Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ ಅಧ್ಯಕ್ಷ ಪುಟಿನ್ ಹತ್ಯೆ ಯತ್ನದಿಂದ...

ರಶ್ಯ ಅಧ್ಯಕ್ಷ ಪುಟಿನ್ ಹತ್ಯೆ ಯತ್ನದಿಂದ ಪಾರು: ವರದಿ

ವಾರ್ತಾಭಾರತಿವಾರ್ತಾಭಾರತಿ15 Sept 2022 9:27 PM IST
share
ರಶ್ಯ ಅಧ್ಯಕ್ಷ ಪುಟಿನ್ ಹತ್ಯೆ ಯತ್ನದಿಂದ ಪಾರು: ವರದಿ

ಮಾಸ್ಕೊ, ಸೆ.15: ರಶ್ಯ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಮತ್ತೊಮ್ಮೆ  ಹತ್ಯೆಯ ಯತ್ನದಿಂದ ಪಾರಾಗಿರುವುದಾಗಿ `ಯುರೋವೀಕ್ಲಿ'  ವರದಿ ಮಾಡಿದೆ. ಪುಟಿನ್ ಪ್ರಯಾಣಿಸುತ್ತಿದ್ದ ಕಾರಿನ ಎದುರುಭಾಗದ ಟಯರ್ ಬಳಿ ಸ್ಫೋಟ ಸಂಭವಿಸಿದ್ದು ಅಧ್ಯಕ್ಷರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ . ಈ ಕುರಿತ ವರದಿಯನ್ನು ಜನರಲ್ ಜಿವಿಆರ್ ಟೆಲಿಗ್ರಾಂ ಚಾನೆಲ್‍ನಲ್ಲಿ ಬುಧವಾರ ಬಿಡುಗಡೆಗೊಳಿಸಲಾಗಿದೆ, ಆದರೆ ಹತ್ಯೆಯ ಪ್ರಯತ್ನ ಯಾವಾಗ ನಡೆದಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ ಎಂದು ಮೂಲಗಳು ಹೇಳಿವೆ.

ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಬಂಧಿಸಲಾಗಿದೆ. ಪುಟಿನ್ ಅವರ ಕಾರ್ಯಕ್ರಮಗಳ ಬಗ್ಗೆ, ಅವರು ಸಂಚರಿಸುವ ರಸ್ತೆಯ ಬಗ್ಗೆ ಕೆಲವೇ ವ್ಯಕ್ತಿಗಳಿಗೆ ಮಾತ್ರ ತಿಳಿದಿರುವುದರಿಂದ ಪುಟಿನ್ ಆಪ್ತವಲಯದವರ ಕೈವಾಡದ ಶಂಕೆ ಮೂಡಿದೆ. ಅಧ್ಯಕ್ಷರ ಅಂಗರಕ್ಷಕ ದಳದ ಮುಖ್ಯಸ್ಥರು ಹಾಗೂ ಇತರ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಿ ವಶಕ್ಕೆ ಪಡೆಯಲಾಗಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. ಆದರೆ ರಶ್ಯದಲ್ಲಿ ಮಾಧ್ಯಮಗಳಿಗೆ ಸೆನ್ಸಾರ್ ವಿಧಿಸಿರುವ ಕಾರಣ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪುಟಿನ್ ಅವರ ಹತ್ಯೆಗೆ ಹಲವು ಬಾರಿ ಪ್ರಯತ್ನ ನಡೆದಿರುವ ಹಿನ್ನೆಲೆಯಲ್ಲಿ ಅವರು ವಾಹನಗಳ  ಬೆಂಗಾವಲಿನಲ್ಲಿ ಪ್ರಯಾಣಿಸುತ್ತಿದ್ದರು.

ಪುಟಿನ್ ಅವರು ಅಧ್ಯಕ್ಷೀಯ  ನಿವಾಸಕ್ಕೆ ತೆರಳುತ್ತಿದ್ದಾಗ ಮನೆಗಿಂತ  ಕೆಲವು ಮೀಟರ್‍ಗಳಷ್ಟು ದೂರದಲ್ಲಿ ಮೊದಲ ಬೆಂಗಾವಲು ಕಾರನ್ನು ಆಂಬ್ಯುಲೆನ್ಸ್‍ನಿಂದ ನಿರ್ಬಂಧಿಸಲಾಯಿತು.  ಆಗ ಪುಟಿನ್ ಪ್ರಯಾಣಿಸುತ್ತಿದ್ದ ಲಿಮೋಸಿನ್ ಕಾರು ಹಠಾತ್ತಾಗಿ ನಿಂತಿದ್ದು ಅದರ ಹಿಂದಿದ್ದ ಎರಡನೇ ಬೆಂಗಾವಲು ಕಾರು ಪುಟಿನ್ ಕಾರನ್ನು ದಾಟಿ ಮುಂದೆ ಸಾಗಿದೆ. ಅಷ್ಟರಲ್ಲಿ ಪುಟಿನ್ ಇದ್ದ ಕಾರಿನ ಎಡಬದಿಯ ಮುಂಭಾಗದ ಚಕ್ರದ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಕಾರಿನ ಚಕ್ರದಲ್ಲಿ ಹೊಗೆ ಕಾಣಿಸಿಕೊಂಡರೂ ಚಾಲಕ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಅಧ್ಯಕ್ಷರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾನೆ ಎಂದು ವರದಿಯಾಗಿದೆ.

ತನ್ನ ಹತ್ಯೆಗೆ ಕನಿಷ್ಟ 5 ಬಾರಿ ಪ್ರಯತ್ನ ನಡೆದಿದೆ ಎಂದು 2017ರಲ್ಲಿ ಪುಟಿನ್ ಬಹಿರಂಗಗೊಳಿಸಿದ್ದರು. ಉಕ್ರೇನ್ ಮೇಲಿನ ಆಕ್ರಮಣದ ಬಳಿಕ ಪುಟಿನ್ ಅವರ ಅನಾರೋಗ್ಯ ಹಾಗೂ ಅವರಿಗಿರುವ ಜೀವ ಬೆದರಿಕೆಯ ಬಗ್ಗೆ ವದಂತಿಗಳು ಹೆಚ್ಚಿವೆ. ಕೆಲ ವಾರಗಳ ಹಿಂದೆ ಸೈಂಟ್ ಪೀಟರ್ಸ್‍ಬರ್ಗ್‍ನ ರಾಜಕಾರಣಿಗಳ ತಂಡವೊಂದು ಪುಟಿನ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಪದಚ್ಯುತಗೊಳಿಸುವಂತೆ ಆಗ್ರಹಿಸಿ ರಶ್ಯದ ಸಂಸತ್‍ಗೆ ಪತ್ರ ಬರೆದಿದ್ದರು. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಶ್ಯ ಸೇನೆಗೆ ಆಗಿರುವ ಅಪಾರ ನಷ್ಟ ಹಾಗೂ ಪಾಶ್ಚಿಮಾತ್ಯರ ನಿರ್ಬಂಧದಿಂದ ಅರ್ಥವ್ಯವಸ್ಥೆಗೆ ಆಗಿರುವ ಹಾನಿಯ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯ ಎಂದು ಪತ್ರದಲ್ಲಿ ವಿವರಿಸಲಾಗಿತ್ತು. ಜತೆಗೆ, ಸೈಂಟ್ ಪೀಟರ್ಸ್‍ಬಗ್, ಮಾಸ್ಕೋ ಹಾಗೂ ಇತರ ವಲಯಗಳ 65  ಪುರಸಭೆ ಪ್ರತಿನಿಧಿಗಳು ಪುಟಿನ್ ರಾಜೀನಾಮೆಗೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ ನಡೆಸಿರುವುದಾಗಿಯೂ ವರದಿಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X