Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೊಹಿಂಗ್ಯಾ ಬಿಕ್ಕಟ್ಟಿನಿಂದ ಬಾಂಗ್ಲಾದ...

ರೊಹಿಂಗ್ಯಾ ಬಿಕ್ಕಟ್ಟಿನಿಂದ ಬಾಂಗ್ಲಾದ ಭದ್ರತೆಯ ಮೇಲೆ ಪರಿಣಾಮ: ಪ್ರಧಾನಿ ಶೇಖ್ ಹಸೀನಾ

ವಾರ್ತಾಭಾರತಿವಾರ್ತಾಭಾರತಿ24 Sept 2022 9:15 PM IST
share
ರೊಹಿಂಗ್ಯಾ ಬಿಕ್ಕಟ್ಟಿನಿಂದ ಬಾಂಗ್ಲಾದ ಭದ್ರತೆಯ ಮೇಲೆ ಪರಿಣಾಮ: ಪ್ರಧಾನಿ ಶೇಖ್ ಹಸೀನಾ

ನ್ಯೂಯಾರ್ಕ್, ಸೆ.24: ದೇಶದಲ್ಲಿ ಕಿಕ್ಕಿರಿದ ಶಿಬಿರಗಳಲ್ಲಿ 1 ದಶಲಕ್ಷಕ್ಕೂ ಹೆಚ್ಚು ರೊಹಿಂಗ್ಯಾ ನಿರಾಶ್ರಿತರು ದೀರ್ಘ ಕಾಲ ಉಳಿಯುವುದು ದೇಶದ ಭದ್ರತೆ ಮತ್ತು ಸ್ಥಿರತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.

ಅವರ ಸ್ವಂತ ಸಮಸ್ಯೆಯ ಹೊರತಾಗಿ, ಅವರ ದೀರ್ಘಕಾಲದ ಉಪಸ್ಥಿತಿಯು ಬಾಂಗ್ಲಾದೇಶದ ಆರ್ಥಿಕತೆ, ಪರಿಸರ, ಭದ್ರತೆ ಹಾಗೂ ಸಾಮಾಜಿಕ ಆರ್ಥಿಕ ಸ್ಥಿರತೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ ಎಂದವರು ಹೇಳಿದ್ದಾರೆ. ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ನಡೆದ ಇಂಡೊ-ಪೆಸಿಫಿಕ್ ವಲಯದ 24 ದೇಶಗಳ ಪ್ರತಿನಿಧಿಗಳ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ರೊಹಿಂಗ್ಯಾ ನಿರಾಶ್ರಿತರನ್ನು ಮ್ಯಾನ್ಮಾರ್‌ಗೆ ವಾಪಾಸು ಕಳುಹಿಸುವುದೇ ಈ ಬಿಕ್ಕಟ್ಟಿಗೆ ಇರುವ ಪರಿಹಾರವಾಗಿದೆ. ಆದರೆ ರೊಹಿಂಗ್ಯಾರನ್ನು ಬಲಪ್ರಯೋಗಿಸಿ ವಾಪಾಸು ಕಳುಹಿಸುವುದಿಲ್ಲ ಎಂದು ಹಸೀನಾ ಹೇಳಿದ್ದಾರೆ.

ಬಾಂಗ್ಲಾದೇಶದ ಸೇನೆ ಹಾಗೂ ಅಮೆರಿಕ ಜಂಟಿಯಾಗಿ ಈ ಸಮಾವೇಶ ಆಯೋಜಿಸಿದೆ. ಭಾಗವಹಿಸಿದ ದೇಶಗಳ ಪ್ರತಿನಿಧಿಗಳು, ವಿಪತ್ತು ನಿರ್ವಹಣೆ, ಬಹುರಾಷ್ಟ್ರೀಯ ಅಪರಾಧ, ಭದ್ರತಾ ಸಮಸ್ಯೆ, ಮಹಿಳಾ ಸಶಕ್ತೀಕರಣದ ಕುರಿತು ಚರ್ಚಿಸಲು ವೇದಿಕೆಯನ್ನು ಬಳಸಿಕೊಂಡರೆ, ಮ್ಯಾನ್ಮಾರ್‌ನಲ್ಲಿನ ಹಿಂಸಾಚಾರದಿಂದ ಭೀತಿಗೊಂಡು ಬಾಂಗ್ಲಾಕ್ಕೆ ಪಲಾಯನ ಮಾಡಿರುವ ರೊಹಿಂಗ್ಯಾ ನಿರಾಶ್ರಿತರ ಸಮಸ್ಯೆಯನ್ನು ಬಾಂಗ್ಲಾದೇಶ ಸಮಾವೇಶದಲ್ಲಿ ಪ್ರಸ್ತಾವಿಸಿದೆ.

ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಜಪಾನ್, ಇಂಡೊನೇಶ್ಯಾ, ಭಾರತ, ಚೀನಾ ಮತ್ತು ವಿಯೆಟ್ನಾಮ್‌ನ ಪ್ರತಿನಿಧಿಗಳು ಬಾಂಗ್ಲಾದ ರೊಹಿಂಗ್ಯಾ ನಿರಾಶ್ರಿತರ ಶಿಬಿರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಲಿದ್ದಾರೆ. ಪ್ರತಿನಿಧಿಗಳನ್ನು ಕಾಕ್ಸ್ ಬಝಾರ್ ಜಿಲ್ಲೆಯಲ್ಲಿರುವ ಶಿಬಿರಕ್ಕೆ ಕರೆದೊಯ್ದು ನಿರಾಶ್ರಿತರ ಬಿಕ್ಕಟ್ಟಿನ ಅಗಾಧತೆಯನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ಬಾಂಗ್ಲಾದೇಶ ಸೇನೆಯ ಮುಖ್ಯಸ್ಥ ಜನರಲ್ ಎಸ್‌ಎಮ್ ಶಫಿಯುದ್ದೀನ್ ಆಹ್ಮದ್ ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿ 1 ಮಿಲಿಯಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರಿದ್ದಾರೆ.

ರೊಹಿಂಗ್ಯಾ ಬಿಕ್ಕಟ್ಟು ಈಗ ಅಂತರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದು ಈ ವಿಷಯದಲ್ಲಿ ತಮ್ಮದೇನೂ ತಪ್ಪಿಲ್ಲ ಎಂದು ಮ್ಯಾನ್ಮಾರ್ ಸೇನಾಡಳಿತ ವಾದಿಸುತ್ತಿದೆ. ರೊಹಿಂಗ್ಯಾಗಳು ಹಾಗೂ ಮ್ಯಾನ್ಮಾರ್‌ನ ಎಲ್ಲಾ ಜನರಿಗೆ ನ್ಯಾಯವನ್ನು ದೊರಕಿಸಿಕೊಡಲು ಅಮೆರಿಕ ಬದ್ಧವಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X