Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. CUET ಫಲಿತಾಂಶ ಪ್ರಕಟ: 19,865 ಮಂದಿಗೆ...

CUET ಫಲಿತಾಂಶ ಪ್ರಕಟ: 19,865 ಮಂದಿಗೆ ಶೇಕಡ 100 ಅಂಕ !

ವಾರ್ತಾಭಾರತಿವಾರ್ತಾಭಾರತಿ16 Sept 2022 7:22 AM IST
share
CUET ಫಲಿತಾಂಶ ಪ್ರಕಟ: 19,865 ಮಂದಿಗೆ ಶೇಕಡ 100 ಅಂಕ !

ಹೊಸದಿಲ್ಲಿ: ವಿಶ್ವವಿದ್ಯಾನಿಲಯದಲ್ಲಿ ಪದವಿ ಪ್ರವೇಶಕ್ಕೆ ಇರುವ ಸಾಮಾನ್ಯ ವಿವಿ ಪ್ರವೇಶ ಪರೀಕ್ಷೆ (CUET-UG) ಫಲಿತಾಂಶ ಪ್ರಕಟವಾಗಿದ್ದು, 30 ವಿಷಯಗಳಲ್ಲಿ ಒಟ್ಟು 19,865 ಮಂದಿ ವಿದ್ಯಾರ್ಥಿಗಳು ಶೇಕಡ 100ರಷ್ಟು ಅಂಕ ಪಡೆದಿದ್ದಾರೆ.

ಇಂಗ್ಲಿಷ್‍ನಲ್ಲಿ ಗರಿಷ್ಠ ಎಂದರೆ 8236 ಮಂದಿ ಶೇಕಡ 100 ಅಂಕ ಪಡೆದಿದ್ದು, ರಾಜಕೀಯ ವಿಜ್ಞಾನ (2065) ನಂತರದ ಸ್ಥಾನದಲ್ಲಿದೆ. ವ್ಯವಹಾರ ಅಧ್ಯಯನ (1669) ಮೂರನೇ ಸ್ಥಾನದಲ್ಲಿದೆ. ಅಧಿಕೃತ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಶುಕ್ರವಾರ ಬೆಳಗ್ಗೆ ಪ್ರಕಟಿಸಲಿದ್ದು, ತಾನೇ ಹಾಕಿಕೊಂಡ ಗಡುವು ಅಂದರೆ ಗುರುವಾರ ರಾತ್ರಿ 10 ಗಂಟೆಗೆ ಫಲಿತಾಂಶ ಪ್ರಕಟಣೆಗೆ ಎನ್‍ಟಿಎ ವಿಫಲವಾಗಿದೆ.

ಜೀವಶಾತ್ರ, ಅರ್ಥಶಾಸ್ತ್ರ ಮತ್ತು ಮನಃಶಾಸ್ತ್ರ ವಿಷಯಗಳಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೂರ್ಣಾಂಕಗಳನ್ನು ಪಡೆದಿದ್ದಾರೆ. ಇದರಿಂದಾಗಿ ಈ ಆರು ವಿಷಯಗಳಲ್ಲಿ ಪದವಿ ತರಗತಿ ಪ್ರವೇಶಕ್ಕೆ ಕಟಾಫ್ ಅಂಕಗಳು ಗರಿಷ್ಠ ಇರುವ ಸಾಧ್ಯತೆ ಇದೆ. ಒಟ್ಟು 14,90,293 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ ಶೇಕಡ 60ರಷ್ಟು ವಿದ್ಯಾರ್ಥಿಗಳು ಅಂದರೆ 9,68,202 ಮಂದಿ ಪರೀಕ್ಷೆಗೆ ಹಾಜರಾಗಿದ್ದರು.

ಈ ಪರೀಕ್ಷೆಯ ಆಧಾರದಲ್ಲಿ 90 ವಿಶ್ವವಿದ್ಯಾನಿಲಯಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತದೆ. ಹಿಂದಿಯಲ್ಲಿ 875, ಲೆಕ್ಕಶಾಸ್ತ್ರದಲ್ಲಿ 422, ಭೂಗೋಳ ಶಾಸ್ತ್ರದಲ್ಲಿ 326, ಇತಿಹಾಸದಲ್ಲಿ 893 ಮತ್ತು ಸಮಾಜಶಾಸ್ತ್ರದಲ್ಲಿ 261 ವಿದ್ಯಾರ್ಥಿಗಳು ಶೇಕಡ 100ರಷ್ಟು ಅಂಕ ಗಳಿಸಿದ್ದಾರೆ.

ಆರಂಭದಲ್ಲಿ ಸಿಯುಇಟಿ-ಯುಜಿ ಪರೀಕ್ಷೆಯ ಎಲ್ಲ ಹಂತಗಳನ್ನು ಆಗಸ್ಟ್ 20ರೊಳಗೆ ಮುಗಿಸಲು ನಿರ್ಧರಿಸಲಾಗಿತ್ತು. ಆದರೆ ಹಲವು ಗೊಂದಲಗಳಿಂದಾಗಿ ಪರೀಕ್ಷೆಯನ್ನು ಜುಲೈ 15 ರಿಂದ ಆಗಸ್ಟ್ 30ರ ವರೆಗೆ ಆರು ಹಂತಗಳಲ್ಲಿ ನಡೆಸಲಾಗಿತ್ತು. 259 ನಗರಗಳ 489 ಕೇಂದ್ರಗಳಲ್ಲಿ ಕಂಪ್ಯೂಟರ್ ಆಧರಿತ ಪರೀಕ್ಷೆ ನಡೆಸಲಾಗಿತ್ತು. 13 ಭಾಷೆಗಳಲ್ಲಿ 2219 ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗಿತ್ತು.

ಮೊದಲ ಆವೃತ್ತಿಯಲ್ಲಿ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಸುಮಾರು 60 ಕೇಂದ್ರಗಳಲ್ಲಿ ಪರೀಕ್ಷೆ ಮುಂದೂಡಲಾಗಿತ್ತು ಎಂದು timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X