Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್ ವಿಷಯದಲ್ಲಿ ಬಾಹ್ಯ ಹಸ್ತಕ್ಷೇಪ...

ತೈವಾನ್ ವಿಷಯದಲ್ಲಿ ಬಾಹ್ಯ ಹಸ್ತಕ್ಷೇಪ ಸಹಿಸುವುದಿಲ್ಲ: ವಿಶ್ವಸಂಸ್ಥೆಯಲ್ಲಿ ಚೀನಾ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ25 Sept 2022 10:09 PM IST
share
ತೈವಾನ್ ವಿಷಯದಲ್ಲಿ ಬಾಹ್ಯ ಹಸ್ತಕ್ಷೇಪ ಸಹಿಸುವುದಿಲ್ಲ: ವಿಶ್ವಸಂಸ್ಥೆಯಲ್ಲಿ ಚೀನಾ ಎಚ್ಚರಿಕೆ

ನ್ಯೂಯಾರ್ಕ್, ಸೆ.25: ತೈವಾನ್ ಮೇಲಿನ ಹಕ್ಕು ಪ್ರತಿಪಾದನೆಯ ನಿಟ್ಟಿನಲ್ಲಿ ತನ್ನ ಬದ್ಧತೆಯನ್ನು ಒತ್ತಿಹೇಳಿರುವ ಚೀನಾ, ತೈವಾನ್ ಅನ್ನು ಮರುಸೇರ್ಪಡೆಗೊಳಿಸುವ ತನ್ನ ಸಂಕಲ್ಪಕ್ಕೆ ಅಡ್ಡಿಪಡಿಸುವ ಯಾವುದೇ ಪ್ರಯತ್ನವೂ ‘ಇತಿಹಾಸದ ಚಕ್ರಗಳಡಿ’ ಸಿಲುಕಿ ಪುಡಿಯಾಗಲಿದೆ ಎಂದು ವಿಶ್ವಸಂಸ್ಥೆಯಲ್ಲಿ ಹೇಳಿದೆ.

ಚೀನಾವು ಸಂಪೂರ್ಣ ಮರುಏಕೀಕರಣವಾದರೆ ಮಾತ್ರ ತೈವಾನ್ ಜಲಸಂಧಿಯಾದ್ಯಂತ ನೈಜ ಶಾಂತಿ ನೆಲೆಸಲಿದೆ. ತೈವಾನ್ ವಿಷಯದಲ್ಲಿ ಬಾಹ್ಯ ಹಸ್ತಕ್ಷೇಪವನ್ನು ವಿರೋಧಿಸಲು ಅತ್ಯಂತ ಬಲವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಪಿಆರ್‌ಸಿ (ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ) ಸರಕಾರ ಎಲ್ಲಾ ಚೀನೀಯರನ್ನೂ ಪ್ರತಿನಿಧಿಸುವ ಏಕೈಕ ಸರಕಾರವಾಗಿದೆ . ಒಂದು ಚೀನಾ ತತ್ವವು ಅಂತರಾಷ್ಟ್ರೀಯ ಸಂಬಂಧಗಳಲ್ಲಿ ರೂಢಿಯಾಗಿದೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹೇಳಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಚೀನಾ ಬಳಸಿರುವ ಉಗ್ರಭಾಷೆ ತೈವಾನ್ ವಿಷಯದಲ್ಲಿ ಚೀನಾದ ವಿಶಿಷ್ಟ ತೀಕ್ಷ್ಣತೆಯನ್ನು ಸೂಚಿಸುತ್ತದೆ. ಆದರೆ ಪ್ರಮುಖ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಈ ಪ್ರತಿಪಾದನೆ ಹೆಚ್ಚಾಗಿ ಗಮನ ಸೆಳೆಯುವುದಿಲ್ಲ. ಪ್ರಸ್ತುತ ವಿಶ್ವಸಂಸ್ಥೆ ಅಧಿವೇಶನದಲ್ಲಿ ಚೀನಾ ಅಧ್ಯಕ್ಷ ಕ್ಸಿಜಿಂಪಿಂಗ್ ಬದಲು ವಿದೇಶಾಂಗ ಸಚಿವ ವಾಂಗ್ ಯಿ ಪಾಲ್ಗೊಂಡು ಮಾಡಿದ ಭಾಷಣವೂ ಹೆಚ್ಚಿನ ಗಮನ ಸೆಳೆಯುವುದಿಲ್ಲ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

‘ಪ್ರಸ್ತುತ ಚೀನಾ-ಅಮೆರಿಕ ಸಂಬಂಧಗಳು ಗಂಭೀರ ಪರಿಣಾಮಗಳನ್ನು ಎದುರಿಸುತ್ತಿವೆ ಮತ್ತು ಇದರಿಂದ ಅಮೆರಿಕ ಬಹಳಷ್ಟು ವಿಷಯಗಳನ್ನು ಕಲಿಯುವ ಅಗತ್ಯವಿದೆ ಎಂದು ವಾಂಗ್ ಅಮೆರಿಕದ ವಿದೇಶಾಂಗ ಸಚಿವರಿಗೆ ಸ್ಪಷ್ಟಪಡಿಸಿದರು. ತೈವಾನ್ ವಿಷಯದಲ್ಲಿ ಅಮೆರಿಕದ ಇತ್ತೀಚಿನ ತಪ್ಪು ಕೃತ್ಯಗಳ ಬಗ್ಗೆ ಉಭಯ ಮುಖಂಡರು ಚರ್ಚಿಸಿದರು. ಸಭೆಯು ಪ್ರಾಮಾಣಿಕ, ರಚನಾತ್ಮಕ ಮತ್ತು ಮಹತ್ವದ್ದಾಗಿದೆ ಎಂದು ಎರಡೂ ಕಡೆಯವರು ವಿಶ್ವಾಸವಿರಿಸಿ ಸಂವಹನವನ್ನು ಮುಂದುವರಿಸಲು ಒಪ್ಪಿಕೊಂಡರು’ ಎಂದು ಚೀನಾದ ವಿದೇಶಾಂಗ ಇಲಾಖೆ ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕದ ವಿದೇಶಾಂಗ ಸಚಿವಾಲಯ ‘ತೈವಾನ್ ವಿರುದ್ಧದ ಪ್ರಚೋದನಕಾರಿ ಕ್ರಮಗಳನ್ನು ಕೊನೆಗೊಳಿಸಲು ಚೀನಾವನ್ನು ಒತ್ತಾಯಿಸುವ ಬೈಡನ್ ಆಡಳಿತದ ನಿಲುವನ್ನು ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಪುನರುಚ್ಚರಿಸಿದರು’ ಎಂದಿದೆ. 1949ರ ಅಂತರ್ಯುದ್ಧದ ಬಳಿಕ ಮೈನ್‌ಲ್ಯಾಂಡ್ ಚೀನಾದಿಂದ ಪ್ರತ್ಯೇಕಗೊಂಡು ಸ್ವಯಂ ಆಡಳಿತದ ಪ್ರಜಾಪ್ರಭುತ್ವ ವ್ಯವಸ್ಥೆಯುಳ್ಳ ದೇಶವಾಗಿರುವ ತೈವಾನ್ ಮೇಲೆ ಚೀನಾ ನಿರಂತರ ಹಕ್ಕು ಸಾಧಿಸುತ್ತಾ ಬರುತ್ತಿದೆ. ಜಾಗತಿಕ ವೇದಿಕೆಯಲ್ಲಿ ತೈವಾನ್‌ಗೆ ರಾಷ್ಟ್ರೀಯ ಸ್ಥಾನಮಾನ ಕಲ್ಪಿಸುವ ಯಾವುದೇ ಪ್ರಯತ್ನವನ್ನು ಉಗ್ರವಾಗಿ ವಿರೋಧಿಸುತ್ತಿದೆ. ತೈವಾನ್‌ಗೆ ಜಾಗತಿಕ ಮುಖಂಡರ ಭೇಟಿಗೆ ತೀವ್ರ ಆಕ್ಷೇಪ ಎತ್ತುತ್ತಿದೆ. ಆದರೂ, ಕಳೆದ ತಿಂಗಳು ಅಮೆರಿಕ ಸಂಸತ್‌ನ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಭೇಟಿ ನೀಡಿದ ಬಳಿಕ ಅಮೆರಿಕ-ಚೀನಾ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X