Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಮ್ಮ ಸಾರ್ವಭೌಮ ಮಾರ್ಗದಿಂದ...

ನಮ್ಮ ಸಾರ್ವಭೌಮ ಮಾರ್ಗದಿಂದ ವಿಮುಖವಾಗುವುದಿಲ್ಲ ಎಂದ ರಶ್ಯ ಅಧ್ಯಕ್ಷ ಪುಟಿನ್

ವಾರ್ತಾಭಾರತಿವಾರ್ತಾಭಾರತಿ20 Sept 2022 10:49 PM IST
share
ನಮ್ಮ ಸಾರ್ವಭೌಮ ಮಾರ್ಗದಿಂದ ವಿಮುಖವಾಗುವುದಿಲ್ಲ ಎಂದ ರಶ್ಯ ಅಧ್ಯಕ್ಷ ಪುಟಿನ್

ಮಾಸ್ಕೊ, ಸೆ.20: ಅಂತರಾಷ್ಟ್ರೀಯ ವೇದಿಕೆಯಲ್ಲಿ ರಶ್ಯ ತನ್ನ ಸಾರ್ವಭೌಮ ನಡೆಯನ್ನು ಮುಂದುವರಿಸಲಿದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮಂಗಳವಾರ ಹೇಳಿದ್ದಾರೆ. ಕೊರೋನ ಸಾಂಕ್ರಾಮಿಕದ ಕಾರಣದಿಂದ ವಿಶ್ವಸಂಸ್ಥೆಯ ಮಹಾಸಭೆಯ ಅಧಿವೇಶನ 2 ವರ್ಷ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆದಿದ್ದು ಈ ವರ್ಷ ಮತ್ತೆ ಜಾಗತಿಕ ಮುಖಂಡರ ವೈಯಕ್ತಿಕ ಹಾಜರಾತಿ ಮೂಲಕ ನಡೆಯುತ್ತಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೂ ಮುನ್ನ ಸುದ್ಧಿಗಾರರ ಜತೆ ಮಾತನಾಡಿದ ಪುಟಿನ್, ರಶ್ಯದ ಮಟ್ಟಿಗೆ ಹೇಳುವುದಾದರೆ ನಾವು ನಮ್ಮ ಸಾರ್ವಭೌಮ ನಡೆಯಿಂದ ವಿಮುಖವಾಗುವುದಿಲ್ಲ ಎಂದರು. ರಶ್ಯವು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಾಯಂ ಸದಸ್ಯನಾಗಿದ್ದು ಜಾಗತಿಕ ಸಹಕಾರ, ಜಾಗತಿಕ ಸಮಸ್ಯೆಯ ಪರಿಹಾರದ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಮತ್ತು ತೀವ್ರವಾದ ಪ್ರಾದೇಶಿಕ ಸಂಘರ್ಷಗಳ ಇತ್ಯರ್ಥಕ್ಕೆ ಕೊಡುಗೆ ನೀಡುತ್ತದೆ ಎಂದು ಪುಟಿನ್ ಹೇಳಿದ್ದಾರೆ.

  ಈ ವರ್ಷ ರಶ್ಯದ ಪರ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ. ರಶ್ಯಕ್ಕೆ ನೂತನವಾಗಿ ನೇಮಕಗೊಂಡಿರುವ ವಿದೇಶಿ ರಾಯಭಾರಿಗಳನ್ನುದ್ದೇಶಿಸಿ ಮಾತನಾಡಿದ ಪುಟಿನ್, ವಿದೇಶದಲ್ಲಿ ಅಮೆರಿಕದ ಪಾತ್ರದಿಂದ ಜಾಗತಿಕ ಅಭಿವೃದ್ಧಿಗೆ ತೊಡಕಾಗಿದೆ ಎಂದರು. ದುರದೃಷ್ಟವಶಾತ್, ಅಧಿನಾಯಕರು ಎಂಬ ಪಾತ್ರವನ್ನು ಉಳಿಸಿಕೊಳ್ಳಲು ಬಯಸುವವರು ಬಹುಧ್ರುವೀಯ ಪ್ರಪಂಚದ ಅಭಿವೃದ್ಧಿಗೆ ಅಡ್ಡಿಯಾಗಿದ್ದಾರೆ. ಈ ಅಧಿನಾಯಕರು ಲ್ಯಾಟಿನ್ ಅಮೆರಿಕ, ಯುರೋಪ್, ಏಶ್ಯಾ ಮತ್ತು ಆಫ್ರಿಕಾದಲ್ಲಿ ಎಲ್ಲವನ್ನೂ ನಿಯಂತ್ರಣಕ್ಕೆ ಪಡೆದಿದ್ದಾರೆ ಎಂದು ಪಾಶ್ಚಿಮಾತ್ಯ ದೇಶ ಹಾಗೂ ಅಮೆರಿಕವನ್ನು ಪರೋಕ್ಷವಾಗಿ ಉಲ್ಲೇಖಿಸಿ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X