Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಹಿಜಾಬ್ ತನ್ನ ಧರ್ಮಕ್ಕೆ ಪೂರಕ ಎಂದು...

“ಹಿಜಾಬ್ ತನ್ನ ಧರ್ಮಕ್ಕೆ ಪೂರಕ ಎಂದು ಮುಸ್ಲಿಂ ಮಹಿಳೆ ಭಾವಿಸಿದರೆ ಅಲ್ಲ ಎಂದು ಯಾವುದೇ ಅಧಿಕಾರ ಹೇಳುವಂತಿಲ್ಲ”

ಸುಪ್ರೀಂ ಕೋಟ್‌ನಲ್ಲಿ ವಕೀಲ ದುಷ್ಯಂತ ದವೆ ವಾದ

ವಾರ್ತಾಭಾರತಿವಾರ್ತಾಭಾರತಿ19 Sept 2022 8:59 PM IST
share
“ಹಿಜಾಬ್ ತನ್ನ ಧರ್ಮಕ್ಕೆ ಪೂರಕ ಎಂದು ಮುಸ್ಲಿಂ ಮಹಿಳೆ ಭಾವಿಸಿದರೆ ಅಲ್ಲ ಎಂದು ಯಾವುದೇ ಅಧಿಕಾರ ಹೇಳುವಂತಿಲ್ಲ”

ಹೊಸದಿಲ್ಲಿ,ಸೆ.19: ಮುಸ್ಲಿಂ ಮಹಿಳೆಯೋರ್ವಳು ಹಿಜಾಬ್ ಧರಿಸುವುದು ತನ್ನ ಧರ್ಮಾಚರಣೆಗೆ ಪೂರಕ ಎಂದು ಭಾವಿಸಿದರೆ ಯಾವುದೇ ಅಧಿಕಾರವಾಗಲೀ ನ್ಯಾಯಾಲಯವಾಗಲೀ ಅದನ್ನು ಅಲ್ಲಗಳೆಯುವಂತಿಲ್ಲ ಎಂದು ಹಿರಿಯ ನ್ಯಾಯವಾದಿ ದುಷ್ಯಂತ ದವೆ ಅವರು ಸೋಮವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರತಿಪಾದಿಸಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ರಾಜ್ಯಸರಕಾರದ ಆದೇಶವನ್ನು ಎತ್ತಿಹಿಡಿದಿರುವ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಹೇಮಂತ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ನಡೆಸುತ್ತಿದೆ.

ವಿಚಾರಣೆಯ ಏಳನೆಯ ದಿನವಾದ ಸೋಮವಾರ ಅರ್ಜಿದಾರರ ಪರ ಹಿರಿಯ ವಕೀಲ ದುಷ್ಯಂತ ದವೆಯವರು ಭಾರತದ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯತೆ,ಸಂವಿಧಾನ ಸಭೆಯ ಚರ್ಚೆಗಳು ಹಾಗು ಸಂವಿಧಾನದ 25ನೇ ವಿಧಿಯಡಿ ಧಾರ್ಮಿಕ ಹಕ್ಕುಗಳ ರಕ್ಷಣೆ ಕುರಿತು ವಿಸ್ತ್ರತ ವಾದಗಳನ್ನು ಮಂಡಿಸಿದರು.

ಮುಸ್ಲಿಂ ಬಾಲಕಿಯರು ಹಿಜಾಬ್ ಧರಿಸುವುದರಿಂದ ಯಾರದೇ ಭಾವನೆಗಳಿಗೆ ನೋವುಂಟಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದ ಅವರು,‘ಹಿಜಾಬ್ ನಮ್ಮ ಅನನ್ಯತೆಯಾಗಿದೆ ’ಎಂದು ಹೇಳಿದರು.

ಮೊದಲು,‘ಲವ್ ಜಿಹಾದ್’ ಕುರಿತು ಸಂಪೂರ್ಣ ವಿವಾದ ಮತ್ತು ಈಗ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಬಾಲಕಿಯರು ಹಿಜಾಬ್ ಧರಿಸುವುದಕ್ಕೆ ತಡೆ; ಇವು ಅಲ್ಪಸಂಖ್ಯಾತ ಸಮುದಾಯವನ್ನು ‘ಮೂಲೆಗುಂಪು ’ಮಾಡುವ ಮಾದರಿಯನ್ನು ಪ್ರತಿಬಿಂಬಿಸುತ್ತಿದೆ ಎಂದರು.

ವಿಧಿ 19 ಮತ್ತು 21ರ ವ್ಯಾಪ್ತಿಯ ವಿಸ್ತರಣೆಯೊಂದಿಗೆ ಸಂವಿಧಾನವನ್ನು ಉದಾರವಾಗಿ ವ್ಯಾಖ್ಯಾನಿಸಬೇಕು ಎಂದು ಪೀಠವನ್ನು ಆಗ್ರಹಿಸಿದ ದವೆ,ಧಾರ್ಮಿಕ ಹಕ್ಕು ವೈಯಕ್ತಿಕವಾಗಿದೆ,ಅದು ವ್ಯಕ್ತಿಗತ ಆಯ್ಕೆಯಾಗಿದೆ ಎಂದು ಪ್ರತಿಪಾದಿಸಿದರು.

ಭಾರತದಲ್ಲಿ ವಿವಿಧ ಧರ್ಮಗಳ ನಡುವೆ ಸಹಬಾಳ್ವೆಯು 5,000 ವರ್ಷಗಳಿಂದಲೂ ಅಸ್ತಿತ್ವದಲ್ಲಿದೆ ಎಂದು ಹೇಳಿದ ಅವರು,ಈ ದೇಶವು ಸುಂದರವಾದ ಸಂಸ್ಕೃತಿಯ ಮೇಲೆ,ಸಂಪ್ರದಾಯಗಳ ಮೇಲೆ ನಿರ್ಮಾಣಗೊಂಡಿದೆ. 5,000 ವರ್ಷಗಳಲ್ಲಿ ಅನೇಕ ಧರ್ಮಗಳನ್ನು ನಾವು ಅಳವಡಿಸಿಕೊಂಡಿದ್ದೇವೆ. ಭಾರತವು ಹಿಂದು,ಬೌದ್ಧ ಮತ್ತು ಜೈನ ಧರ್ಮಗಳಿಗೆ ಜನ್ಮ ನೀಡಿದೆ. ತಾನಾಗಿಯೇ ಇಲ್ಲಿಗೆ ಬಂದ ಇಸ್ಲಾಮನ್ನು ನಾವು ಸ್ವೀಕರಿಸಿದ್ದೇವೆ. ಭಾರತವು ಬ್ರಿಟಿಷರನ್ನು ಹೊರತುಪಡಿಸಿ ಅದನ್ನು ಜಯಿಸದೆ ಜನರು ನೆಲೆಗೊಳ್ಳಲು ಇಲ್ಲಿಗೆ ಬಂದಿದ್ದ ಏಕೈಕ ಸ್ಥಳವಾಗಿದೆ. ಈ ದೇಶವು ಉದಾರ ಸಂಪ್ರದಾಯದ ಮೇಲೆ,ಏಕತೆ ಮತ್ತು ವಿವಿಧತೆಯಲ್ಲಿ ನಿರ್ಮಾಣಗೊಂಡಿದೆ ’ಎಂದು ದವೆ ಹೇಳಿದರು.

ಈ ಪ್ರಕರಣವು ಮೇಲ್ನೋಟಕ್ಕೆ ಸಮವಸ್ತ್ರದ ಕುರಿತಾಗಿದ್ದರೂ ಅದು ನಿಮಗೆ ಅವಕಾಶವಿಲ್ಲ ಎಂದು ಮುಸ್ಲಿಂ ವಿದ್ಯಾರ್ಥಿಗಳಿಗೆ ಹೇಗೆ ಹೇಳುವುದು ಎನ್ನುವುದರ ಕುರಿತೂ ಆಗಿದೆ ಎಂದು ವಾದಿಸಿದ ಅವರು,ಈ ಪ್ರಕರಣವು ನಿಜಕ್ಕೂ ಕಾನೂನಿನ ದುರುಪಯೋಗದ ಕುರಿತಾಗಿದೆ. ನಾವೇನು ಹೇಳುತ್ತೇವೋ ಅದನ್ನೇ ನೀವು ಮಾಡಬೇಕು ಎಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಹೇಳುವ ಕುರಿತಾಗಿದೆ ಎಂದರು.

ವಿಚಾರಣೆಯು ಮಂಗಳವಾರ ಪೂರ್ವಹ್ನ 11 ಗಂಟೆಯಿಂದ ಮತ್ತೆ ಮುಂದುವರಿಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X