Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ರಾಹ್ಮಣ್ಯದ ಉಳಿವಿಗಾಗಿ ಐಕ್ಯದೊಂದಿಗೆ...

ಬ್ರಾಹ್ಮಣ್ಯದ ಉಳಿವಿಗಾಗಿ ಐಕ್ಯದೊಂದಿಗೆ ಶ್ರಮಿಸೋಣ: ಅಶೋಕ ಹರ್ನಹಳ್ಳಿ

ಕೂಟ ಮಹಾಜಗತ್ತು ಸಾಲಿಗ್ರಾಮದಿಂದ ಕೇಂದ್ರೀಯ ಮಹಾಧಿವೇಶನ

ವಾರ್ತಾಭಾರತಿವಾರ್ತಾಭಾರತಿ19 Sept 2022 3:55 PM IST
share
ಬ್ರಾಹ್ಮಣ್ಯದ ಉಳಿವಿಗಾಗಿ ಐಕ್ಯದೊಂದಿಗೆ ಶ್ರಮಿಸೋಣ: ಅಶೋಕ ಹರ್ನಹಳ್ಳಿ

ಸುರತ್ಕಲ್, ಸೆ.19: ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಬ್ರಾಹ್ಮಣ ಸಂಘಟನೆಯನ್ನು ಬಲಪಡಿಸಿ ಬ್ರಾಹ್ಮಣ್ಯದ ಉಳಿವಿನತ್ತ ಐಕ್ಯದೊಂದಿಗೆ ಶ್ರಮಿಸೋಣ ಎಂದು ಆಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ ಹರ್ನಹಳ್ಳಿ ಕರೆ ನೀಡಿದ್ದಾರೆ.

ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ(ರಿ) ಕೇಂದ್ರ ಸಂಸ್ಥೆ ಮತ್ತು ಕಾಟಿಪಳ್ಳ ಕೃಷ್ಣಾಪುರ ಅಂಗ ಸಂಸ್ಥೆಯ ಸಹಭಾಗಿತ್ವದಲ್ಲಿ ರವಿವಾರ ನಡೆದ ಕೇಂದ್ರೀಯ ಮಹಾಧಿವೇಶನ ಮತ್ತು 69ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಆಧುನೀಕತೆಯೊಂದಿಗೆ ಹಿಂದೂ ಹಾಗೂ ಪೌರಾಣಿಕ ಹಿನ್ನೆಲೆಯ ಸನಾತನ ಸಂಸ್ಕೃತಿಯ ಮುಂದುವರಿಕೆ ಅಗತ್ಯ. ಯುವ ಸಮುದಾಯ ಬ್ರಾಹ್ಮಣತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ಸಂಘಟಿತರಾಗಿ ರೂಪಿಸಿಕೊಳ್ಳಬೇಕಾಗಿದೆ ಎಂದವರು ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊಸ್ತಿಲಲ್ಲಿದ್ದ ನಾವು ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಾಹ್ಮಣದ ಕೊಡುಗೆ ಅನನ್ಯವಾಗಿದ್ದು ಮುಂದಿನ ಗಾಂಧಿ ಜಯಂತಿಯಂದು ಸ್ವಾತಂತ್ರ್ಯದ ಹೋರಾಟದ ಕೊಡುಗೆಯಾಗಿ ನಮ್ಮ ಸಮಾಜದ ಎಲ್ಲ  ಸ್ತರದ ಸಂಘಟನೆಯ ಒಗ್ಗೂಡುವಿಕೆಯೊಂದಿಗೆ ವಿಪ್ರ ಸಂಗಮ ಹಾಗೂ  ವಿಶಿಷ್ಟ ಕಾರ್ಯಕ್ರಮ ಹಾಗೂ ನಡಿಗೆ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಕೇಂದ್ರ ಸರಕಾರವು ಸಂವಿಧಾನ  ತಿದ್ದುಪಡಿ ಮೂಲಕ ಆರ್ಥಿಕವಾಗಿ ದುರ್ಬಲರಾದವರಿಗೆ ಮೀಸಲಾತಿ ಪ್ರಕಟಿಸಿದ್ದು ಈ ಮೀಸಲಾತಿಯ ಅನುಕೂಲತೆಗಳು ಇನ್ನು ಕೂಡ ಬ್ರಾಹ್ಮಣ ಸಮುದಾಯಕ್ಕೆ ಬಂದಿಲ್ಲ ಎಂದು ಖೇದ ವ್ಯಕ್ತಪಡಿಸಿದ ಅವರು ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆಗೆ ಸಾಕಷ್ಟು ಚರ್ಚಿಸಿದರೂ ಫಲಪ್ರದವಾಗಿಲ್ಲ. ಈ ಬಗ್ಗೆ ಹೋರಾಟ ಆನಿವಾರ್ಯ ಎಂದರು.

ಮಹಾಧಿವೇಶನದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಅಂಗಸಂಸ್ಥೆಯ ಅಧ್ಯಕ್ಷ ಎಚ್.ಸತೀಶ್ ಹಂದೆ ಮಾತನಾಡಿ ಅಧೀವೇಶನ ಯಶಸ್ವಿಯಾಗಿಸಲು ಸಹಕರಿಸದ ಸರ್ವರನ್ನು ಸ್ಮರಿಸಿದರು. ಮುಂದಿನ ದಿನಗಳಲ್ಲಿ ಕೂಟ ಮಹಾಜಗತ್ತು ಐಕ್ಯ ಮನೋಭಾವದಿಂದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ವೇ.ಮೂ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯ ದೀಪ ಪ್ರಜ್ವಲನೆಗೈದರು.

ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಅಡಳಿತ ಮಂಡಳಿಯ ಅಧ್ಯಕ್ಷ ಕೆ.ಎಸ್.ಕಾರಂತ, ಸದಸ್ಯ ಪಿ.ಸದಾಶಿವ ಐತಾಳ್, ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್., ಮಾಜಿ ಅಧ್ಯಕ್ಷ  ಜಯರಾಮ್ ಭಟ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ಕುಳಾಯಿ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಅಡಳಿತ ಮೊಕ್ತೇಸರ ಕೃಷ್ಣ ಹೆಬ್ಬಾರ್, ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅಡಳಿತ ಮೊಕ್ತೇಸರ ಐ.ರಮಾನಂದ ಭಟ್ ಇವರನ್ನು ಸನ್ಮಾನಿಸಲಾಯಿತು. 

ಜ್ಯೋತಿಷಿ ಕೆ.ಸಿ ನಾಗೇಂದ್ರ ಭಾರಾಧ್ವಾಜ್, ಮುಕ್ಕ ಶ್ರೀ ಸತ್ಯಧರ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಐತಾಳ್, ಉದ್ಯಮಿ ರಘನಾಥ ಸೋಮಾಯಾಜಿ, ವಿಶ್ವೇಶ್ವರ ಬದವಿದೆ, ಕೇಂದ್ರ ಅಂಗ ಸಂಸ್ಥೆಯ ಉಪಾಧ್ಯಕ್ಷ ಇ.ಗೋಪಾಲಕೃಷ್ಣ ಹೇರಳೆ, ಬಿ.ಚಂದ್ರಶೇಖರ ಐತಾಳ್, ಎಸ್.ವಿ.ರಮೇಶ್ ರಾವ್, ಕೂಟ ಮಹಾಜಗತ್ತು ಕಾಟಿಪಳ್ಳ ಕೃಷ್ಣಾಪುರ ಅಂಗಸಂಸ್ಥೆಯ ಅಧ್ಯಕ್ಷ ಕೆ.ಶ್ಯಾಮ್ ಸುಂದರ್ ರಾವ್, ಮಹಿಳಾ ವೇದಿಕೆಯ ಅಧ್ಯಕ್ಷೆ ವಾಣಿ ಎಸ್. ಐತಾಳ್, ಪಿ.ಪುರುಷೋತ್ತಮ ರಾವ್, ಸಂತೋಷ್ ಐತಾಳ್, ಶಂಕರನಾರಾಯಣ ಮೈರ್ಪಾಡಿ, ಯಜ್ಞೇಶ ಐತಾಳ್ ಕುಳಾಯಿ, ರಾಘವೇಂದ್ರ ಹೆಬ್ಬಾರ್, ಸದಾಶಿವ ಕಾರಂತ್, ಪರಮೇಶ್ವರ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.

ಯಮುನಾಪಿ ರಾವ್, ಜಯಂತಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X