ಉಪ್ಪಿನಂಗಡಿ: ರಸ್ತೆ ಅಪಘಾತ; ಬೈಕ್ ಸವಾರ ಗಂಭೀರ
ಸಾಂದರ್ಭಿಕ ಚಿತ್ರ
ಉಪ್ಪಿನಂಗಡಿ: ಓಮ್ನಿ ಕಾರು ಢಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ರವಿವಾರ ನಡೆದಿದೆ.
ಕೆಮ್ಮಾರ ನಿವಾಸಿ ಮೋನಪ್ಪ ಗೌಡ (60) ಗಂಭೀರ ಗಾಯಗೊಂಡಿರುವ ಬೈಕ್ ಸವಾರ ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿಯಿಂದ ಹೋಗುತ್ತಿದ್ದ ಇವರ ಬೈಕ್ ಗೆ ಕೂಟೇಲು ಸಮೀಪ ಎದುರಿನಿಂದ ಬಂದ ಓಮ್ನಿ ಕಾರು ಢಿಕ್ಕಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಮೋನಪ್ಪ ಗೌಡ ಆಸ್ಪ್ರತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
Next Story