Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ?: ಕುಮಾರಸ್ವಾಮಿ ಪ್ರಶ್ನೆ

'ಬಿಎಂಎಸ್ ಟ್ರಸ್ಟ್‌ʼನಲ್ಲಿ ಅಕ್ರಮ ಆರೋಪ: ಸಚಿವ ಡಾ.ಅಶ್ವತ್ಥನಾರಾಯಣ ರಾಜೀನಾಮೆಗೆ ಮಾಜಿ ಸಿಎಂ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Sept 2022 10:27 AM IST
share
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ?: ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು, ಸೆ.23: 'ಬಿಎಂಎಸ್ ಟ್ರಸ್ಟ್‌ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಆ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಕೂಡಲೇ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. ಇನ್ನು ನನ್ನ ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ.

BMS ಟ್ರಸ್ಟ್ ಬಗ್ಗೆ ರಾಜ್ಯ ಬಿಜೆಪಿ ಸರಕಾರ ಕಾನೂನುರೀತ್ಯ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ. ಕಾನೂನುರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ ಸಚಿವರೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು ಎಂದು ಮಾಜಿ ಸಿಎಂ ಹೇಳಿದ್ದಾರೆ.

ಉನ್ನತ ಶಿಕ್ಷಣ ಸಚಿವರೇ, 1957ರಲ್ಲಿ ರಚನೆಗೊಂಡು ನೋಂದಣಿಯಾದ BMS ಟ್ರಸ್ಟಿನ ಮೂಲ ಡೀಡನ್ನು ಒಮ್ಮೆ ಓದಿ. ದಾನಿ ಟ್ರಸ್ಟಿ, ಆಜೀವ ಟ್ರಸ್ಟಿ ನೇಮಕದ ಬಗ್ಗೆ ಇರುವ ಷರತ್ತುಗಳನ್ನೂ ತಿಳಿಯಿರಿ. ಆದರೆ, ನೀವು ಜನರಿಗೆ ಮತ್ತು ಸರಕಾರಕ್ಕೆ ಸೇರಿದ ಇಡೀ ಟ್ರಸ್ಟಿನ ಆಸ್ತಿ ಹೊಡೆಯಲು ನಿಂತವರ ಪರ ನಾಚಿಕೆ ಇಲ್ಲದೆ ವಕಾಲತ್ತು ವಹಿಸುತ್ತಿದ್ದೀರಿ ಎಂದು ಟೀಕಿಸಿದ್ದಾರೆ.

BMS ಎಂಜೀಯರಿಂಗ್‌ ಕಾಲೇಜಿನಲ್ಲಿ ಸೀಟ್‌ ಬ್ಲಾಕಿಂಗ್‌, ಪೇಮೆಂಟ್‌ ಸೀಟುಗಳನ್ನು 50:50ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದು ನಿಮ್ಮ ಗಮನಕ್ಕೆ ಬರಲಿಲ್ಲವೇ? ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಬರೆದ ಪತ್ರಗಳನ್ನು ನೀವು ಓದಲಿಲ್ಲವೇ ಸಚಿವರೇ? ಓದಲಿಲ್ಲ ಎಂದರೆ, ಅದಕ್ಕೆ ಕಾರಣವೇನು? ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಮುಜರಾಯಿ ಇಲಾಖೆಯ ಶ್ರೀ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿಕೊಡುವುದಾ? ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ? ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಮ್ಮ ಅವಧಿಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಬಹಳ ಕ್ರಮ ಕೈಗೊಂಡಿದ್ದೇವೆ ಎನ್ನುತ್ತೀರಿ. ಸುಧಾರಣೆ ಎಂದರೆ, ಸಾರ್ವಜನಿಕ ಟ್ರಸ್ಟುಗಳನ್ನು ಹೀಗೆ ನುಂಗಿ ನೀರು ಕುಡಿಯಲು ಒಳಗೊಳಗೇ ಸಹಕಾರ ನೀಡುವುದಾ? ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ? ಶೈಕ್ಷಣಿಕೋದ್ಧಾರ ಮಾಡುವುದು ಎಂದರೆ ಹೀಗೆನಾ? ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

2018ರಲ್ಲಿ ನನ್ನ ನೇತೃತ್ವದ ಸರಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ BMS ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರಕಾರ ಹೋದ ಮೇಲೆ ಬಂದ ರಾಜ್ಯ ಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ.

ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು  ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ? ಎಂದು ಟೀಕಿಸಿದ್ದಾರೆ.

ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಪಿಎಫ್ಐ ಹರತಾಳ ಕರೆ: ಕಾಸರಗೋಡಿನಲ್ಲಿ ಮಿಶ್ರ ಪ್ರತಿಕ್ರಿಯೆ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ?
ಮುಜರಾಯಿ ಇಲಾಖೆಯ ಶ್ರೀ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿಕೊಡುವುದಾ?
ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ? 7/11

— H D Kumaraswamy (@hd_kumaraswamy) September 23, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X