Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಬೀದಿ ನಾಯಿ ಹಾವಳಿ: ಮಕ್ಕಳಿಗೆ...

ಕೇರಳದಲ್ಲಿ ಬೀದಿ ನಾಯಿ ಹಾವಳಿ: ಮಕ್ಕಳಿಗೆ ರಕ್ಷಣೆ ನೀಡಲು ಏರ್‌ ಗನ್‌ ಕೈಯ್ಯಲ್ಲಿ ಹಿಡಿದು ಸಾಗಿದ ವ್ಯಕ್ತಿ

ವೀಡಿಯೋ ವೈರಲ್‌

ವಾರ್ತಾಭಾರತಿವಾರ್ತಾಭಾರತಿ17 Sept 2022 12:44 PM IST
share
ಕೇರಳದಲ್ಲಿ ಬೀದಿ ನಾಯಿ ಹಾವಳಿ: ಮಕ್ಕಳಿಗೆ ರಕ್ಷಣೆ ನೀಡಲು ಏರ್‌ ಗನ್‌ ಕೈಯ್ಯಲ್ಲಿ ಹಿಡಿದು ಸಾಗಿದ ವ್ಯಕ್ತಿ

ಕೊಝಿಕ್ಕೋಡ್ : ಕೇರಳದಲ್ಲಿ ಬೀದಿ ನಾಯಿ ಹಾವಳಿಯ ನಡುವೆ ವ್ಯಕ್ತಿಯೊಬ್ಬ ತನ್ನ ಪುತ್ರಿ ಹಾಗೂ ನೆರೆಹೊರೆಯ ಮಕ್ಕಳನ್ನು ಸುರಕ್ಷಿತವಾಗಿ ಮದರಸಾಗೆ ಕರೆದುಕೊಂಡು ಹೋಗುವ ಸಲುವಾಗಿ ಕೈಯ್ಯಲ್ಲಿ ಏರ್ ಗನ್ ಹಿಡಿದುಕೊಂಡು ಸಾಗುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ.

ಮಕ್ಕಳೆಲ್ಲ ಹಿಂದಿನಿಂದ ಬರುತ್ತಿರುವಂತೆಯೇ ಕೈಯ್ಯಲ್ಲಿ ಏರ್‌ ಗನ್‌ ಹಿಡಿದುಕೊಂಡಿರುವ ಸಮೀರ್ ಟಿ ಎಂಬ ಪಳ್ಳಿಕೆರೆಯ ಬೇಕಲದ ಹದಾದ ನಗರ ನಿವಾಸಿ ವ್ಯಕ್ತಿಯೊಬ್ಬರು ತಮ್ಮ  ಒಂಬತ್ತು ವರ್ಷದ ಪುತ್ರಿ ರಿಫಾ ಸಹಿತ ಇತರ ಮಕ್ಕಳನ್ನು  ಸುರಕ್ಷಿತವಾಗಿ ಕರೆದೊಯ್ಯುತ್ತಿರುವುದು ವೀಡಿಯೋದಲ್ಲಿ ಕಾಣಿಸುತ್ತದೆ.

ಯಾವುದೇ ಬೀದಿ ನಾಯಿ ಮಕ್ಕಳ ಮೇಲೆ ದಾಳಿ ನಡೆಸಿದರೆ ಗುಂಡಿಕ್ಕುವುದಾಗಿಯೂ ಆ ವ್ಯಕ್ತಿ ಎಚ್ಚರಿಸುತ್ತಿರುವುದು ವೀಡಿಯೋದಲ್ಲಿ ಕೇಳಿಸುತ್ತದೆ.

ಸಮೀರ್ ಪುತ್ರ ಈ ವೀಡಿಯೋವನ್ನು ಚಿತ್ರೀಕರಿಸಿ ಅದನ್ನು ವಾಟ್ಸ್ಯಾಪ್‌ನಲ್ಲಿ ಶೇರ್‌ ಮಾಡಿದ್ದು ಅದು ತಕ್ಷಣ ವೈರಲ್‌ ಆಗಿದೆ.

ಬೀದಿ ನಾಯಿಗಳ ಹಾವಳಿಯಿಂದಾಗಿ ತನಗೆ ಭಯವಾಗುತ್ತಿದೆ, ಮದರಸಾಗೆ ಹೋಗುವುದಿಲ್ಲ ಎಂದು ಪುತ್ರಿ ಹೇಳಿದ ನಂತರ ತಾನು ಎಲ್ಲಾ ಮಕ್ಕಳಿಗೆ ರಕ್ಷಣೆಯೊದಗಿಸಿ ಮದರಸಾಗೆ ಕಳುಹಿಸಿದ್ದಾಗಿ ಸಮೀರ್‌ ಹೇಳಿದ್ದಾರೆ.

ʻʻಮದರಸಾ ನಮ್ಮ ಮನೆಯಿಂದ 60 ಮೀಟರ್‌ ದೂರವಿದೆ ಆದರೆ ದಾರಿಯುದ್ದಕ್ಕೂ ಹಲವು ಬೀದಿ ನಾಯಿಗಳಿವೆ. ಸ್ಥಳೀಯ ಹಲವು ಇತರ ಮಕ್ಕಳೂ ತಾವು ಮದರಸಾಗೆ ತೆರಳಲು ಭಯಪಡುತ್ತಿರುವುದಾಗಿ ಹೇಳಿದರು. ನಂತರ ಪತ್ನಿಗೆ ಏರ್‌ ಗನ್‌ ತರುವಂತೆ ಹೇಳಿ ಮಕ್ಕಳಿಗೆ ಧೈರ್ಯ ತುಂಬಿ ಏರ್‌ ಗನ್‌ ಹಿಡಿದುಕೊಂಡು ಅವರೊಂದಿಗೆ ಸಾಗಿದೆ,ʼʼಎಂದು ಸಮೀರ್‌ ಹೇಳಿದ್ದಾರೆ.

ಗುರುವಾರ ಮದರಸಾದಿಂದ ಹಿಂದಿರುಗುತ್ತಿದ್ದ ಒಬ್ಬ ವಿದ್ಯಾರ್ಥಿಗೆ ಬೀದಿ ನಾಯಿ ಕಚ್ಚಿದೆ ಎಂದು ಅವರು ಹೇಳಿದರಲ್ಲದೆ ಏರ್‌ ಗನ್‌ ಬಳಸಲು ಯಾವುದೇ ಪರವಾನಗಿ ಬೇಕಿಲ್ಲ, ಅದರ ಸದ್ದಿಗೆ ನಾಯಿಗಳು ಓಡಿ ಹೋಗುತ್ತವೆ ಎಂದು ತಿಳಿಸಿದ್ದಾರೆ. ಮಕ್ಕಳು ಮದರಸಾಗೆ ತೆರಳುವಾಗ ಹೆತ್ತವರೂ ಅವರ ಜೊತೆಗೆ ಇರಬೇಕು ಎಂದು ಮದರಸಾ ಆಡಳಿತ ಹೇಳಿದೆ ಎಂದು ಸಮೀರ್‌ ವಿವರಿಸುತ್ತಾರೆ.

Watch | Man carrying airgun escorts school children to protect them from stray dogs in #Kerala #KeralaStrayDogMenace pic.twitter.com/F2QObkqX5P

— TOI Trivandrum (@TOI_Trivandrum) September 16, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X