ್ಸು ಮಾಡಿದೆ.

ಬುಧವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2018-20ರ ಅವಧಿಯ ವಹಿವಾಟುಗಳಿಗೆ ಸಂಬಂಧಿಸಿದ ಸಿಎಜಿ ವರದಿಯನ್ನು ಮಂಡಿಸಿದ್ದು, ‘ತಪ್ಪಾಗಿ ಖಾತೆಗೆ ಹಣ ಜಮೆ ಮತ್ತು ವಿಫಲವಾದ, ಬಾಕಿಯಿರುವ, ತಿರಸ್ಕೃತ ವಹಿವಾಟುಗಳು ಇವುಗಳ ಬಗ್ಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಮಯಮಿತಿಯನ್ನು ನಿಗದಿಪಡಿಸಲು ಇಲಾಖೆಗಳಿಗೆ ನಿರ್ದೇಶನ ನೀಡಬೇಕು' ಎಂದು ಸಿಎಜಿ ಸೂಚಿಸಿದೆ.

ಬಾಕಿ ಉಳಿಕೆಗೆ ಆಕ್ಷೇಪ: ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ರೈತರಿಗೆ ಬರಬೇಕಾದ 91.99 ಕೋಟಿ ರೂ.ನೇರ ನಗದು ವರ್ಗಾವಣೆ ಮೂಲಕ (ಡಿಬಿಟಿ) ಪಾವತಿಯಾಗದೆ, ಮೂರು ವರ್ಷಗಳಿಂದ ಬಾಕಿ ಉಳಿದಿದೆ. ಅಲ್ಲದೆ, ‘ಕ್ಷೀರಸಿರಿ ಯೋಜನೆ' ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯಲ್ಲಿ(ಡಿಬಿಟಿ) ಹಲವು ನ್ಯೂನತೆಗಳಾಗಿದ್ದು, ಲಕ್ಷಾಂತರ ರೂಪಾಯಿ ಬಾಕಿ ಉಳಿದಿವೆ' ಎಂದು ಸಿಎಜಿ ಆಕ್ಷೇಪಿಸಿದೆ.

‘ರಾಜ್ಯದ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ವಿತರಿಸುವ ಪಶುಸಂಗೋಪನೆ ಮತ್ತು ಪಶು ವಿಜ್ಞಾನ ಇಲಾಖೆಯ ಕೋರ್ ಡಿಬಿಟಿ ಪೋರ್ಟಲ್ ಹಾಗೂ ಕ್ಷೀರಸಿರಿ ಅಪ್ಲಿಕೇಶನ್‍ಗಳ ಲೆಕ್ಕಪರಿಶೋಧನೆಯನ್ನು ನಡೆಸಿದ್ದು, ‘ಕ್ಷೀರಸಿರಿ' ಯೋಜನೆ ಕಡತಗಳ ಅನುಮೋದನೆಯಲ್ಲಿನ ವಿಳಂಬದಿಂದ 8,464 ಮಂದಿ ಹಾಲು ಉತ್ಪಾದಕರಿಗೆ 56.08 ಲಕ್ಷ ರೂ. ಪಾವತಿಯಾಗುವುದು ಬಾಕಿ ಉಳಿದಿತ್ತು. ಡಿಬಿಟಿ ಮೂಲಕ ನಡೆಸಿದ ಒಟ್ಟಾರೆ ವಹಿವಾಟುಗಳಲ್ಲಿ ಕೇವಲ ಶೇ.83ರಷ್ಟು ಮಾತ್ರ ಯಶಸ್ವಿಯಾಗಿದ್ದವು. ಶೇ.14ರಷ್ಟು ತಿರಸ್ಕøತವಾಗಿದ್ದವು. ವಿಫಲವಾದ ವಹಿವಾಟು ಸರಿಪಡಿಸಿ, ಪುನರಾರಂಭಿಸುವಲ್ಲಿ ಸಂಬಂಧಿಸಿದ ಇಲಾಖೆಗಳು ವಿಫಲವಾದವು. ಆದುದರಿಂದ 91,283 ವಹಿವಾಟುಗಳು ಪುನರಾರಂಭಕ್ಕೆ ಕಾಯುತ್ತ ಉಳಿಯಬೇಕಾಯಿತು. ಹೈನುಗಾರರು ಕೆಲ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾಗಬೇಕಾಯಿತು. ಫಲಾನುಭವಿಗಳಿಗೆ ದೊರೆಯಬೇಕಾಗಿದ್ದ ಹಣ ಡಿಬಿಟಿ ಮೂಲಕ ಪಾವತಿಯಾಗಲಿಲ್ಲ' ಎಂದು ಸಿಎಜಿ ವರದಿಯಲ್ಲಿ ಎಚ್ಚರಿಸಿದೆ.

‘2018-19 ಹಾಗೂ 2019-20ರ ಅವಧಿಯಲ್ಲಿ 6.67 ಲಕ್ಷ ಫಲಾನುಭವಿಗಳು ಡಿಬಿಟಿ ಮೂಲಕ ಹಣ ಬಾರದೇ ಸೌಲಭ್ಯದಿಂದ ವಂಚಿತರಾದರು. ಇದರ ಮೊತ್ತ 153.30 ಕೋಟಿ ರೂ.ಗಳಷ್ಟು. ಸಂಬಂಧಿಸಿದ ಇಲಾಖೆಗಳು ಆಧಾರ್ ಅಧಿನಿಯಮ ಹಾಗೂ ಸಂಬಂಧಿಸಿದ ಸುತ್ತೋಲೆಗಳ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ನಡೆದುಕೊಂಡವು. ವಿವಿಧ ಯೋಜನೆಗಳ ಫಲಾನುಭವಿಗಳ ಕುಂದುಕೊರತೆ ಪರಿಹರಿಸುವುದಕ್ಕೆ ಡಿಬಿಟಿ ಕೋಶದಲ್ಲಿ ಸಾರ್ವಜನಿಕ ಕುಂದುಕೊರತೆ ಕೇಂದ್ರ ಆರಂಭಿಸಲಿಲ್ಲ. ಇದರಿಂದ ಸಮಸ್ಯೆ ಇನ್ನಷ್ಟು ಬಿಗಡಾಯಿಸಿತು' ಎಂದು ವರದಿಯಲ್ಲಿ ಸಿಎಜಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X