Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನದಲ್ಲಿ ರೋಗ, ಸಾವಿನ ಅಲೆ...

ಪಾಕಿಸ್ತಾನದಲ್ಲಿ ರೋಗ, ಸಾವಿನ ಅಲೆ ಸಾಧ್ಯತೆ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ18 Sept 2022 9:38 PM IST
share
ಪಾಕಿಸ್ತಾನದಲ್ಲಿ ರೋಗ, ಸಾವಿನ ಅಲೆ ಸಾಧ್ಯತೆ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಇಸ್ಲಾಮಾಬಾದ್, ಸೆ.18: ಪಾಕಿಸ್ತಾನದಲ್ಲಿ ವಿನಾಶಕಾರಿ ಪರಿಣಾಮಕ್ಕೆ ಕಾರಣವಾದ ಭೀಕರ ಪ್ರವಾಹದ ಬಳಿಕ ಇದೀಗ ಆ ದೇಶ 2ನೇ ದುರಂತದ ಹೊಸ್ತಿಲಲ್ಲಿದೆ. ಅಲ್ಲಿ ಈಗ ರೋಗ ಹಾಗೂ ಸಾವಿನ ಅಲೆಯ ಭೀತಿ ಹೆಚ್ಚಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರಾಸ್ ಅಧನಾಮ್ ಘೆಬ್ರಯೇಸಸ್ ಹೇಳಿದ್ದಾರೆ.

‘ಸಾವಿನ ಅಲೆ’ಯ ಹಿನ್ನೆಲೆಯಲ್ಲಿ ದೇಶದ ಬಹುತೇಕ ಆರೋಗ್ಯ ಕೇಂದ್ರಗಳು ನೆರೆ ನೀರಲ್ಲಿ ಮುಳುಗಿದ್ದು ಆರೋಗ್ಯ ಸೇವೆ ಪೂರೈಕೆಗೆ ಅಡ್ಡಿಯಾಗಿದೆ. ಹಲವಾರು ಮಂದಿ ತಮ್ಮ ಮನೆ ತೊರೆದು ಪರಿಹಾರ ಶಿಬಿರಕ್ಕೆ ಸ್ಥಳಾಂತರಗೊಂಡಿದ್ದಾರೆ. ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪ್ರವಾಹ ದುರಂತದ ಬಳಿಕ , ಲಕ್ಷಾಂತರ ಬಡ ಮತ್ತು ದುರ್ಬಲ ಜನರಿಗೆ ಅತೀ ಹೆಚ್ಚಿನ ಪರಿಣಾಮ ಬೀರಲಿರುವ ರೋಗಗಳು ಹಾಗೂ ಸಾವಿನ ಅಲೆಯ ಮತ್ತೊಂದು ದುರಂತದ ಅಪಾಯದ ಬಗ್ಗೆ ಆತಂಕಗೊಂಡಿದ್ದೇನೆ ಎಂದು ಘೆಬ್ರಯೇಸಸ್ ಹೇಳಿದ್ದಾರೆ.

 ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿರುವುದರಿಂದ ಜನತೆ ಅಸುರಕ್ಷಿತ ನೀರನ್ನು ಕುಡಿಯುವ ಅನಿವಾರ್ಯತೆಯಿದೆ. ಇದು ಕಾಲೆರಾ ಮತ್ತಿತರ ಅತಿಸಾರ ಕಾಯಿಲೆ ಹರಡುವುದಕ್ಕೆ ಕಾರಣವಾಗಬಹುದು. ತಗ್ಗು ಪ್ರದೇಶದಲ್ಲಿ ಸಂಗ್ರಹವಾಗಿರುವ ನೀರು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಲೇರಿಯಾ, ಡೆಂಗ್ಯೂ ಮುಂತಾದ ವಾಹಕಗಳಿಂದ ಹರಡುವ ರೋಗಗಳನ್ನು ಪ್ರಸಾರಿಸಬಹುದು . ಪಾಕಿಸ್ತಾನದಲ್ಲಿನ ದುರಂತ ಪ್ರವಾಹ ಹೆಚ್ಚು ಅಸುರಕ್ಷಿತ ಜನನ, ಮಧುಮೇಹ ಅಥವಾ ಹೃದ್ರೋಗಕ್ಕೆ ಚಿಕಿತ್ಸೆಯ ಅಲಭ್ಯತೆ ಹಾಗೂ ಅತ್ಯಧಿಕ ಮಕ್ಕಳನ್ನು ಲಸಿಕೆಯಿಂದ ವಂಚಿತಗೊಳಿಸಬಹುದು ಎಂದವರು ಹೇಳಿದ್ದಾರೆ.

ಈ ಮಧ್ಯೆ, ಕೊಳಕು ನೀರಿನಿಂದ ಅಪಾಯಗಳನ್ನು ಕಡಿಮೆ ಮಾಡಲು ಸುರಕ್ಷಿತ ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ ಎಂದು ಪಾಕ್ ಸರಕಾರ ಹೇಳಿದೆ.

2,000 ಆರೋಗ್ಯ ಕೇಂದ್ರಗಳಿಗೆ ಹಾನಿ

ವಿನಾಶದ ನಡುವೆ ಪಾಕಿಸ್ತಾನದ ಆರೋಗ್ಯ ಕಾರ್ಯಕರ್ತರು ಪ್ರಮುಖ ಆರೋಗ್ಯ ಸೇವೆಯನ್ನು ಜನತೆಗೆ ತಲುಪಿಸಲು ತಮ್ಮ ಗರಿಷ್ಠ ಪ್ರಯತ್ನ ನಡೆಸುತ್ತಿದ್ದಾರೆ. ದೇಶದ ಸುಮಾರು 2,000 ಆರೋಗ್ಯ ಕೇಂದ್ರಗಳಿಗೆ ಹಾನಿಯಾಗಿದ್ದು ಕೆಲವು ಸಂಪೂರ್ಣ ನಾಶವಾಗಿದೆ. ಪಾಕಿಸ್ತಾನದ ಸರಕಾರ, ವಿಶ್ವಸಂಸ್ಥೆ ಮತ್ತು ಎನ್‌ಜಿಒ ನೆರವಿನೊಂದಿಗೆ ವಿಶ್ವ ಆರೋಗ್ಯ ಸಂಸ್ಥೆ ತಾತ್ಕಾಲಿಕ ಆರೋಗ್ಯ ಕೇಂದ್ರ ಹಾಗೂ ವೈದ್ಯಕೀಯ ಶಿಬಿರಗಳನ್ನು ವ್ಯವಸ್ಥೆ ಮಾಡಿದೆ. ಆರೋಗ್ಯ ಸಂಸ್ಥೆಗಳಿಗೆ ಔಷಧ ಹಾಗೂ ಇತರ ವ್ಯವಸ್ಥೆಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಅತಿಸಾರ ರೋಗಗಳನ್ನು ನಿಯಂತ್ರಿಸಲು ನೀರಿನ ಶುದ್ಧೀಕರಣ ಕಿಟ್‌ಗಳು ಹಾಗೂ ಮೌಖಿಕ ಪುನರ್ಜಲೀಕರಣ ಲವಣಗಳನ್ನು ಒದಗಿಸಿದೆ ಎಂದು ಘೆಬ್ರಯೇಸಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X