Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಕ್ರೇನ್ ನಲ್ಲಿ ರಶ್ಯದಿಂದ ಯುದ್ಧಾಪರಾಧ :...

ಉಕ್ರೇನ್ ನಲ್ಲಿ ರಶ್ಯದಿಂದ ಯುದ್ಧಾಪರಾಧ : ವಿಶ್ವಸಂಸ್ಥೆ ತನಿಖಾಧಿಕಾರಿಗಳ ವರದಿ

ವಾರ್ತಾಭಾರತಿವಾರ್ತಾಭಾರತಿ23 Sept 2022 11:50 PM IST
share
ಉಕ್ರೇನ್ ನಲ್ಲಿ ರಶ್ಯದಿಂದ ಯುದ್ಧಾಪರಾಧ : ವಿಶ್ವಸಂಸ್ಥೆ ತನಿಖಾಧಿಕಾರಿಗಳ ವರದಿ

ಜಿನೆವಾ, ಸೆ.23: ಉಕ್ರೇನ್ನಲ್ಲಿ ನಾಗರಿಕರ ಪ್ರದೇಶದಲ್ಲಿ ರಶ್ಯದ ಬಾಂಬ್ ದಾಳಿ, ಹಲವಾರು ಮರಣದಂಡನೆಗಳು, ಚಿತ್ರಹಿಂಸೆ ಮತ್ತು ಭಯಾನಕ ಲೈಂಗಿಕ ಹಿಂಸೆಯ ಪ್ರಕರಣಗಳನ್ನು ಪಟ್ಟಿ ಮಾಡಲಾಗಿದ್ದು ಉಕ್ರೇನ್ ಸಂಘರ್ಷದಲ್ಲಿ ರಶ್ಯದಿಂದ ಯುದ್ಧಾಪರಾಧ ನಡೆದಿರುವುದು ಸ್ಪಷ್ಟವಾಗಿದೆ ಎಂದು ವಿಶ್ವಸಂಸ್ಥೆ ತನಿಖಾಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

ತನಿಖಾ ಆಯೋಗ ಸಂಗ್ರಹಿಸಿರುವ ಪುರಾವೆಗಳ ಆಧಾರದಲ್ಲಿ, ಉಕ್ರೇನ್ನಲ್ಲಿ ಯುದ್ಧಾಪರಾಧ ನಡೆದಿದೆ ಎಂದು ತೀರ್ಮಾನಿಸಲಾಗಿದೆ ಎಂದು ತನಿಖಾ ತಂಡದ ಮುಖ್ಯಸ್ಥ ಎರಿಕ್ ಮೋಸ್ ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿಗೆ ತಿಳಿಸಿದ್ದಾರೆ.

ಉಕ್ರೇನ್ನಲ್ಲಿ ರಶ್ಯ ನಡೆಸುತ್ತಿರುವ ಯುದ್ಧದಲ್ಲಿ ಅಪರಾಧ ನಡೆದಿರುವ ವರದಿಯ ಬಗ್ಗೆ ತನಿಖೆ ನಡೆಸಲು ವಿಶ್ವಸಂಸ್ಥೆಯ ಅತ್ಯುನ್ನತ ತನಿಖಾ ಸಂಸ್ಥೆ ಕಮಿಷನ್ ಆಫ್ ಎನ್ಕ್ವಯರಿ(ಸಿಒಐ) ಮೇ ತಿಂಗಳಿನಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿತ್ತು. ಮೂವರು ಸ್ವತಂತ್ರ ತಜ್ಞರನ್ನು ಒಳಗೊಂಡ ತಂಡವು ಉಕ್ರೇನ್ನ ಕೀವ್, ಚೆರ್ನಿಹಿವ್, ಖಾರ್ಕಿವ್ ಮತ್ತು ಸುಮಿ ಪ್ರದೇಶಗಳಲ್ಲಿ ನಡೆಸಿದ ತನಿಖೆಯ ಬಗ್ಗೆ ಪ್ರಾಥಮಿಕ ಮಾಹಿತಿಯನ್ನು ನೀಡಿದ್ದು ಮುಂದಿನ ಹಂತದಲ್ಲಿ ವಿಸ್ತತ ವರದಿ ಸಲ್ಲಿಸುವುದಾಗಿ ಹೇಳಿದೆ.

 ಅಧಿಕ ಜನಸಂಖ್ಯೆಯ ಪ್ರದೇಶದಲ್ಲಿ ರಶ್ಯಾ ಒಕ್ಕೂಟ ವ್ಯಾಪಕ ಪರಿಣಾಮಗಳೊಂದಿಗೆ ಸ್ಫೋಟಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದು ಇದರಿಂದ ನಾಗರಿಕರಿಗೆ ಅಪಾರ ಹಾನಿ ಮತ್ತು ಸಂಕಷ್ಟಕ್ಕೆ ಕಾರಣವಾಗಿದೆ . ಜನನಿಬಿಡ ಪ್ರದೇಶದಲ್ಲಿ ಸ್ಫೋಟಕ ಬಳಕೆ ಸಹಿತ ಹಲವು ದಾಳಿಗಳ ಬಗ್ಗೆ ನಡೆಸಿದ ತನಿಖೆಯಲ್ಲಿ ದಾಳಿಗಳನ್ನು ನಾಗರಿಕರು ಮತ್ತು ಹೋರಾಟಗಾರರ ಮಧ್ಯೆ ವ್ಯತ್ಯಾಸವಿಲ್ಲದೆ ನಡೆಸಲಾಗಿದೆ ಎಂದು ಎರಿಕ್ ಮೋಸ್ ಹೇಳಿದ್ದಾರೆ. ತಂಡ ಭೇಟಿ ನೀಡಿದ ಪ್ರದೇಶಗಳಲ್ಲಿ ಪತ್ತೆಯಾದ ಮೃತದೇಹಗಳ ಮೇಲೆ ಗಾಯ, ಬೆನ್ನಿನ ಹಿಂದೆ ಕೈಗಳನ್ನು ಕಟ್ಟಿ ಹಾಕಿರುವುದು, ತಲೆಯಲ್ಲಿ ಗುಂಡೇಟಿನ ಗಾಯ, ಗಂಟಲು ಸೀಳಿರುವುದು ಕಂಡುಬಂದಿದೆ.

16 ನಗರ ಹಾಗೂ ಪ್ರದೇಶಗಳಲ್ಲಿ ಇಂತಹ ಹತ್ಯೆಯ ಬಗ್ಗೆ ಆಯೋಗ ತನಿಖೆ ನಡೆಸುತ್ತಿದೆ ಮತ್ತು ಇನ್ನೂ ಹಲವು ಪ್ರಕರಣಗಳ ಬಗ್ಗೆ ನಂಬಲರ್ಹ ಆರೋಪಗಳನ್ನು ಸ್ವೀಕರಿಸಿದ್ದು ಅದನ್ನು ದಾಖಲಿಸಲು ಬಯಸುತ್ತದೆ. ಕಾನೂನು ಬಾಹಿರ ಬಂಧನದ ಸಮಯದಲ್ಲಿ ನಡೆಸಲಾದ ದೌರ್ಜನ್ಯ ಮತ್ತು ಚಿತ್ರಹಿಂಸೆಯ ಬಗ್ಗೆ ನಿರಂತರ ಮಾಹಿತಿಯನ್ನು ತನಿಖಾಧಿಕಾರಿಗಳು ಪಡೆಯುತ್ತಿದ್ದಾರೆ. ತಮ್ಮನ್ನು ರಶ್ಯಕ್ಕೆ ಸ್ಥಳಾಂತರಿಸಿ ಹಲವು ವಾರ ಬಂಧನಲ್ಲಿರಿಸಿರುವುದಾಗಿ ಹಲವರು ಹೇಳಿದ್ದಾರೆ. ಹೀಗೆ ಸ್ಥಳಾಂತರಗೊಂಡವರಲ್ಲಿ ಕೆಲವರು ನಾಪತ್ತೆಯಾಗಿರುವುದಾಗಿ ಮಾಹಿತಿ ಇದೆ. ನಗ್ನಗೊಳಿಸುವುದು, ಹೊಡೆಯುವುದು, ವಿದ್ಯುತ್ ಆಘಾತ ಹಾಗೂ ಇತರ ರೀತಿಯ ದೌರ್ಜನ್ಯ ನಡೆದಿರುವುದಾಗಿ ದೂರು ಬಂದಿದೆ. ತಂಡವು ಲೈಂಗಿಕ ಮತ್ತು ಲಿಂಗ ಆಧಾರಿತ ಹಿಂಸಾಚಾರದ ಪ್ರಕರಣಗಳನ್ನೂ ದಾಖಲಿಸಿದೆ. ಕೆಲವು ಸಂದರ್ಭಗಳಲ್ಲಿ ಅಪರಾಧವನ್ನು ವೀಕ್ಷಿಸುವಂತೆ ಸಂಬಂಧಿಕರನ್ನು ಬಲವಂತಪಡಿಸಿದ ದೂರುಗಳೂ ಇವೆ. ನಾವು ತನಿಖೆ ನಡೆಸಿದ ಪ್ರಕರಣಗಳಲ್ಲಿ ಲೈಂಗಿಕ ಮತ್ತು ಲಿಂಗ ಆಧಾರಿತ ಹಿಂಸಾಚಾರದ ಬಲಿಪಶುಗಳ ವಯಸ್ಸು 4ರಿಂದ 82 ವರ್ಷಗಳು. ಮಕ್ಕಳನ್ನು ಅಕ್ರಮ ಬಂಧನಲ್ಲಿರಿಸಿ ಚಿತ್ರಹಿಂಸೆ, ಅತ್ಯಾಚಾರ ಸೇರಿದಂತೆ ವ್ಯಾಪಕ ಶ್ರೇಣಿಯ ಅಪರಾಧವನ್ನು ನಡೆಸಿರುವುದನ್ನು ದಾಖಲಿಸಲಾಗಿದೆ ಎಂದು ಎರಿಕ್ ಮೋಸ್ ಹೇಳಿದ್ದಾರೆ.

ಉಕ್ರೇನ್ ಯೋಧರ ವಿರುದ್ಧವೂ ದೂರು

ಉಕ್ರೇನ್ ಯೋಧರು ರಶ್ಯ ಯೋಧರ ವಿರುದ್ಧ ದೌರ್ಜನ್ಯ ಮತ್ತು ಚಿತ್ರಹಿಂಸೆ ನಡೆಸಿರುವ ಎರಡು ಪ್ರಕರಣಗಳ ಕುರಿತ ದೂರಿನ ಬಗ್ಗೆಯೂ ತನಿಖಾ ಆಯೋಗ ಪರಿಶೀಲಿಸಿದೆ. ಇಂತಹ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿದ್ದರೂ ಈ ಬಗ್ಗೆಯೂ ಆಯೋಗ ಗಮನ ಹರಿಸುತ್ತಿದೆ ಎಂದು ಎರಿಕ್ ಮೋಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X