Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಮಾಜಿಕ ಚಳುವಳಿ ರೂಪಿಸುವುದು ಇಂದಿನ...

ಸಾಮಾಜಿಕ ಚಳುವಳಿ ರೂಪಿಸುವುದು ಇಂದಿನ ಸವಾಲು: ಗಿಳಿಯಾರು

ವಾರ್ತಾಭಾರತಿವಾರ್ತಾಭಾರತಿ24 Sept 2022 5:58 PM IST
share
ಸಾಮಾಜಿಕ ಚಳುವಳಿ ರೂಪಿಸುವುದು ಇಂದಿನ ಸವಾಲು: ಗಿಳಿಯಾರು

ಕುಂದಾಪುರ, ಸೆ.24: ಶೋಷಿತ ವರ್ಗಗಳ ಸಂವಿಧಾನ ಬದ್ದ ಹಕ್ಕುಗಳಿಗಾಗಿ ಸಾಮಾಜಿಕ ಚಳುವಳಿ ರೂಪಿಸು ವುದು ಇಂದಿನ ಕಾಲಘಟ್ಟದಲ್ಲಿ ಒಂದು ರೀತಿಯ ಸವಾಲುಗಳಾಗಿ ಪರಿಣಮಿಸುತ್ತಿದೆ. ಅಂಬೇಡ್ಕರ್ ಕೊಟ್ಟ ಮೀಸಲಾತಿ ಯಿಂದ ಉನ್ನತ ಹುದ್ದೆಯನ್ನು ಅಲಂಕರಿಸಿಕೊಂಡ ಸಮುದಾಯದವರು ಚಳುವಳಿಯತ್ತ ಮುಖ ಮಾಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಪ್ರಧಾನ ಸಂಘಟನಾ ಸಂಚಾಲಕ ನ್ಯಾಯ ವಾದಿ ಮಂಜುನಾಥ ಗಿಳಿಯಾರು ಹೇಳಿದ್ದಾರೆ.

ದಸಂಸ ಯಡಮೊಗ್ಗೆ ಗ್ರಾಮ ಶಾಖೆಯ ಮೊದಲ ವರ್ಷದ ವಾರ್ಷಿಕ ಮಹೋತ್ಸವದ ಅಂಗವಾಗಿ ಯಡಮೊಗೆ ಸಿದ್ದಿ ವಿನಾಯಕ ಭಜನ ಮಂದಿರದಲ್ಲಿ ಹಮ್ಮಿಕೊಂಡ ಜನಶಕ್ತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿ ದ್ದರು. ಗ್ರಾಮೀಣ ಭಾಗದಿಂದ ಸಂಘಟನೆಗೆ ಬರುವವರು ಕೆಲವು ಆಶಾ ಭಾವನೆಗಳೊಂದಿಗೆ ಬರುತ್ತಾರೆ. ಅವರ ಕೊರತೆಯನ್ನು ನೀಗಿಸಿ ಅಂಬೇಡ್ಕರ್ ವಿಚಾರ ಧಾರೆಯ ಅರಿವನ್ನು ಜನರಲ್ಲಿ ಮೂಡಿಸಲು ಸಂಘಟನೆಯ ಕಾರ್ಯ ಕರ್ತರು ಅವಿರತ ಶ್ರಮವಹಿಸಿದಲ್ಲಿ ಮಾತ್ರ ಚಳುವಳಿಯನ್ನು ಬಲಪಡಿಸಲು ಸಾದ್ಯ. ದೇಶದ ಇಡೀ ಸಾಮಾಜಿಕ ವ್ಯವಸ್ಥೆಯೇ ಇವತ್ತು ಖಾಸಗಿಕರಣಕ್ಕೆ ಮಾರಟವಾಗುತ್ತಿರುವಾಗ ಪ್ರಜ್ಞಾವಂತ ಯುವ ಮನಸ್ಸುಗಳು ಎಚ್ಚೆತ್ತು  ಸಮುದಾಯಗಳ ಸಾಮಾಜಿಕ ಹಕ್ಕುನ್ನು ಕಾಯ್ದುಕೊಳ್ಳಲು ಅಂಬೇಡ್ಕರ್ ವಿಚಾರ ಧಾರೆಯಲ್ಲಿ ಚಳುವಳಿ ಗಟ್ಟಿ ಗೊಳಿಸಬೇಕಾಗಿದೆ ಎಂದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಮಾನಂಜೆ ಸಹಕಾರಿ ಸಂಘದ  ಹಿರಿಯ ವ್ಯವಸ್ಥಾಪಕ ಮಂಜುನಾಥ ನಾಯ್ಕ, ಪ್ರಗತಿಪರ ಕೃಷಿಕ ಅಂತು ನಾಯ್ಕ,  ಖ್ಯಾತ ಯಕ್ಷಗಾನ ಭಾಗವತ ಗಣೇಶ ನಾಯ್ಕ, ಹವ್ಯಾಸಿ ಚಿತ್ರ ಕಲೆಗಾರ ಶೇಖರ ಬೆಳಾರಿ, ಯುವ ಶಿಲ್ಪ ಕಲೆಗಾರ ಪ್ರತಿಭೆ ಚೇತನ್ ನಾಯ್ಕ ಅವರನ್ನು ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ಪುರಸ್ಕರಿಸಿ ಸನ್ಮಾನಿಸಿದರು.

ಕುಂದಾಪುರ ತಾಲೂಕು ಸಂಚಾಲಕ ಕೆ.ಸಿ.ರಾಜು ಬೆಟ್ಟಿನಮನೆ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಗೈದರು. ಅಧ್ಯಕ್ಷತೆಯನ್ನು ಸಮಿತಿಯ ಸಂಚಾಲಕ ಭಾಸ್ಕರ ನಾಯ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶೇಖರ ಪೂಜಾರಿ, ಜಯ ರಾಮ ಮಂಗನಮಕ್ಕಿ, ಆನಂದ ಬೆಳಾರಿ ಮೊದಲಾದವರು ಉಪಸ್ಥರಿದ್ದರು. ಉದಯ ನಾಯ್ಕ ಸ್ವಾಗತಿಸಿದರು. ಗಣೇಶ್ ನಾಯ್ಕ  ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X