Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಮಶಾನ ಕಾರ್ಮಿಕರಿಗೆ ಖಾಯಂ ಸಮಾನ ವೇತನ:...

ಸ್ಮಶಾನ ಕಾರ್ಮಿಕರಿಗೆ ಖಾಯಂ ಸಮಾನ ವೇತನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ19 Sept 2022 7:54 PM IST
share
ಸ್ಮಶಾನ ಕಾರ್ಮಿಕರಿಗೆ ಖಾಯಂ ಸಮಾನ ವೇತನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ‘ರಾಜ್ಯದ ವಿವಿಧ ಸ್ಮಶಾನಗಳಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಖಾಯಂ ಸಮಾನ ವೇತನ ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸಬೇಕು' ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸ್ಮಶಾನ ಕಾರ್ಮಿಕರರೊಂದಿಗೆ ಸಭೆ ನಡೆಸಿ ಅವರ ಕುಂದು-ಕೊರತೆಗಳನ್ನು ಆಲಿಸಿದ ಬಳಿಕ ಅವರು, ‘ಸ್ಮಶಾನ ಕಾರ್ಮಿಕರು ಸ್ಮಶಾನಗಳಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾರ್ಮಿಕ ವರ್ಗವಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 200 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೇವಲ ಇಬ್ಬರು ಮಾತ್ರ ಖಾಯಂ ಸಿಬ್ಬಂದಿಯಾಗಿದ್ದಾರೆ. ಉಳಿದ 148 ಸಿಬ್ಬಂದಿ ನೇರ ವೇತನ ಪಡೆಯುತ್ತಿದ್ದು ಅವರನ್ನು ಖಾಯಂಗೊಳಿಸುವ ಅಥವಾ ಅವರಿಗೆ ಖಾಯಂ ಹುದ್ದೆಯ ಸಮಾನ ವೇತನ ನೀಡುವ ಬಗ್ಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

‘ಅಲ್ಲದೆ, ಪ್ರತಿ ಕಂದಾಯ ಗ್ರಾಮಕ್ಕೊಂದು ಸ್ಮಶಾನ ಇರಬೇಕೆಂದು ಪ್ರಸ್ತಾವನೆ ಇದೆ. ಮಹಾನಗರ ಪಾಲಿಕೆಗಳು, ನಗರಸಭೆ, ಪಟ್ಟಣ ಪಂಚಾಯ್ತಿ, ಪುರಸಭೆ, ಗ್ರಾಮ ಪಂಚಾಯ್ತಿಗಳಲ್ಲಿನ ಸ್ಮಶಾನಗಳಲ್ಲಿ ಕೆಲಸ ನಿರ್ವಹಿಸುವವರ ಮಾಹಿತಿಯನ್ನು ಕ್ರೋಡೀಕರಿಸಿ ಅವರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸುವ ಸಂಬಂಧ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಹಾಗೂ ಈ ಸಂಬಂಧ ಶೀಘ್ರವೇ ಸಂಬಂಧಿಸಿದ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಅವರು ಭರವಸೆ ನೀಡಿದರು.

‘ಸ್ಮಶಾನ ಕಾರ್ಮಿಕರಿಗೆ ವಸತಿ ಯೋಜನೆ, ಅವರ ಮಕ್ಕಳಿಗೆ ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವ ಹಾಗೂ ಪಡಿತರ ವಿತರಣೆ ಸಂಬಂಧ ಯೋಜನೆಗಳನ್ನು ರೂಪಿಸುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯಸ್ಥಾಪಕ ನಿರ್ದೇಶಕ ಕೆ.ಎಂ.ಸುರೇಶ್, ಅಲೆಮಾರಿ ಕೋಶದ ವಿಶೇಷಾಧಿಕಾರಿ ಡಾ.ದೇವರಾಜ್, ಪಂಚಾಯತ್ ರಾಜ್ ಇಲಾಖೆ ನಿರ್ದೇಶಕಿ ಶಿಲ್ಪಾ ಶರ್ಮಾ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಮಂಜುಶ್ರೀ, ಸ್ಮಶಾನ ಕಾರ್ಮಿಕರ ಸಂಘದ ಅಧ್ಯಕ್ಷ ಅಂತೋಣಿ, ಕಾರ್ಯದರ್ಶಿ ಶೌರಿರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X