ಮಣಿಪಾಲ; ಬಿಎಎಂಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ, ಸೆ.15: ಬಿಎಎಂಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಬುಧವಾರ ಪರ್ಕಳ ಸಮೀಪದ ಕಬ್ಯಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಕಬ್ಯಾಡಿಯ ಪ್ರಕಾಶ ಕುಲಕರ್ಣಿ ಎಂಬವರ ಮಗ ಪೃಥ್ವಿ ಕುಲಕರ್ಣಿ(24) ಎಂದು ಗುರುತಿಸಲಾಗಿದೆ.
ಬಿ.ಎ.ಎಂ.ಎಸ್ ಪದವಿಯಲ್ಲಿ ಅನುತ್ತಿರ್ಣ ಆಗಿರುವುದರಿಂದ ಸುಮಾರು ಒಂದು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪೃಥ್ವಿ, ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಹಾಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





