Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ನಾಲ್ವರು ಪಿಎಫ್ ಐ...

ಮಂಗಳೂರು | ನಾಲ್ವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದ ಎನ್ ಐಎ

►PFI, SDPI ಕಚೇರಿ, ಮುಖಂಡರ ಮನೆಗಳ ಮೇಲೆ ದಾಳಿ, ಮೊಬೈಲ್ ಫೋನ್ ಗಳು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ22 Sept 2022 11:07 AM IST
share
ಮಂಗಳೂರು | ನಾಲ್ವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದ ಎನ್ ಐಎ

ಮಂಗಳೂರು, ಸೆ.22: ಮಂಗಳೂರು ನಗರ ಹಾಗೂ ಹೊರವಲಯದ ಹಲವೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಮುಖಂಡರ ಮನೆಗಳ ಮೇಲೆ ಗುರುವಾರ ಮುಂಜಾನೆ ಎನ್ ಐಎ(NIA)‌ ದಾಳಿ ನಡೆಸಿದೆ. ಈ ವೇಳೆ ನಾಲ್ವರನ್ನು ವಶಕ್ಕೆ ಪಡೆದಿರುವ ಎನ್ ಐಎ‌, ಮನೆಮಂದಿಯ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಇದೇವೇಳೆ ಮಂಗಳೂರಿನಲ್ಲಿರುವ PFI, SDPI ಕಚೇರಿಯ ಮೇಲೂ ದಾಳಿ ನಡೆಸಿರುವ NIA ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು ತಾಲೂಕಿನ ಕಂಕನಾಡಿ, ಹಳೆಯಂಗಡಿ, ಜೋಕಟ್ಟೆ, ಕಾವೂರಿನಲ್ಲಿರುವ ಪಿಎಫ್ಐ ನಾಯಕರ ಮನೆಗಳು ಹಾಗೂ ನಗರದಲ್ಲಿರುವ ಎಸ್.ಡಿ.ಪಿ.ಐ.(SDPI) ಕಚೇರಿಗೆ ಗುರುವಾರ ಬೆಳಗ್ಗಿನ ಜಾವ 3:30ರ ಸುಮಾರಿಗೆ ಏಕಕಾಲದಲ್ಲಿ ದಾಳಿ ಮಾಡಿದ ಎನ್ಐಎ ಅಧಿಕಾರಿಗಳ ತಂಡ ಮನೆಗಳನ್ನು ಜಾಲಾಡಿದೆ. ಅಲ್ಲದೆ, ಮನೆಯಲ್ಲಿದ್ದ ಎಲ್ಲಾ ಸದಸ್ಯರ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದೆ.

ಪಿಎಫ್ಐ ಮುಖಂಡರಾದ ಕಾವೂರು ನಿವಾಸಿ ನವಾಝ್, ಬಜ್ಪೆ ಜೋಕಟ್ಟೆಯ ಎ.ಕೆ.ಅಶ್ರಫ್, ಹಳೆಯಂಗಡಿಯ ಮೊಯ್ದಿನ್ ಹಾಗೂ ಕಂಕನಾಡಿ ನಿವಾಸಿ ಅಶ್ರಫ್ ಎಂಬವರ‌ ಮನೆಗಳ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿದ್ದ ನವಾಝ್, ಎ.ಕೆ.ಅಶ್ರಫ್, ಮೊಯ್ದಿನ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಕೆಲಸ ನಿಮಿತ್ತ ದಿಲ್ಲಿಗೆ ತೆರಳಿದ್ದ ಕಂಕನಾಡಿಯ ಅಶ್ರಫ್ ಎಂಬವರನ್ನು ಅಲ್ಲಿಯೇ ವಶಕ್ಕೆ ಪಡೆದುಕೊಂಡಿದೆ‌ ಎಂದು ತಿಳಿದು ಬಂದಿದೆ.

ಹಳೆಯಂಗಡಿ ನಿವಾಸಿ ಪಿಎಫ್ಐ ಮುಖಂಡ ಮೊಯ್ದಿನ್ ಅವರ ಮನೆಯ ಮೇಲೆ ದಾಳಿ ಮಾಡಿದ ತಂಡ, ಅದೇ ಸಮಯದಲ್ಲಿ ಅವರ ತಾಯಿಯ ಮನೆಗೂ ದಾಳಿ ಮಾಡಿದೆ. ಈ ವೇಳೆ ಎರಡೂ ಮನೆಯನ್ನು ಜಾಲಾಡಿದೆ. ಅಲ್ಲದೆ, ಮನೆಯ ಎಲ್ಲಾ ಸದಸ್ಯರ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದು ಕೊಂಡಿದೆ ಎಂದು ತಿಳಿದು ಬಂದಿದೆ.

ಪಿಎಫ್ಐ ಮುಖಂಡರ ಮನೆಯ ಜೊತೆಗೆ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್.ಡಿ.ಪಿ.ಐ., ಪಿ.ಎಫ್.ಐ. ಕಚೇರಿ ಮೇಲೂ ಎನ್ಐಎ ದಾಳಿ ಮಾಡಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಎಸ್.ಡಿ.ಪಿ.ಐ. ದ.ಕ.  ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ, ಎನ್ಐಎ ಅಧಿಕಾರಿಗಳು ಯಾವುದೇ ಸೂಕ್ತ ಕಾರಣಗಳನ್ನು ನೀಡದೇ ವಿನಾಕಾರಣ ಎಸ್.ಡಿ.ಪಿ.ಐ. ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಅಧಿಕಾರಿಗಳನ್ನು ಈ ಕುರಿತು ಮಾಹಿತಿ ಕೇಳಿದರೆ, ಪಿಎಫ್ಐ ಕಚೇರಿ ಎಂದು ಎಸ್.ಡಿ.ಪಿ.ಐ.,  ಕಚೇರಿಗೆ ದಾಳಿ ಮಾಡಿರುವುದಾಗಿ ಸಮಜಾಯಿಷಿ ನೀಡಿದ್ದಾರೆ ಎಂದರು.

ಎಸ್.ಡಿ.ಪಿ.ಐ.  ಕಚೇರಿ ಕಟ್ಟಡದ ಬಾಡಿಗೆ ಅಗ್ರಿಮೆಂಟ್ ದಾಖಲೆ, ಕಚೇರಿಯಲ್ಲಿ ಬಳಕೆ ಮಾಡುವ ಲ್ಯಾಪ್ ಟಾಪ್ ಹಾಗೂ ನಮ್ಮ ಪಕ್ಷಕ್ಕೆ ಸಂಬಂಧಿಸಿದ ಕೆಲವು ಫೋಟೋ ಗಳನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ. ಆದರೆ ಯಾವುದೇ ದಾಖಲೆಗಳನ್ನು ಕೊಂಡೊಯ್ದಿಲ್ಲ ಎಂದವರ ಸ್ಪಷ್ಟಪಡಿಸಿದರು.

 ಎನ್ಐಎ ಅಧಿಕಾರಿಗಳು, ಎಸ್ಡಿಪಿಐ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ, ದರ್ಪ ಪ್ರದರ್ಶಿಸಿದ ಜೊತೆಗೆ ಕಚೇರಿಗೆ ಹಾನಿ ಉಂಟು‌ ಮಾಡಿದ್ದಾರೆ. ಈ ಕುರಿತು ಕಾನೂನು ಹೋರಾಟ ಮಾಡಲಾಗುವುದು ಎಂದು ಅಬೂಬಕರ್ ಕುಳಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: SDPI, PFI ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X