Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ಟೋಲ್‌ನ ಸಿಬ್ಬಂದಿಗೆ ಉದ್ಯೋಗ:...

ಸುರತ್ಕಲ್ ಟೋಲ್‌ನ ಸಿಬ್ಬಂದಿಗೆ ಉದ್ಯೋಗ: ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ15 Sept 2022 6:01 PM IST
share
ಸುರತ್ಕಲ್ ಟೋಲ್‌ನ ಸಿಬ್ಬಂದಿಗೆ ಉದ್ಯೋಗ: ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಭರವಸೆ

ಮಂಗಳೂರು, ಸೆ.15: ಸುರತ್ಕಲ್ ಟೋಲ್ ತೆರವುಗೊಂಡಾಗ ಅಲ್ಲಿ ದುಡಿಯುತ್ತಿರುವ 31 ಮಂದಿ ಯುವಕ ಯವತಿಯರಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಕೆಪಿಸಿಸಿ ಸಂಯೋಜಕಿ, ಮನಪಾ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಭರವಸೆ ನೀಡಿದ್ದಾರೆ.

ಸುದ್ದಿಗೋಷ್ಠಿಲ್ಲಿಂದು ಈ ಘೋಷಣೆ ಮಾಡಿದ ಪ್ರತಿಭಾ ಕುಳಾಯಿ, ಟೋಲ್ ತೆರವುಗೊಂಡರೆ ಅಲ್ಲಿ ದುಡಿಯುತ್ತಿರುವ 31 ಮಂದಿ ನಿರುದ್ಯೋಗಿಗಳಾಗಿ ಅವರ ಕುಟುಂಬದ ಜೀವನ ನಿರ್ವಹಣೆಗೆ ತೊಂದರೆಯಾಗಲಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಅವರ ಶೈಕ್ಷಣಿಕ ಅರ್ಹತೆ, ಆಸಕ್ತಿಗೆ ಅನುಗುಣವಾಗಿ ಸೂಕ್ತ ಉದ್ಯೋಗ ದೊರಕಿಸಲು ತಾನು ಪ್ರಯತ್ನಿಸುವುದಾಗಿ ಹೇಳಿದರು.

ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಕೇಂದ್ರ  ಸಚಿವ ನಿತಿನ್ ಗಡ್ಕರಿ, ಸಂಸದ ನಳಿನ್ ಕುಮಾರ್ ಕಟೀಲು ಈಗಾಗಲೇ ಹಲವು ದಿನಾಂಕಗಳನ್ನು ಘೋಷಣೆ ಮಾಡಿದ್ದರೂ ಟೋಲ್ ಮುಚ್ಚಲು ಸಾಧ್ಯವಾಗಿಲ್ಲ. ಇತ್ತೀಚೆಗೆ ನೂರಾರು ಸಮಾನ ಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಲು ಸೇರಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಡೆಸಿರುವ ಹೋರಾಟಕ್ಕೆ ಶೀಘ್ರವೇ ಗೆಲವು ಸಿಗುವ ಭರವಸೆ ಇದೆ ಎಂದರು.

ಇತ್ತೀಚೆಗೆ ಹೋರಾಟದ ಸಂದರ್ಭ ಒಂದಿಬ್ಬರು ಮಹಿಳೆಯರು ಮಾತನಾಡುತ್ತಾ, ನಮ್ಮ ಮಕ್ಕಳು ಟೋಲ್‌ನಲ್ಲಿ ದುಡಿಯುತ್ತಿದ್ದಾರೆ. ಟೋಲ್ ತೆರವು ಆದರೆ, ಅವರ ಕೆಲಸ ಹೋಗಲಿದೆ ಎಂದು ನೋವು ವ್ಯಕ್ತಪಡಿಸಿದ್ದರು. ಹಾಗಾಗಿ ಸಾಮಾಜಿಕ ಜವಾಬ್ದಾರಿಯ ನಿಟ್ಟಿನಲ್ಲಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ನನ್ನ ಪರಿಚಯ, ಸಂಪರ್ಕದಲ್ಲಿರುವ ಕೆಲವು ಖಾಸಗಿ ಕಂಪನಿಗಳಲ್ಲಿ ಆ ಯುವಕ ಯುವತಿಯರಿಗೆ ಕೆಲಸ ದೊರಕಿಸುವ ನಿಟ್ಟಿನಲ್ಲಿ ನಾನು ಕಾರ್ಯ ಪ್ರವೃತ್ತಳಾಗಿದ್ದೇನೆ. ಮುಂದಿನ ವಾರದಿಂದ ಅವರಿಗೆ ಕೆಲಸ ಕೊಡಿಸುವ ಪ್ರಕ್ರಿಯೆ ನಡೆಯಲಿದೆ ಎಂದರು.

ಮುಂದಿನ ಚುನಾವಣೆಯಲ್ಲಿ ಸೀಟ್‌ಗಾಗಿ ಈ ಪ್ರಕ್ರಿಯೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರತಿಭಾ ಕುಳಾಯಿ, ನಾನು ರಾಜಕೀಯದಲ್ಲಿ ಇನ್ನೂ ಸಕ್ರಿಯಳಾಗಿದ್ದೇನೆ. ಹಾಗಾಗಿ ನಾನು ಎಲ್ಲಾ ಹುದ್ದೆಗಳಿಗೂ ನಾನು ಆಕಾಂಕ್ಷಿಯಾಗಿಯೇ ಇರುತ್ತೇನೆ. ಆದರೆ ಇದು ಸಾಮಾಜಿಕ ಜವಾಬ್ದಾರಿಯಿಂದ ಮಾಡುತ್ತಿರುವ ಕಾರ್ಯ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X