Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಸ್‍ನಲ್ಲಿ ಪರ್ಸ್ ಕಳವು : ಸಿಸಿಕ್ಯಾಮರಾ...

ಬಸ್‍ನಲ್ಲಿ ಪರ್ಸ್ ಕಳವು : ಸಿಸಿಕ್ಯಾಮರಾ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್

ವಾರ್ತಾಭಾರತಿವಾರ್ತಾಭಾರತಿ21 Sept 2022 8:27 PM IST
share
ಬಸ್‍ನಲ್ಲಿ ಪರ್ಸ್ ಕಳವು : ಸಿಸಿಕ್ಯಾಮರಾ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಪುತ್ತೂರು : ಖಾಸಗಿ ಬಸ್ಸೊಂದರಲ್ಲಿ ಮಂಗಳೂರಿನಿಂದ ಪುತ್ತೂರಿಗೆ ಆಗಮಿಸುತ್ತಿದ್ದ  ಪ್ರಯಾಣಿಕ ಮಹಿಳೆಯೊಬ್ಬರ ಹಣವಿದ್ದ ಪರ್ಸನ್ನು ಮತ್ತೋರ್ವ ಮಹಿಳೆ ಅಪಹರಿಸಿದ ಘಟನೆ ಮಂಗಳವಾರ ನಡೆದಿದ್ದು, ಈ  ದೃಶ್ಯವು ಬಸ್ಸಿನ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಸಿಸಿ ಕ್ಯಾಮರದಲ್ಲಿನ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.‌

ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯ ಎಂಬವರು ಪರ್ಸ್ ಕಳೆದುಕೊಂಡವರು. ಇದೀಗ ಅವರು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಪರ್ಸ್ ಕಳ್ಳತನಗೈದ ಮಹಿಳೆಗಾಗಿ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ. ಹುಡುಕಾಟಕ್ಕೆ ಖಾಸಗಿ ಬಸ್ ಬಸ್ಸಿನೊಳಗೆ ಅಳವಡಿಸಿದ್ದ ಸಿಸಿಟಿವಿಯ ದೃಶ್ಯವೇ ಪ್ರಮುಖ ಸಾಕ್ಷಿಯಾಗಿದೆ.

ಸುಕನ್ಯ ಅವರು ಮಂಗಳೂರಿನಿಂದ ಪ್ರತಿದಿನ ಬಸ್ ನಲ್ಲಿ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಬರುತ್ತಿದ್ದಾರೆ. ಸೆ.20ರಂದು ಖಾಸಗಿ ಬಸ್ಸಿನಲ್ಲಿ ಬರುತಿದ್ದಾಗ ಕಲ್ಲಡ್ಕದಲ್ಲಿ ಒಬ್ಬ ಮಹಿಳೆ ಬಸ್‍ಗೆ ಹತ್ತಿ ಅವರ ಪಕ್ಕದಲ್ಲೇ ಕುಳಿತಿದ್ದರು. ಆ ಮಹಿಳೆಯ ನಡೆಗಳಿಂದ ಅನುಮಾನಗೊಂಡ ಸುಕನ್ಯರವರು ತನ್ನ ಬ್ಯಾಗನ್ನು ಒಂದು ಕೈಯಲ್ಲಿ ಹಾಗೂ ಮತ್ತೊಂದು ಕೈಯಲ್ಲಿ ಟೀಫಿನ್ ಬಾಕ್ಸ್ ಹಿಡಿದುಕೊಂಡು ಪುತ್ತೂರು ಪೋಸ್ಟ್ ಆಫೀಸ್ ತಂಗುದಾಣದ ಬಳಿ ಇಳಿದಿದ್ದರು.

ಬಳಿಕ ತಾ.ಪಂ ಗೆ ನಡೆದುಕೊಂಡು ಹೋಗುವಾಗ ಮೆಡಿಕಲ್ ನಲ್ಲಿ ಮಾತ್ರೆ ಖರೀದಿಗೆಂದು ಪರ್ಸ್ ತಡಕಾಡಿದಾಗ ಬ್ಯಾಗ್‍ನ ಜಿಪ್ ಓಪನ್ ಆಗಿ ಪರ್ಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ತಕ್ಷಣವೇ ಅವರು ಬಸ್ಸಿನ ಚಾಲಕರೊಬ್ಬರ ಮೊಬೈಲ್‍ಗೆ ಕರೆ ಮಾಡಿ ತಿಳಿಸಿದ್ದರು. ಅವರು ಈ ಬಸ್ಸಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿರುವ ಬಗ್ಗೆ ಮಾಹಿತಿ  ನೀಡಿದ್ದರು.  ನಂತರ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಸುಕನ್ಯ ಅವರು ಬಸ್ಸಿನಲ್ಲಿ ಸಿಸಿಟಿವಿ ಇರುವ ಬಗ್ಗೆ ಮಾಹಿತಿ ನೀಡಿದ್ದರು. 

ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಕಳ್ಳತನ ಮಾಡುವ ಮಹಿಳೆ ಮಧ್ಯವಯಸ್ಕಳಾಗಿದ್ದು, ಅಷ್ಟು ಪ್ರಯಾಣಿಕರಿದ್ದರೂ ಯಾರಿಗೂ ಅನುಮಾನ ಬರದಂತೆ ಎಲ್ಲರೂ ಇಳಿಯುವ ಸಂದರ್ಭ ನೋಡಿ ಕಳವು ಮಾಡಲಾಗಿದ್ದು, ಇದು ಬಸ್ ನ ಸಿಸಿಟಿವಿಯಲ್ಲಿ ದಾಖಲಾಗಿದೆ.

"ಪ್ರಯಾಣಿಕರ ಭದ್ರತೆಯ ದೃಷ್ಟಿಯಿಂದ ನಾವು ಸಿಸಿಟಿವಿ ಬಸ್ ಗೆ ಹಾಕಿದ್ದೇವೆ. ಬಸ್ ಪ್ರಯಾಣಿಕರಿಂದ ತುಂಬಿರುವಾಗ ಈ ತರಹ ಕಳ್ಳತನಗಳು ಹೆಚ್ಚಾಗಿ ಆಗುತ್ತದೆ. ಪ್ರಯಾಣಿಕರು ಆದಷ್ಟು ತಮ್ಮ ಗಮನ ಜಾಸ್ತಿ ಕೊಡುತ್ತಿರಬೇಕು. ಹಲವು ಪ್ರಕರಣಗಳು ಸಿಸಿಟಿವಿ ಹಾಕಿದ ನಂತರ ಪತ್ತೆಯಾಗಿವೆ" ಎಂದು ಬಸ್ಸು ಮಾಲಕ ಪ್ರಕಾಶ್ ಶೆಟ್ಟಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಸ್ಸಿಗೆ ಸಿಸಿಟಿವಿ ಅಳವಡಿಸಿರುವ ಬಗ್ಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X