ಶಿವಮೊಗ್ಗ | ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪ: ಇಬ್ಬರು ಶಂಕಿತರ ಬಂಧನ
![ಶಿವಮೊಗ್ಗ | ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪ: ಇಬ್ಬರು ಶಂಕಿತರ ಬಂಧನ ಶಿವಮೊಗ್ಗ | ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪ: ಇಬ್ಬರು ಶಂಕಿತರ ಬಂಧನ](https://www.varthabharati.in/sites/default/files/images/articles/2022/09/20/350143-1663673868.png)
ಶಿವಮೊಗ್ಗ: ನಿಷೇಧಿತ ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.
ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಶಾರೀಕ್ ಸಹಚರರಾದ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ (22) ಮತ್ತು ಶಿವಮೊಗ್ಗ ಸಿದ್ದೇಶ್ವರ ನಗರದ ಯಾಸಿನ್ ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿಷೇಧಿತ ಭಯೋತ್ಪಾದನೆ ಸಂಘಟನೆಯೊಂದಿಗೆ ನಂಟುಹೊಂದಿರುವ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸೆ.19ರಂದು ಇವರನ್ನು ಬಂಧಿಸಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.
ಬಂಧಿತರನ್ನು ಸೆ.20ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆ.29ರವರೆಗೆ ಶಂಕಿತರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ನಡೆಯುತ್ತಿದೆ.
Next Story