Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೋಪಿಗಳ ರಕ್ಷಣೆಗೆ ಸ್ವತಃ ಗೃಹಸಚಿವರೇ...

ಆರೋಪಿಗಳ ರಕ್ಷಣೆಗೆ ಸ್ವತಃ ಗೃಹಸಚಿವರೇ ನಿಂತರೆ ಪೊಲೀಸರಿಗೆ ಯಾರು ದಿಕ್ಕು?: ದಿನೇಶ್ ಗುಂಡೂರಾವ್

ದ್ವೇಷ ಭಾಷಣ ಪ್ರಕರಣ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ21 Sept 2022 5:46 PM IST
share
ಆರೋಪಿಗಳ ರಕ್ಷಣೆಗೆ ಸ್ವತಃ ಗೃಹಸಚಿವರೇ ನಿಂತರೆ ಪೊಲೀಸರಿಗೆ ಯಾರು ದಿಕ್ಕು?: ದಿನೇಶ್ ಗುಂಡೂರಾವ್

ಬೆಂಗಳೂರು: 'ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ 34 ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದು ಸಮಂಜಸವಲ್ಲ.‌ ಇದು ಸಮಾಜದಲ್ಲಿ ದ್ವೇಷ ಹರಡಲು ಕಿಡಿಗೇಡಿಗಳಿಗೆ ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ. ಈ ಪ್ರಕರಣಗಳನ್ನು ವಾಪಾಸ್ ಪಡೆಯದಂತೆ ಕಾನೂನು ಇಲಾಖೆ ಹಾಗೂ DG&IGP ವರದಿ ನೀಡಿದ್ದಾರೆ. ಆದರೂ ಸರ್ಕಾರ ಈ ಪ್ರಕರಣ ವಾಪಾಸ್ ಪಡೆದಿದೆ' ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಜಗದೀಶ್ ಕಾರಂತ್ ಎಂಬ ವ್ಯಕ್ತಿಯ ವಿರುದ್ಧ ದ್ವೇಷ ಭಾಷಣ ಮಾಡಿದ ಸಂಬಂಧ 4 ಪ್ರಕರಣ ದಾಖಲಾಗಿದೆ. ಸಚಿವ ಅಂಗಾರ ಮನವಿಯಂತೆ ಜಗದೀಶ್ ಕಾರಂತ್ ವಿರುದ್ಧದ ಈ ಎಲ್ಲಾ ಪ್ರಕರಣಗಳನ್ನು ಸರ್ಕಾರ ಕೈಬಿಟ್ಟಿದೆ. ಕಾರಂತ್ ಹೆಬಿಚ್ಯೂಯಲ್ ಅಫೆಂಡರ್. ಇಂತಹ ವ್ಯಕ್ತಿಯ ಪ್ರಕರಣ ಹಿಂಪಡೆದು ಸರ್ಕಾರ ಏನು ಸಂದೇಶ ಕೊಡಲು ಹೊರಟಿದೆ.?'' ಎಂದು ಪ್ರಶ್ನೆ ಮಾಡಿದ್ದಾರೆ. 

'ಹಾವೇರಿಯ ಹಲಗೇರಿಯಲ್ಲಿ ಪೊಲೀಸರ ಮೇಲೆ ಹಲ್ಲೆ‌ ಮಾಡಿದ್ದವರ ವಿರುದ್ಧ ಅಂದಿನ ನಮ್ಮ ಸರ್ಕಾರ ಪ್ರಕರಣ ದಾಖಲಿಸಿತ್ತು. ಈಗ ಗೃಹ ಸಚಿವ ಜ್ಞಾನೇಂದ್ರರೇ ಆ ಪ್ರಕರಣ ಕೈ ಬಿಡುವಂತೆ ಮನವಿ‌ ಮಾಡಿ ಹಿಂಪಡೆಯುವಂತೆ ಮಾಡಿದ್ದಾರೆ.ತಮ್ಮ ಇಲಾಖೆಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ಆರೋಪಿಗಳ ರಕ್ಷಣೆಗೆ ಸ್ವತಃ ಗೃಹಸಚಿವರೇ ನಿಂತರೆ ಪೊಲೀಸರಿಗೆ ಯಾರು ದಿಕ್ಕು?' ಎಂದು ಕಿಡಿಕಾರಿದ್ದಾರೆ. 

'ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುವ ಕಿಡಿಗೇಡಿಗಳು ವಿಷಜಂತುಗಳಿದ್ದಂತೆ. ಯಾವುದೇ ಜವಬ್ಧಾರಿಯುತ ಸರ್ಕಾರ ಇಂತಹ ವಿಷಜಂತುಗಳ ಹುಟ್ಟಡಗಿಸಬೇಕು. ಆದರೆ ಈ ಸರ್ಕಾರ ದ್ವೇಷ ಹರಡುವವರ ಬೆನ್ನಿಗೆ ನಿಂತು ರಕ್ಷಣೆ ನೀಡುತ್ತಿದೆ. ಹೀಗಾದರೆ ಸಮಾಜದಲ್ಲಿ ಶಾಂತಿ ಕಾಪಾಡುವುದಾದರೂ ಹೇಗೆ.? ಸಾಮರಸ್ಯ ಮೂಡುವುದಾದರೂ ಹೇಗೆ.?' ಎಂದು ದಿನೇಶ್ ಗುಂಡೂರಾವ್ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಹಿಂದೂ ಸಮಾಜೋತ್ಸವ, ಜನಜಾಗೃತಿ ಸಮಾವೇಶ ಮತ್ತು ‘ಲವ್‌ ಜಿಹಾದ್‌’ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಕೋಮುದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಗದೀಶ ಕಾರಂತ ಹಾಗೂ ಕೆಲವು ಹಿಂದುತ್ವ ಸಂಘಟನೆಗಳ ಪ್ರಮುಖರ ವಿರುದ್ಧ ದಾಖಲಾಗಿದ್ದ ಒಟ್ಟು 34 ಮೊಕದ್ದಮೆಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

4
ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುವ ಕಿಡಿಗೇಡಿಗಳು ವಿಷಜಂತುಗಳಿದ್ದಂತೆ.

ಯಾವುದೇ ಜವಬ್ಧಾರಿಯುತ ಸರ್ಕಾರ ಇಂತಹ ವಿಷಜಂತುಗಳ ಹುಟ್ಟಡಗಿಸಬೇಕು.

ಆದರೆ ಈ ಸರ್ಕಾರ ದ್ವೇಷ ಹರಡುವವರ ಬೆನ್ನಿಗೆ ನಿಂತು ರಕ್ಷಣೆ ನೀಡುತ್ತಿದೆ.

ಹೀಗಾದರೆ ಸಮಾಜದಲ್ಲಿ ಶಾಂತಿ ಕಾಪಾಡುವುದಾದರೂ ಹೇಗೆ?

ಸಾಮರಸ್ಯ ಮೂಡುವುದಾದರೂ ಹೇಗೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 21, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X