Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಒಪ್ಪಂದದ ಖಾತರಿಗೆ ಇರಾನ್ ಆಗ್ರಹ

ಪರಮಾಣು ಒಪ್ಪಂದದ ಖಾತರಿಗೆ ಇರಾನ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Sept 2022 10:23 PM IST
share
ಪರಮಾಣು ಒಪ್ಪಂದದ ಖಾತರಿಗೆ ಇರಾನ್ ಆಗ್ರಹ

ಟೆಹ್ರಾನ್, ಸೆ.19: ಅಮೆರಿಕ ಮತ್ತೊಮ್ಮೆ ಹಿಂದೆ ಸರಿಯುವುದಿಲ್ಲ ಎಂದು ಖಾತರಿಪಡಿಸಿದರೆ ಪರಮಾಣು ಒಪ್ಪಂದದ ಮರುಸ್ಥಾಪನೆಯ ಬಗ್ಗೆ ಇರಾನ್ ಗಂಭೀರ ಕ್ರಮ ಕೈಗೊಳ್ಳಲಿದೆ ಎಂದು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪುನರುಚ್ಚರಿಸಿದ್ದಾರೆ.

2015ರ ಪರಮಾಣು ಒಪ್ಪಂದದ ಮರುಸ್ಥಾಪನೆಗೆ ಅಮೆರಿಕದಿಂದ ಸಶಕ್ತ ಖಾತರಿಯ ಅಗತ್ಯವಿದೆ ಎಂದು ಕಳೆದ ತಿಂಗಳು ಇರಾನ್ ವಿದೇಶಾಂಗ ಸಚಿವರು ಹೇಳಿದ್ದರು. ಅಲ್ಲದೆ,  ಇರಾನ್‍ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿ ರಾಜಕೀಯ ಪ್ರೇರಿತ ತನಿಖೆಯನ್ನು ಕೈಬಿಡುವಂತೆ ವಿಶ್ವಸಂಸ್ಥೆ ಪರಮಾಣು ನಿಗಾ ಸಂಸ್ಥೆಯನ್ನು ಆಗ್ರಹಿಸಿದ್ದರು.

ಇದು ಉತ್ತಮ ವ್ಯವಹಾರ, ನ್ಯಾಯಯುತ ಒಪ್ಪಂದವಾಗಿದ್ದರೆ ನಾವು ಒಪ್ಪಂದ  ಮಾಡಿಕೊಳ್ಳುವ  ಬಗ್ಗೆ ಗಂಭೀರ ಚಿಂತನೆ ನಡೆಸಲಿದ್ದೇವೆ ಎಂದು ರೈಸಿ ಹೇಳಿದ್ದಾರೆ. ಈ ವಾರ ನ್ಯೂಯಾರ್ಕ್‍ನಲ್ಲಿ ನಡೆದ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಒಪ್ಪಂದದ ವಿಷಯದಲ್ಲಿ ಮಾತನಾಡಿದ್ದ ರೈಸಿ` ಅದು ಶಾಶ್ವತವಾಗಿರಬೇಕು. ಖಾತರಿಗಳು ಇರಬೇಕು. ಖಾತರಿ ಇದ್ದರೆ ಅಮೆರಿಕ ಇಷ್ಟಬಂದಂತೆ ಒಪ್ಪಂದದಿಂದ ಹಿಂದೆ ಸರಿಯಲು ಸಾಧ್ಯವಾಗದು' ಎಂದಿದ್ದರು.

`ಒಪ್ಪಂದದ ವಾಗ್ದಾನವನ್ನು ಅಮೆರಿಕ ಉಲ್ಲಂಘಿಸಿದೆ. ಒಪ್ಪಂದದ ಪ್ರಕಾರ, ಅಮೆರಿಕ, ಯುರೋಪಿಯನ್ ಯೂನಿಯನ್ ಮತ್ತು ವಿಶ್ವಸಂಸ್ಥೆಯ ಆರ್ಥಿಕ ನಿರ್ಬಂಧ ಅಂತ್ಯಗೊಳ್ಳಲು ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ನಿರ್ಬಂಧಿಸಬೇಕಿತ್ತು. ನಾವು ಇದರಂತೆಯೇ ನಡೆದಿದ್ದೇವೆ. ಆದರೆ ಅಮೆರಿಕನ್ನರು ಏಕಪಕ್ಷೀಯವಾಗಿ ಒಪ್ಪಂದದಿಂದ ಹೊರಬರುವ ಘೋಷಣೆ ಮಾಡಿದರು. ಈಗ ಮತ್ತೊಮ್ಮೆ ಭರವಸೆ ನೀಡುವುದರಲ್ಲಿ ಅರ್ಥವಿಲ್ಲ. ಅಮೆರಿಕನ್ನರ ಧೋರಣೆ, ವರ್ತನೆಯನ್ನು ನಾವು ಈಗಾಗಲೇ ಅರ್ಥಮಾಡಿಕೊಂಡಿದ್ದೇವೆ, ಅವರ ಮೇಲೆ ವಿಶ್ವಾಸವಿಲ್ಲ. ಖಾತರಿ ಇಲ್ಲದಿದ್ದರೆ ವಿಶ್ವಾಸವಿಲ್ಲ' ಎಂದು ರೈಸಿ ಹೇಳಿದ್ದಾರೆ.

ಪರಮಾಣು ಒಪ್ಪಂದದ ಮರುಸ್ಥಾಪನೆಯ ಉದ್ದೇಶದ ಮಾತುಕತೆ ಆಸ್ಟ್ರಿಯಾದ ರಾಜಧಾನಿ ವಿಯೆನ್ನಾದಲ್ಲಿ ನಡೆಯುತ್ತಿದೆ. ಈ ವರ್ಷದ ಮಾರ್ಚ್ ವೇಳೆ ಮಾತುಕತೆ ಬಹುತೇಕ ಯಶಸ್ವಿಯಾಗಿರುವ ಸೂಚನೆಯಿತ್ತು. ಆದರೆ ಇರಾನ್ ಮತ್ತು ಅಮೆರಿಕ ಕೆಲವು ವಿಷಯಗಳಲ್ಲಿ ಪಟ್ಟು ಹಿಡಿದ ಕಾರಣ ಮಾತುಕತೆ ಅಪೂರ್ಣವಾಗಿದೆ. ಇರಾನ್‍ನ ಮೂರು ಸ್ಥಾವರಗಳಲ್ಲಿ ಯುರೇನಿಯಂ ದಾಸ್ತಾನಿನ ಕುರುಹು ಪತ್ತೆಯಾಗಿರುವ ವಿಷಯದಲ್ಲಿ ವಿಶ್ವಸಂಸ್ಥೆಯ ಪರಮಾಣು ಇಂಧನ ಸಂಸ್ಥೆ ತನ್ನ ತನಿಖೆಯನ್ನು ಅಂತ್ಯಗೊಳಿಸಬೇಕು ಎಂದು ಇರಾನ್ ಷರತ್ತು ಮುಂದಿರಿಸಿದೆ. ಆದರೆ ಇರಾನ್‍ನ ಷರತ್ತುಗಳನ್ನು ಒಪ್ಪಲಾಗದು ಎಂದು ಅಮೆರಿಕ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X