Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಾದ್ಯಂತ ಜಿಲ್ಲಾ, ತಾಲೂಕು...

ದೇಶಾದ್ಯಂತ ಜಿಲ್ಲಾ, ತಾಲೂಕು ನ್ಯಾಯಾಲಯಗಳಲ್ಲಿ 30 ವರ್ಷದಿಂದ ಬಾಕಿ ಇರುವ ಪ್ರಕರಣಗಳೆಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ23 Sept 2022 7:25 AM IST
share
ದೇಶಾದ್ಯಂತ ಜಿಲ್ಲಾ, ತಾಲೂಕು ನ್ಯಾಯಾಲಯಗಳಲ್ಲಿ 30 ವರ್ಷದಿಂದ ಬಾಕಿ ಇರುವ ಪ್ರಕರಣಗಳೆಷ್ಟು ಗೊತ್ತೇ?

ಹೊಸದಿಲ್ಲಿ: ದೇಶಾದ್ಯಂತ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ಒಂದು ಲಕ್ಷಕ್ಕಿಂತಲೂ ಅಧಿಕ ಪ್ರಕರಣಗಳು ಕಳೆದ 30 ವರ್ಷಗಳಿಂದ ಬಾಕಿ ಇದೆ ಎನ್ನುವ ಅಂಶ ಬಹಿರಂಗವಾಗಿದೆ.

ಈ ಪೈಕಿ ಶೇಕಡ 90ರಷ್ಟು ಪ್ರಕರಣಗಳು ನಾಲ್ಕು ರಾಜ್ಯಗಳಲ್ಲಿವೆ. ಬಾಕಿ ಪ್ರಕರಣಗಳಲ್ಲಿ 67 ಸಾವಿರ ಅಪರಾಧ ಪ್ರಕರಣಗಳಾದರೆ, 33 ಸಾವಿರ ಸಿವಿಲ್ ವ್ಯಾಜ್ಯಗಳು.

ಉತ್ತರ ಪ್ರದೇಶದಲ್ಲಿ ಅತ್ಯಧಿಕ ಅಂದರೆ 41,210 ಪ್ರಕರಣಗಳು ಮೂರು ದಶಕಗಳಿಂದ ನನೆಗುದಿಗೆ ಬಿದ್ದಿವೆ. ಮಹಾರಾಷ್ಟ್ರ (23,483), ಪಶ್ಚಿಮ ಬಂಗಾಳ (14,345) ಮತ್ತು ಬಿಹಾರ (11,713) ನಂತರದ ಸ್ಥಾನಗಳಲ್ಲಿವೆ. ಅಂದರೆ ಒಟ್ಟು 91 ಸಾವಿರ ಪ್ರಕರಣಗಳು ಈ ನಾಲ್ಕು ರಾಜ್ಯಗಳಲ್ಲಿವೆ. ಭಾರತದ ಈ ನಾಲ್ಕು ದೊಡ್ಡ ರಾಜ್ಯಗಳು ದೇಶದ ಜನಸಂಖ್ಯೆಯಲ್ಲಿ ಶೇಕಡ 42ರಷ್ಟು ಪಾಲು ಹೊಂದಿವೆ. ಒಡಿಶಾ (4248) ಮತ್ತು ಗುಜರಾತ್ (2826) ಮಾತ್ರ 1000ಕ್ಕೂ ಅಧಿಕ ಪ್ರಕರಣಗಳು 30 ವರ್ಷದಿಂದ ಬಾಕಿ ಇರುವ ರಾಜ್ಯಗಳು.

ಚಂಡೀಗಢ, ಡಮನ್ ಮತ್ತು ಡಿಯು, ದಾದ್ರ ಮತ್ತು ನಗರ ಹವೇಲಿ, ಲಡಾಖ್, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂನಲ್ಲಿ ಮೂರು ದಶಕದಷ್ಟು ಹಳೆಯ ಯಾವ ಪ್ರಕರಣಗಳೂ ಇಲ್ಲ. ಉತ್ತರಾಖಂಡ ಹಾಗೂ ಪುದುಚೇರಿಯಲ್ಲಿ ತಲಾ ಒಂದು ಹಾಗೂ ಹಿಮಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 10ಕ್ಕಿಂತ ಕಡಿಮೆ ಪ್ರಕರಣಗಳು ಬಾಕಿ ಇವೆ.

ದೊಡ್ಡ ರಾಜ್ಯಗಳ ಪೈಕಿ ಹರ್ಯಾಣದಲ್ಲಿ ಅತ್ಯಂತ ಕನಿಷ್ಠ ಅಂದರೆ 14 ಪ್ರಕರಣಗಳು ಬಾಕಿ ಇವೆ. 100ಕ್ಕಿಂತ ಕಡಿಮೆ ಪ್ರಕರಣಗಳು ಬಾಕಿ ಇರುವ ರಾಜ್ಯಗಳೆಂದರೆ ಮೇಘಾಲಯ, ಆಂಧ್ರಪ್ರದೇಶ, ಪಂಜಾಬ್, ಛತ್ತೀಸ್‍ಗಢ, ಅಸ್ಸಾಂ, ಮಣಿಪುರ, ಜಮ್ಮು ಮತ್ತು ಕಾಶ್ಮೀರ. ಉಳಿದ ರಾಜ್ಯಗಳಲ್ಲಿ 100 ರಿಂದ 1000 ಪ್ರಕರಣಗಳು ಮೂರು ದಶಕಗಳಿಂದ ಬಾಕಿ ಇವೆ.

ದೇಶದಲ್ಲಿ 4.9 ಲಕ್ಷ ಪ್ರಕರಣಗಳು 20 ರಿಂದ 30 ವರ್ಷದಿಂದ ಬಾಕಿ ಇದ್ದರೆ, 10 ರಿಂದ 20 ವರ್ಷದಿಂದ ಬಾಕಿ ಇರುವ ಪ್ರಕರಣಗಳ ಸಂಖ್ಯೆ 28.7 ಲಕ್ಷ. ದೇಶಾದ್ಯಂತ ದಶಕಗಳಿಂದ ಬಾಕಿ ಇರುವ ಒಟ್ಟು ಪ್ರಕರಣಗಳ ಸಂಖ್ಯೆ 34.6 ಲಕ್ಷ ಎಂದು timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X