Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. BBMP ವಾರ್ಡ್ ವಿಂಗಡಣೆ ಪ್ರಶ್ನಿಸಿದ್ದ...

BBMP ವಾರ್ಡ್ ವಿಂಗಡಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ16 Sept 2022 8:28 PM IST
share
BBMP ವಾರ್ಡ್ ವಿಂಗಡಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಸೆ.16: ಬಿಬಿಎಂಪಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ವಾರ್ಡ್ ಪುನರ್ ವಿಂಗಡಿಸಿ ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿ ಆದೇಶಿಸಿದೆ.

ಈ ಕುರಿತು ಶಾಸಕರಾದ ಜಮೀರ್ ಅಹ್ಮದ್‌ಖಾನ್, ಸೌಮ್ಯರೆಡ್ಡಿ, ಎಂ.ಸತೀಶ್‌ರೆಡ್ಡಿ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. 

ಕಳೆದ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರರ ಮನವಿಯ ಹಿನ್ನೆಲೆಯಲ್ಲಿ ಕೆಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿತ್ತು. ಈ ವಾದದಿಂದ ಸಂತೃಪ್ತಗೊಳ್ಳದ ನ್ಯಾಯಪೀಠವು ವಾರ್ಡ್ ಪುನರ್ ವಿಂಗಡಣೆಯಲ್ಲಿನ ವ್ಯತ್ಯಾಸ ಮತ್ತು ಲೋಪಗಳನ್ನು ನಂತರ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಸರಕಾರಗಳು ಸರಿಪಡಿಸಲಿವೆ ಎಂದು ತಿಳಿಸಿ, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು. 

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯಲ್ಲಿ ಪ್ರತಿ ವಾರ್ಡ್ ನಲ್ಲಿ ಸಮಾನ ಸಂಖ್ಯೆಯ ಮತದಾರರು ಇರಬೇಕು. ಆದರೆ, ಸರಕಾರ ವಿವಿಧ ಅನುಪಾತದಲ್ಲಿ ಜನಸಂಖ್ಯೆ ಪರಿಗಣಿಸಿರುವ ಪರಿಣಾಮ ಪ್ರತಿಯೊಂದು ವಾರ್ಡ್ ನಲ್ಲಿ ಜನಸಂಖ್ಯೆ ಪ್ರಮಾಣದಲ್ಲಿ ವ್ಯತ್ಯಾಸವಿದೆ. ಆಡಳಿತ ಪಕ್ಷದ ಶಾಸಕರಿರುವ ವಿಧಾನಸಭಾ ಕ್ಷೇತ್ರದಲ್ಲಿ ತಮಗೆ ಅನುಕೂಲವಾಗುವಂತೆ ವಾರ್ಡ್ಗಳ ಪುನರ್ ರಚಿಸಲಾಗಿದೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರದಲ್ಲಿ ಹೆಚ್ಚಿನ ಜನಸಂಖ್ಯೆ ಪರಿಗಣಿಸಲಾಗಿದೆ. ವಾರ್ಡ್ಗಳ ಸಂಖ್ಯೆಯನ್ನೂ ಕಡಿತಗೊಳಿಸಲಾಗಿದೆ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಮತ್ತೊಂದು ಕಡೆ ಆಡಳಿತ ಪಕ್ಷದ ಶಾಸಕ ಎಂ.ಸತೀಶ್‌ರೆಡ್ಡಿ ಅವರು ತಮ್ಮ ಕ್ಷೇತ್ರವಾದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಕೆಲವು ವಾರ್ಡ್ಗಳನ್ನು ವಿಭಜಿಸಿ, ಪಕ್ಕದ ವಿಧಾನಸಭಾ ಕ್ಷೇತ್ರದ ವಾರ್ಡ್ ಗಳ ಜತೆ ಸೇರ್ಪಡೆಗೊಳಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 

2011ರ ಜನಗಣತಿ ಆಧರಿಸಿ ಪ್ರತಿ ವಾರ್ಡ್ ಗೆ  ಜನಸಂಖ್ಯೆ ನಿಗದಿಪಡಿಸಲಾಗಿದೆ. ವಿಧಾನಸಭಾ ಕ್ಷೇತ್ರದ ಭೌಗೋಳಿಕ ವಿಸ್ತೀರ್ಣ, ಕ್ಷೇತ್ರದ ಜನಸಂಖ್ಯೆ ಬೆಳವಣಿಗೆ ಆಧರಿಸಿ ವಾರ್ಡ್ ರಚಿಸಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ವಾರ್ಡ್ ವಿಂಗಡಣೆಯಲ್ಲಿ ಶೆ.10ರಷ್ಟು ಜನಸಂಖ್ಯೆ ಏರಿಳಿತದ ಅನುಪಾತ ಅನುಸರಿಸಲಾಗಿದೆ. ಅದರಂತೆ, 34 ಸಾವಿರದಿಂದ 39 ಸಾವಿರ ಜನಸಂಖ್ಯೆಯ ಆಧಾರದಲ್ಲಿ ವಾರ್ಡ್ಗಳನ್ನು ವಿಂಗಡಣೆ ಮಾಡಲಾಗಿದ್ದು, ಅರ್ಜಿಗಳನ್ನು ವಜಾಗೊಳಿಸಬೇಕೆಂದು ಸರಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರು ವಾದ ಮಂಡಿಸಿದ್ದರು. 

ವಾರ್ಡ್ಗಳಲ್ಲಿ ಜನಸಂಖ್ಯೆಯ ವ್ಯತ್ಯಾಸಗಳಿರಬಹುದು ಎಂದು ಸ್ವತಃ ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಇದನ್ನು ಕೋರ್ಟ್ಗೆ ಸಲ್ಲಿಸಲಾಗಿದೆ. ಹೀಗಾಗಿ, ಅರ್ಜಿದಾರರ ವಾದ ಪರಿಗಣಿಸದೆ, ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕೆಂದು ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X