Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಜಾಬ್, ಹಲಾಲ್ ಎಂದು ಸಾಮರಸ್ಯ ಹಾಳು...

ಹಿಜಾಬ್, ಹಲಾಲ್ ಎಂದು ಸಾಮರಸ್ಯ ಹಾಳು ಮಾಡುವಾಗ ಆಗದ ಅವಮಾನ 'PayCM' ಅಭಿಯಾನದಿಂದ ಆಯಿತೇ?: ಎಚ್. ಸಿ. ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ25 Sept 2022 3:21 PM IST
share
ಹಿಜಾಬ್, ಹಲಾಲ್ ಎಂದು ಸಾಮರಸ್ಯ ಹಾಳು ಮಾಡುವಾಗ ಆಗದ ಅವಮಾನ PayCM ಅಭಿಯಾನದಿಂದ ಆಯಿತೇ?: ಎಚ್. ಸಿ. ಮಹದೇವಪ್ಪ

ಬೆಂಳೂರು: ''ಪೇಸಿಎಂ' ಅಭಿಯಾನದಿಂದ  ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರು ಎದುರಿಸುತ್ತಿರುವುದು ಅವಮಾನವಲ್ಲ, ಪ್ರತಿರೋಧ' ಎಂದು ಮಾಜಿ ಸಚಿವ ಡಾ. ಎಚ್. ಸಿ ಮಹದೇವಪ್ಪ ಹೇಳಿದ್ದಾರೆ. 

ಈ ಸಂಬಂಧ ರವಿವಾರ ಟ್ವೀಟ್ ಮಾಡಿರುವ ಅವರು, 'ಹಿಜಾಬ್, ಹಲಾಲ್ ಎಂದು ಸಾಮರಸ್ಯ ಹಾಳು ಮಾಡುವಾಗ ಆಗದ ಅವಮಾನ 'PayCM' ಅಭಿಯಾನದಿಂದ ಆಯಿತೇ? ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರನ್ನು ಪ್ರಶ್ನೆ ಮಾಡಿದ್ದಾರೆ. 

ಡಾ.ಎಚ್. ಸಿ ಮಹದೇವಪ್ಪ ಅವರ ಟ್ವೀಟ್ ಇಂತಿದೆ... 

''ರಾಜ್ಯದಲ್ಲಿ ಯಡಿಯೂರಪ್ಪನವರ ಬಳಿಕ ಮುಖ್ಯಮಂತ್ರಿ ಹುದ್ದೆಗೆ ಏರಿದ ಬಸವರಾಜ ಬೊಮ್ಮಾಯಿಯವರು ಕ್ರಮೇಣ ಆರೆಸ್ಸೆಸ್  ಕೈಗೊಂಬೆಯಾಗಿ ಹಿಜಾಬ್, ಹಲಾಲ್ ನಂತಹ ಹಲವು ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ವಿರುದ್ಧವಾದ ಸಂಗತಿಗಳು ನಡೆಯುತ್ತಿದ್ದರೂ ಕೂಡಾ ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿಯುವ ರೀತಿಯಲ್ಲಿ ಸುಮ್ಮನೇ ಇದ್ದರು. ಇದಾದ ಬಳಿಕ ಪಠ್ಯ ಪುಸ್ತಕ ಪರಿಷ್ಕರಣೆ ವಿಷಯದಲ್ಲೂ ಸಹ ಅಜ್ಞಾನವನ್ನು ಎಚ್ಚರಿಸಬೇಕಿದ್ದ ಮುಖ್ಯಮಂತ್ರಿಗಳು ಮತ್ತೆ RSS ನ ಕೈಗೊಂಬೆಯಂತೆಯೇ ವರ್ತಿಸಿದರು.'' 

''ಗುತ್ತಿಗೆದಾರರೇ ಕಾಮಗಾರಿ ನಿರ್ವಹಿಸಲು ಆಗದೇ ಇರುವಷ್ಟು ಭ್ರಷ್ಟಾಚಾರ ನಡೆಯುತ್ತಿದ್ದು 40% ನಷ್ಟು ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂದು ದಾಖಲೆ ಸಮೇತ ಆರೋಪಿಸಿದರು. ಅವರಲ್ಲದೆಯೂ ಬಹಳಷ್ಟು ಮಂದಿ ಗುತ್ತಿಗೆದಾರರು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಬಹಶಃ ಬೊಮ್ಮಾಯಿ ಅವರಿಗೆ ಅವಮಾನ ಆಗುವುದೇ ಆಗಿದ್ದರೆ ಈ ಎಲ್ಲಾ ಸಂದರ್ಭದಲ್ಲಿ ಆಗಬೇಕಿತ್ತು' ಎಂದು ಕಿಡಿಕಾರಿದ್ದಾರೆ.

''ಅಭಿವೃದ್ಧಿ ಇಲ್ಲದ ಮತ್ತು ಜನಪರ ಯೋಜನೆಗಳೇ ಇಲ್ಲದ ಬಿಜೆಪಿಗರ ದುರಾಡಳಿತದಿಂದ ಬೇಸತ್ತು ನಡೆಸುತ್ತಿರುವ ಪೇಸಿಎಂ ಅಭಿಯಾನಕ್ಕೆ ಜನ ಬೆಂಬಲ ಸಿಕ್ಕ ಕೂಡಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅವಮಾನ ಪ್ರಜ್ಞೆ ಜಾಗೃತವಾಗಿರುವುದು ಹಾಸ್ಯಾಸ್ಪದ ಸಂಗತಿ. ಸಮಾಜದ ಸಾಮರಸ್ಯ ಹಾಳು ಮಾಡುವುದರಿಂದ ಹಿಡಿದು, ಕಮಿಷನ್ ಭ್ರಷ್ಟಾಚಾರದವರೆಗಿನ ನಿಮ್ಮ ಸರ್ಕಾರದ ದುರಾಡಳಿತದಿಂದ ರಾಜ್ಯಕ್ಕೆ ಈಗಾಗಲೇ ತಲೆ ತಗ್ಗಿಸುವ ಸ್ಥಿತಿ ಬಂದಿದೆ. ಈಗ ಬೊಮ್ಮಾಯಿ ಅವರು ಎದುರಿಸುತ್ತಿರುವುದು ಅವಮಾನವಲ್ಲ ಪ್ರತಿರೋಧವಾಗಿದ್ದು ಅದು ಈ ಸಂದರ್ಭದಲ್ಲಿ ಅನಿವಾರ್ಯವೂ ಆದ ಸಂಗತಿಯಾಗಿದೆ.' ಎಂದು ಹೇಳಿದ್ದಾರೆ. 

'ಇನ್ನು ಕಾಂಗ್ರೆಸ್ ಸರ್ಕಾರದ ವೇಳೆ ಸಿದ್ದರಾಮಯ್ಯ ಅವರ ಆದಿಯಾಗಿ ಹಲವು ನಾಯಕರನ್ನು ಅತ್ಯಂತ ಕೀಳು ಅಭಿರುಚಿಯ ಪದಗಳಲ್ಲಿ ಸಂಬೋಧಿಸಿದ ಬಿಜೆಪಿಗರು ಈಗ ಸದ್ಗುಣಶಾಹಿಗಳಂತೆ ಮಾತನಾಡುವುದನ್ನು ನೋಡಿದರೆ ಇವರು ತೀರಾ ಕೆಳ ಮಟ್ಟಕ್ಕೆ ಹೋಗಿದ್ದಾರೆ ಎಂದು ಅನಿಸುತ್ತದೆ' ಎಂದು ಎಚ್. ಸಿ ಮಹದೇವಪ್ಪ ಟ್ವೀಟಿಸಿದ್ದಾರೆ. 

ಸಿ ಎಂ @BSBommai

ಹಿಜಾಬ್ ಹಲಾಲ್ ಎಂದು ಸಮಾಜದ ಸಾಮರಸ್ಯ ಹಾಳು ಮಾಡುವಾಗ,

ಪಠ್ಯ ಪುಸ್ತಕದಲ್ಲಿ ಕೋಮು ವಿಷ ತುಂಬುವಾಗ

40% ಕಮಿಷನ್ ಪಡೆಯುವಾಗ ಆಗದ ಅವಮಾನ

ಒಂದು #PayCM ಅಭಿಯಾನದಿಂದ ಆಯಿತೇ?

ಮುಖ್ಯಮಂತ್ರಿಗಳೇ ಮೊದಲು ದುರಾಡಳಿತ ನಿಲ್ಲಿಸಿ, ಆಗ ನಿಮಗೆ ಆಗುವ ಅವಮಾನವೂ ನಿಲ್ಲುತ್ತದೆ!

— Dr H.C.Mahadevappa (@CMahadevappa) September 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X