Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರಾವಳಿ ಜಿಲ್ಲೆಗಳಲ್ಲಿ ಗುಡ್ಡಗಾಡು,...

ಕರಾವಳಿ ಜಿಲ್ಲೆಗಳಲ್ಲಿ ಗುಡ್ಡಗಾಡು, ಇಳಿಜಾರು ಪ್ರದೇಶದಲ್ಲಿ ಮನೆ ನಿರ್ಮಿಸಲು ನೀತಿ ರೂಪಿಸಿ: ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ15 Sept 2022 10:19 PM IST
share
ಕರಾವಳಿ ಜಿಲ್ಲೆಗಳಲ್ಲಿ ಗುಡ್ಡಗಾಡು, ಇಳಿಜಾರು ಪ್ರದೇಶದಲ್ಲಿ ಮನೆ ನಿರ್ಮಿಸಲು ನೀತಿ ರೂಪಿಸಿ: ಯು.ಟಿ.ಖಾದರ್

ಬೆಂಗಳೂರು, ಸೆ.15: ಕರಾವಳಿ ಜಿಲ್ಲೆಗಳಲ್ಲಿ ಗುಡ್ಡಗಾಡು, ಇಳಿಜಾರು ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಲು ರಾಜ್ಯ ಸರಕಾರ ಒಂದು ನೀತಿ ರೂಪಿಸಬೇಕು. ಇದರಿಂದಾಗಿ, ಗುಡ್ಡಗಾಡು ಹಾಗೂ ಇಳಿಜಾರು ಪ್ರದೇಶಗಳಲ್ಲಿ ಭೂ ಕುಸಿತದಿಂದ ಆಗುವಂತಹ ಅನಾಹುತಗಳನ್ನು ತಕ್ಕಮಟ್ಟಿಗೆ ನಿಯಂತ್ರಿಸಬಹುದು ಎಂದು ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಹೇಳಿದರು.

ಗುರುವಾರ ವಿಧಾನಸಭೆಯಲ್ಲಿ ನಿಯಮ 69ರಡಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ವರ್ಷ ಮಳೆಯಿಂದಾಗಿ ಹಾನಿಯಾದ 22 ಮನೆಗಳಿಗೆ 5 ಲಕ್ಷ ರೂ.ಗಳ ಪರಿಹಾರ ಇನ್ನೂ ಫಲಾನುಭವಿಗಳಿಗೆ ಬಂದಿಲ್ಲ ಎಂದರು.

ಕಡಲ್ಕೊರೆತ ತಡೆಯುವಲ್ಲಿ ವಿಫಲ: ಅತೀ ಹೆಚ್ಚು ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಕಡಲ್ಕೊರೆತ ಆಗಿದೆ. ರಸ್ತೆಗಳು ಹಾಳಾಗಿವೆ. ಕಳೆದ ಮೂರು ವರ್ಷಗಳಲ್ಲಿ ಕರಾವಳಿ ಭಾಗದಲ್ಲಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗಿಲ್ಲ. ಕಾಮಗಾರಿಗಳನ್ನು ಮಾಡಿರುವವರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಖಾದರ್ ಹೇಳಿದರು.

ಬಂದರು ಹಾಗೂ ಮೀನುಗಾರಿಕೆ ಇಲಾಖೆಯನ್ನು ನಂಬಿ ಕೆಲಸ ಮಾಡಿದ ನಂತರ ಹಣ ಪಡೆಯಲು ಬೆಂಗಳೂರಿಗೆ ಬರಬೇಕು. ಇಲ್ಲಿ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಮಾಡುವವರಿಗೆ ಹಣ ಬಿಡುಗಡೆ ನೀಡುವುದಿಲ್ಲ. 2014ರಲ್ಲಿ ಎಡಿಬಿ ಯೋಜನೆ ಆರಂಭವಾದಾಗ, ಬಂದರು ಇಲಾಖೆಯಲ್ಲಿ ಕಡಲ್ಕೊರೆತ ನಿರ್ವಹಣೆಗೆ ಹಣ ಇಡಬೇಕು. ಆದರೆ, ನಿರ್ವಹಣೆ ಮಾಡಲು ನಿಮ್ಮ ಬಳಿ ಹಣವೇ ಇಲ್ಲ ಎಂದು ಅವರು ತಿಳಿಸಿದರು.

ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಭಾರಿ ಹೊಡೆತ ಬಿತ್ತು. ಎರಡು ಬಾರಿ ನಾನು ಲಿಖಿತವಾಗಿ ತನಿಖೆ ನಡೆಸುವಂತೆ ಮನವಿ ಮಾಡಿದೆ. ಸೋಮೇಶ್ವರ, ಉಚ್ಚಿಲ ಸುತ್ತಲಿನ ಗ್ರಾಮಗಳಿಗೆ ಹೋಗಲು ಸಂಪರ್ಕ ಇಲ್ಲ. ಮಾನವೀಯತೆ, ಕರುಣೆ ಇಲ್ಲದ ಸರಕಾರ ನಾವು ನೋಡುತ್ತಿದ್ದೇವೆ ಎಂದು ಖಾದರ್ ಕಿಡಿಗಾರಿದರು.

ನೈಸರ್ಗಿಕ ವಿಕೋಪಗಳಿಂದ ಎದುರಾಗುವ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಕರಾವಳಿ ಭಾಗದ ಜಿಲ್ಲೆಗಳಿಗೆ ಸಿದ್ದರಾಮಯ್ಯ ಸರಕಾರ ತಲಾ 6 ಕೋಟಿ ರೂ.ಗಳ ವಿಶೆಷ ಅನುದಾನ ನೀಡಿತ್ತು. ಅದೇ ರೀತಿ ಈಗಲೂ ಸರಕಾರ ವಿಶೇಷ ಅನುದಾನ ನೀಡಬೇಕು ಎಂದು ಅವರು ಆಗ್ರಹಿಸಿದರು.

ಮಳೆಯಿಂದ ಮನೆಗಳನ್ನು ಕಳೆದುಕೊಂಡಿರುವವರಿಗೆ ರೇಷನ್‍ಕಾರ್ಡ್ ಕೊಡಲು ಈ ಸರಕಾರಕ್ಕೆ ಆಗುತ್ತಿಲ್ಲ. ಶೇ.5ರಷ್ಟು ಕಳ್ಳರನ್ನು ಹಿಡಿಯಲು ಹೋಗಿ ಶೇ.95ರಷ್ಟು ಅರ್ಹರಿಗೆ ತೊಂದರೆ ಕೊಡುವಂತಾಗಿದೆ. ಬಿಪಿಎಲ್ ಕಾರ್ಡು ಕಳೆದುಕೊಂಡವರಿಗೆ ಕಾರ್ಡು ಕೊಡುವ ಕೆಲಸ ಮಾಡಬೇಕು. ರಸ್ತೆಗಳು ಸಮರ್ಪಕವಾಗಿ ನಿರ್ವಹಣೆ ಆಗುತ್ತಿಲ್ಲ. ಗುತ್ತಿಗೆದಾರರು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಖಾದರ್ ಹೇಳಿದರು.

ಮೀನುಗಾರರ ಸಮಸ್ಯೆಗಳಿಗೆ ಈ ಸರಕಾರ ಸ್ಪಂದಿಸಿಲ್ಲ. ಮಳೆಯಿಂದಾಗಿ ಅವರ ಬೋಟುಗಳನ್ನು ಇಡಲು ಜಾಗ ಇಲ್ಲ, ಶೆಡ್ ಇಲ್ಲ, ಮೀನುಗಾರರಿಗೆ ಮನೆ ಕೊಟ್ಟಿಲ್ಲ. ಕರಾವಳಿ ಜಿಲ್ಲೆಯಲ್ಲಿ ಎಲ್ಲರೂ ನಿಮಗೆ ಮತ ನೀಡಿದರು. ಈ ಬಾರಿ ಮೀನುಗಾರರು ಯಾರು ನಿಮಗೆ ಮತ ನೀಡುವುದಿಲ್ಲ ಎಂದು ಖಾದರ್ ಹೇಳಿದರು.

ಕಾಮಗಾರಿ ಮಾಡುವಾಗ ಜಿಲ್ಲಾಧಿಕಾರಿ ಕ್ರಿಯಾ ಯೋಜನೆ ಮಾಡಬೇಕು. ಬಿಜೆಪಿ ಶಾಸಕರು ಮೀನುಗಾರರ ಬಗ್ಗೆ ಮಾತನಾಡಲ್ಲ. ನಾನೇ ಮಾತನಾಡಬೇಕು. ಮುಂದೆ ಅವರು ನಿಮಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ. ಮೀನುಗಾರರ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಒಬ್ಬ ಮೀನುಗಾರ ಸಿಗಲಿಲ್ಲವೇ? ಮೊಗವೀರರು ನಿಮಗೆ ಕ್ಷಮಿಸುತ್ತಾರಾ? ಎಂದು ಖಾದರ್ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X