ವಿಜಯಪುರ | ಬೈಕಿಗೆ ಅಪರಿಚಿತ ವಾಹನ ಢಿಕ್ಕಿ: ಮೂವರು ಯುವಕರು ಮೃತ್ಯು

ವಿಜಯಪುರ, ಸೆ.18: ಬೈಕಿಗೆ ಅಪರಿಚಿತ ವಾಹನ ಢಿಕ್ಕಿ (Accident) ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಜಗ್ಗು ಲಕಡಿ(23), ಸಂತೋಷ ಬಿರಾದಾರ(23) ಹಾಗೂ ಈಶ್ವರ ಸಿಂಧೆ(24) ಎಂದು ಗುರುತಿಸಲಾಗಿದೆ.
ಗೆಳೆಯರಾದ ಈ ಮೂವರು ಕಳೆದ ರಾತ್ರಿ ಊಟ ಮುಗಿಸಿಕೊಂಡು ಒಂದೇ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಇವರು ಸಂಚರಿಸುತ್ತಿದ್ದ ವೇಳೆ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸಂಪೂರ್ಣ ಜಖಂಗೊಂಡಿದೆ.
ಈ ಬಗ್ಗೆ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





