Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೆ.‌30 ರೊಳಗೆ ಮೈಷುಗರ್ ಸಕ್ಕರೆ...

ಸೆ.‌30 ರೊಳಗೆ ಮೈಷುಗರ್ ಸಕ್ಕರೆ ಕಾರ್ಖಾನೆ ಸಂಪೂರ್ಣ ಕಾರ್ಯಚರಣೆ: ಸಚಿವ ಕೆ.ಗೋಪಾಲಯ್ಯ

ವಾರ್ತಾಭಾರತಿವಾರ್ತಾಭಾರತಿ17 Sept 2022 6:56 PM IST
share
ಸೆ.‌30 ರೊಳಗೆ ಮೈಷುಗರ್ ಸಕ್ಕರೆ ಕಾರ್ಖಾನೆ ಸಂಪೂರ್ಣ ಕಾರ್ಯಚರಣೆ: ಸಚಿವ ಕೆ.ಗೋಪಾಲಯ್ಯ

ಮಂಡ್ಯ, ಸೆ.17: ಮೈಷುಗರ್ ಸಕ್ಕರೆ ಕಾರ್ಖಾನೆ ಸೆ.‌30 ರೊಳಗಾಗಿ ಸಂಪೂರ್ಣವಾಗಿ ಚಾಲನೆಗೊಳ್ಳಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ  ತಿಳಿಸಿದರು.

ಇಂದು ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಖಾನೆಯ ಕೆಲಸ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಾರ್ಖಾನೆಯ ಎರಡನೇ ಬಯ್ಲರ್ ನ   ಕಾರ್ಯ ಸೆ.19 ರಿಂದ ಪ್ರಾರಂಭವಾಗಬೇಕು ಎಂದರು.

ಮೈಷುಗರ್ ಕಾರ್ಯವ್ಯಾಪ್ತಿಗೆ ಬರುವ ಕಬ್ಬನ್ನು‌ ಬೇರೆ ಕಾರ್ಖಾನೆಯವರು ಕಟಾವು ಮಾಡದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೇರೆ ಕಡೆಗೆ ಸಾಗಾಣಿಕೆಯಾಗುತ್ತಿದ್ದಲ್ಲಿ ವಶ ಪಡಿಸಿಕೊಳ್ಳಲು ಕ್ರಮ ವಹಿಸಿ ಎಂದು ಸೂಚಿಸಿದರು.

ರೈತರಿಂದ ಕಬ್ಬು ಖರೀದಿಸಿ ನಿಗದಿತ ಅವಧಿಯೊಳಗೆ ಪಾವತಿ ಮಾಡಿ. ಇದರಿಂದ ರೈತರಲ್ಲಿ ಕಾರ್ಖಾನೆಯ ಬಗ್ಗೆ ವಿಶ್ವಾಸ ಹೆಚ್ಚಳವಾಗಿ ಮೈಷುಗರ್ ಸಕ್ಕರೆ ಕಾರ್ಖಾನೆಗೆ ಕಬ್ಬನ್ನು ನೀಡುತ್ತಾರೆ ಎಂದು ಅವರು ಸಲಹೆ ಮಾಡಿದರು.
ಸೆ.30 ರ ನಂತರ ಮುಖ್ಯಮಂತ್ರಿಗಳನ್ನು  ಸಕ್ಕರೆ ಕಾರ್ಖಾನೆಗೆ ಆಹ್ವಾನಿಸಿ, ಇಲ್ಲಿಯ ಎಲ್ಲಾ ಘಟಕಗಳ ಕಾರ್ಯನಿರ್ವಾಹಣೆಯನ್ನು  ಪರಿಚಯಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಖುದ್ದು ಸೆ.30 ರೊಳಗಾಗಿ ಸಕ್ಕರೆ ಕಾರ್ಖಾನೆಗೆ ಭೇಟಿ‌ ನೀಡಿ ಪರಿಶೀಲಿಸುತ್ತೇನೆ ಎಂದರು.

ಸಕ್ಕರೆ ಕಾರ್ಖಾನೆ ಪುನರರಾಂಭಗೊಂಡಿರುವುದರಿಂದ ಸಣ್ಣ ಪುಟ್ಟ ತೊಂದರೆಗಳು ಉಂಟಾಗಬಹುದು. ಅವುಗಳನ್ನು ಸರಿಪಡಿಸಿಕೊಂಡು‌ ಪೂರ್ಣ ಪ್ರಮಾಣದಲ್ಲಿ ಚಾಲನೆಗೊಳ್ಳಬೇಕು‌  ಎಂದು‌ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ: ನಾರಾಯಣಗೌಡ ಕೆ.ಸಿ ಅವರು ತಿಳಿಸಿದರು.

ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಅವರು ಸಕ್ಕರೆ ಕಾರ್ಖಾನೆಯ‌ ಕಾರ್ಯನಿರ್ವಹಣೆಯ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಕ್ರಮಗಳ ಬಗ್ಗೆ ಸಚಿವರಿಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಾಯಪುರ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಾಂತಾ ಎಲ್.ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉಪವಿಭಾಗಾಧಿಕಾರಿ ಆರ್.ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X