Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಸರಾ, ದೀಪಾವಳಿ ಪ್ರಯುಕ್ತ ಎಸ್‌ಸಿಡಿಸಿಸಿ...

ದಸರಾ, ದೀಪಾವಳಿ ಪ್ರಯುಕ್ತ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ವಿಶೇಷ ಠೇವಣಿ, ಸಾಲ ನೀಡುವ ಅಭಿಯಾನ: ಡಾ.ರಾಜೇಂದ್ರ ಕುಮಾರ್

ವಾರ್ತಾಭಾರತಿವಾರ್ತಾಭಾರತಿ26 Sept 2022 6:56 PM IST
share
ದಸರಾ, ದೀಪಾವಳಿ ಪ್ರಯುಕ್ತ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ವಿಶೇಷ ಠೇವಣಿ, ಸಾಲ ನೀಡುವ ಅಭಿಯಾನ: ಡಾ.ರಾಜೇಂದ್ರ ಕುಮಾರ್

ಮಂಗಳೂರು, ಸೆ.26: ದಸರಾ ಹಾಗೂ ದೀಪಾವಳಿ ಪ್ರಯುಕ್ತ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ವಿಶೇಷ ಠೇವಣಿ ಹಾಗೂ ಸಾಲ ನೀಡುವ ಅಭಿಯಾನ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ‌ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಸದಾ ಹೊಸತನದ ಸೇವೆಯೊಂದಿಗೆ ಗ್ರಾಹಕರ ಅಚ್ಚುಮೆಚ್ಚಿಗೆ ಪಾತ್ರವಾಗಿದ್ದು ನವರಾತ್ರಿ ಯಿಂದ ದೀಪಾವಳಿ ಹಬ್ಬದವರೆಗೆ ವಿಶೇಷ ಠೇವಣಿ ಹಾಗೂ ಸಾಲ ನೀಡುವ ಅಭಿಯಾನವನ್ನು ಹಮ್ಮಿಕೊಂಡಿದೆ. ಒಂದು ವರ್ಷದಿಂದ ಮೇಲ್ಪಟ್ಟು ಎರಡು ವರ್ಷದ ಠೇವಣಿಗಳಿಗೆ ಶೇ.6.50 ಬಡ್ಡಿದರ ಹಾಗೂ ಮೂರು ವರ್ಷದಿಂದ ಐದು ವರ್ಷದವರೆಗಿನ ರೂ 25ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಠೇವಣಿಗೆ ಶೇ.8.೦೦ ಬಡ್ಡಿದರವನ್ನು ನಿಗದಿಪಡಿಸಲಾ ಗಿದೆ. ಸಾಂಸ್ಥಿಕ ಠೇವಣಿಗಳಿಗೆ ಶೇ.7.50 ಬಡ್ಡಿದರ ನೀಡಲಾಗುವುದು. ಹಿರಿಯ ನಾಗರಿಕರು, ಸೈನಿಕರಿಗೆ ಹಾಗೂ ಮಹಿಳೆಯರ ಠೇವಣಿಗೆ ಹೆಚ್ಚುವರಿ ಬಡ್ಡಿ ನೀಡಲಾಗುವುದು ಎಂದು ಹೇಳಿದರು.

ಹಿರಿಯ ನಾಗರಿಕರು, ಸೈನಿಕರು ಹಾಗೂ ಮಹಿಳೆಯರು ಇಡುವ ಠೇವಣಿಗೆ ಹೆಚ್ಚುವರಿಯಾಗಿ ಶೇ.0.50 ಬಡ್ಡಿದರ ನೀಡಲಾಗುವುದು. ಅದಲ್ಲದೆ ಹಿರಿಯ ನಾಗರಿಕರು ಇಡುವ ರೂ.10ಲಕ್ಷ ಮೇಲ್ಪಟ್ಟ ಠೇವಣಿಗಳಿಗೆ ಶೇ. 0.25 ಹೆಚ್ಚುವರಿ ಬಡ್ಡಿಯನ್ನು ನೀಡಲಾಗುವುದು. ಸಹಕಾರ ಸಂಘಗಳ ಮೂರು ವರ್ಷಗಳ ಅವಧಿಯ ಠೇವಣಿಗೆ ಶೇ.8 ಬಡ್ಡಿದರವನ್ನು ನೀಡಲಾಗುವುದು. ಇದು ವಿಶೇಷ ಠೇವಣಿ ಅಭಿಯಾನಕ್ಕೆ ಮಾತ್ರ ಸೀಮಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬ್ಯಾಂಕ್ ಆಕರ್ಷಕ ಬಡ್ಡಿ ದರದಲ್ಲಿ ಗ್ರಾಹಕರಿಗೆ ಗೃಹ ಸಾಲವನ್ನು ನೀಡಲು ಮುಂದಾಗಿದೆ. ವಾಸ್ತವ್ಯದ ಮನೆ ಸಾಲವಾಗಿ 25; ಲಕ್ಷದವರೆಗೆ ಶೇ.9.50 ಬಡ್ಡಿದರದಲ್ಲಿ, 25 ಲಕ್ಷಕ್ಕಿಂತ ಮೇಲ್ಪಟ್ಟ ಮೊತ್ತಕ್ಕೆ ಶೇ.8.95 ಬಡ್ಡಿದರ ನಿಗದಿಪಡಿಸಲಾಗಿದ್ದು ಗರಿಷ್ಠ ರೂ 75 ಲಕ್ಷದವರೆಗೂ ಗೃಹಸಾಲವನ್ನು ನೀಡಲಾಗುವುದು ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಗ್ರಾಹಕರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಡೆಬಿಟ್ ಕಾರ್ಡ್, ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆ, ಇಂಟರ್‌ನೆಟ್ ಬ್ಯಾಂಕಿಂಗ್ ಸೇವೆ, ಉಡುಪಿಗೆ ಮೊಬೈಲ್ ಬ್ಯಾಂಕಿಂಗ್, 15 ಹೊಸ ಶಾಖೆಗಳು, ಸಿದ್ಧಾಪುರ ಶಾಖೆಗೆ ಹೊಸ ಕಟ್ಟಡ, ಪ್ರತೀ ತಾಲೂಕಿಗೆ ಎ.ಟಿ.ಎಂ ಅಳವಡಿಕೆ, ಭಾರತ್ ಬಿಲ್ ಪೇಮೆಂಟ್ ಸಿಸ್ಟಮ್ ಯೋಜನೆಯನ್ನು ಬ್ಯಾಂಕ್ ಹೊಂದಿದೆ ಎಂದರು.

ಸುದ್ದಿ ಗೋಷ್ಠಿ ಯಲ್ಲಿ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಭಾಸ್ಕರ್ ಕೋಟ್ಯಾನ್,ಎಸ್ ಬಿ.ಜಯರಾಮ ರೈ,ಶಶಿ ಕುಮಾರ್ ರೈ ಬಾಲ್ಯೋಟ್ಟು, ವಾದಿ ರಾಜ ಶೆಟ್ಟಿ, ರಾಜು ಪೂಜಾರಿ, ರಾಜಾ ರಾಮ್ ಭಟ್, ಜೈರಾಜ್ ಬಿ.ರೈಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಮೋನಪ್ಪ ಶೆಟ್ಟಿ ಎಕ್ಕಾರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಪ್ರಭಾರ) ಗೋಪಿನಾಥ್ ಭಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X