Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಧಾನಿ ಮೋದಿ ಪ್ರಾಜೆಕ್ಟ್ ಚೀತಾ...

ಪ್ರಧಾನಿ ಮೋದಿ ಪ್ರಾಜೆಕ್ಟ್ ಚೀತಾ ತಂಡದಲ್ಲಿ ವನ್ಯಜೀವಿ ತಜ್ಞ ಪುತ್ತೂರಿನ ಸನತ್ ಕೃಷ್ಣ ಮುಳಿಯ

ವಾರ್ತಾಭಾರತಿವಾರ್ತಾಭಾರತಿ18 Sept 2022 8:36 PM IST
share
ಪ್ರಧಾನಿ ಮೋದಿ ಪ್ರಾಜೆಕ್ಟ್ ಚೀತಾ ತಂಡದಲ್ಲಿ ವನ್ಯಜೀವಿ ತಜ್ಞ ಪುತ್ತೂರಿನ ಸನತ್ ಕೃಷ್ಣ ಮುಳಿಯ

ಪುತ್ತೂರು: ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬದಂದೇ ಆಫ್ರಿಕಾದ ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾದ ಎಂಟು ಚೀತಾಗಳ ಪಯಣದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವ ವನ್ಯಜೀವಿ ತಜ್ಞ ಸನತ್ ಕೃಷ್ಣ ಮುಳಿಯ ಪ್ರಮುಖ ಪಾತ್ರ ವಹಿಸಿದ್ದಾರೆ.

ಕೇಂದ್ರ ಪರಿಸರ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಶನಲ್ ಜಿಯಾಲಜಿಕಲ್ ಪಾಕ್೯ನಲ್ಲಿ ಡೆಪ್ಯುಟಿ ಸೆಕ್ರೆಟರಿ ಆಗಿ ಕಳೆದ ಆರು ತಿಂಗಳಿಂದ ಕೆಲಸ ಮಾಡುತ್ತಿರುವ ಸನತ್ ಕೃಷ್ಣ ಅವರು ಪ್ರಾಜೆಕ್ಟ್ ಚೀತಾ ತಂಡಕ್ಕೆ ಆಯ್ಕೆಯಾಗಿದ್ದರು.

ವನ್ಯಜೀವಿ ಮತ್ತು ಅರಿವಳಿಕೆ ಕ್ಷೇತ್ರದಲ್ಲಿ  ತಜ್ಞರಾಗಿರುವ ಇವರು, ವೈಲ್ಡ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡಿದ್ದರು. ಆಫ್ರಿಕಾದ ಬೋಸ್೯ವಾನಾದಲ್ಲಿ ಒಂದೂವರೆ ವರ್ಷಗಳ ಕಾಲ‌ ವನ್ಯಜೀವಿಗಳ ಬಗ್ಗೆ ಇವರು ಅಧ್ಯಯನ, ಸಂಶೋಧನೆ, ವ್ಯಾಸಂಗ ಮಾಡಿದ ಅನುಭವ ಪ್ರಾಜೆಕ್ಟ್ ಚೀತಾಕ್ಕೆ ಆಯ್ಕೆಯಾಗಲು ಸಹಕಾರಿಯಾಗಿದೆ.

ಪುತ್ತೂರಿನ ಪ್ರತಿಷ್ಠಿತ ಮುಳಿಯ ಮನೆತನದ ದಿ. ಕೇಶವ ಭಟ್ ಮುಳಿಯ ಮತ್ತು ಉಷಾ ದಂಪತಿಯ ಪುತ್ರ ಸನತ್ ಕೃಷ್ಣ  ಪುತ್ತೂರು ನಗರದ ಕೊಂಬೆಟ್ಟು ಎಂಬಲ್ಲಿ ತನ್ನ ತಾಯಿ ಜತೆ ವಾಸವಿದ್ದು, ಆಗಾಗ ದೆಹಲಿಯಿಂದ ಬಂದು ತಾಯಿ ಜತೆ ಸಮಯ ಕಳೆಯುತ್ತಾರೆ. ಅವರು ಡೆಹ್ರಾಡೂನ್ ಮೂಲದ ಪ್ರಿಯಾಂಕಾ ಎಂಬ ವನ್ಯಜೀವಿ ತಜ್ಞೆಯನ್ನು ಮದುವೆಯಾಗಿದ್ದಾರೆ.

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪ್ರೌಢ ಮತ್ತು ಪಿಯುಸಿ ಕಲಿತ ಸನತ್ ಕೃಷ್ಣ ಮುಳಿಯ ಅವರಿಗೆ ಬಾಲ್ಯದಿಂದಲೇ ಪರಿಸರ ಮತ್ತು ವನ್ಯಜೀವಿಗಳ ಬಗ್ಗೆ ಆಸಕ್ತಿ. ಹೀಗಾಗಿ ಮುಳಿಯ ಮನೆತನ ಚಿನ್ನಾಭರಣ ಉದ್ಯಮದಲ್ಲಿ ಪ್ರಸಿದ್ಧರಾಗಿದ್ದರೂ ಸನತ್ ಮಾತ್ರ ಪ್ರಾಣಿಲೋಕದ ಕಡೆಗೆ ಆಸಕ್ತರಾಗಿ ಬೆಂಗಳೂರಿನ ಹೆಬ್ಬಾಳದಲ್ಲಿ ಪಶು ವೈದ್ಯಕೀಯ ಕಲಿತರು. ಅವರ ಆಸಕ್ತಿ,‌ ಪರಿಶ್ರಮ ಇವತ್ತು ದೊಡ್ಡ ಮಟ್ಟಕ್ಕೆ ಕೊಂಡೊಯ್ದಿದೆ ಎನ್ನುತ್ತಾರೆ ಸಂಬಂಧಿಕರಾದ ಕೇಶವ ಭಟ್ ಮುಳಿಯ.

ಆರು ತಿಂಗಳು ಬನ್ನೇರುಘಟ್ಟದಲ್ಲಿ ಕೆಲಸ ಮಾಡಿದ್ದ ಸನತ್, ಎಚ್ ಡಿ ಕೋಟೆಯೂ ಸೇರಿದಂತೆ ನಾಡಿನ ನಾನಾ ಕಡೆ ಹುಲಿ ಮತ್ತಿತರ ವನ್ಯಜೀವಿಗಳ ದಾಳಿ ಸಂದರ್ಭದಲ್ಲಿ ಅರಿವಳಿಕೆ ತಜ್ಞರಾಗಿ ತುರ್ತು ಸೇವೆ ಸಲ್ಲಿಸಿದ್ದರು. ಅಮೆರಿಕಾದಲ್ಲೂ ಒಂದಷ್ಟು ಸಮಯ ವನ್ಯಜೀವಿ ಅಧ್ಯಯನ, ಸೇವೆ ಸಲ್ಲಿಸಿದ್ದಾರೆ.

ಸನತ್ ಕೃಷ್ಣ ಪರಿಣತಿ ಗಮನಿಸಿ ದೆಹಲಿಯ ನ್ಯಾಶನಲ್ ಜಿಯಾಲಜಿಕಲ್ ಪಾಕ್೯ನಲ್ಲಿ ಉದ್ಯೋಗ ನೀಡಲಾಗಿತ್ತು. ಪ್ರಸ್ತುತ ಆಫ್ರಿಕಾದಿಂದ ಎಂಟು ಚೀತಾಗಳನ್ನು ತರುವ ಸಂದರ್ಭ ಅರಿವಳಿಕೆ ತಜ್ಞರಾಗಿ ಸೇವೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X