ಮಹಿಷ ಪ್ರತಿಮೆ ಪೂಜೆಗೆ ಅವಕಾಶ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು, ಸೆ.25: ಮೈಸೂರು ದಸರಾ ಉತ್ಸವ ಸಂದರ್ಭದಲ್ಲಿ ಮಹಿಷಾಸುರ ಪತ್ರಿಮೆಗೆ ಅಗ್ರಪೂಜೆ ಸಲ್ಲಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಈ ಕುರಿತು ಮೈಸೂರಿನ ಅಶೋಕಪುರಂನ ವಕೀಲ ಪಿ.ಚಂದ್ರಶೇಖರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿದೆ.
ಈ ಸಂಬಂಧ ಹೆಚ್ಚಿನ ವಿವರಣೆಗಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ತುರ್ತು ನೋಟಿಸ್ ನೀಡಿರುವ ನ್ಯಾಯಪೀಠ, ಮಹಿಷ ಪ್ರತಿಮೆಗೆ ಪೂಜೆ ಮಾಡಿದ ನಂತರ ಚಾಮುಂಡಿಗೆ ಪೂಜೆ ಸಲ್ಲಿಸಿದ ಬಗ್ಗೆ ಯಾವುದಾದರೂ ವಿವರಗಳಿದ್ದರೆ ಸಲ್ಲಿಸಲು ಸೂಚಿಸಿದ್ದು, ಅಧಿಕೃತ ಮತ್ತು ಪರಿಗಣನಾರ್ಹ ವಿವರಗಳು ಲಭ್ಯವಿದ್ದರೆ ಕೋರ್ಟ್ ಗೆ ಹಾಜರುಪಡಿಸಲು ಅರ್ಜಿದಾರರ ಪರ ವಕೀಲ ಅಬೂಬಕರ್ ಶಫಿ ಅವರಿಗೆ ನಿರ್ದೇಶನ ನೀಡಿದೆ.
Next Story