Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಾಲರ್‌ನೆದುರು 81.67ರ ಸಾರ್ವಕಾಲಿಕ...

ಡಾಲರ್‌ನೆದುರು 81.67ರ ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ

ವಾರ್ತಾಭಾರತಿವಾರ್ತಾಭಾರತಿ26 Sept 2022 8:43 PM IST
share
ಡಾಲರ್‌ನೆದುರು 81.67ರ ಸಾರ್ವಕಾಲಿಕ ಕುಸಿತ ಕಂಡ  ರೂಪಾಯಿ

ಹೊಸದಿಲ್ಲಿ,ಸೆ.26: ಅಮೆರಿಕದ ಡಾಲರ್‌ನೆದುರು ಸೋಮವಾರ 58 ಪೈಸೆಗಳಷ್ಟು ಕುಸಿದ ಭಾರತೀಯ ರೂಪಾಯಿ 81.67ರ ಸಾರ್ವಕಾಲಿಕ ಕನಿಷ್ಠ ಮಟ್ಟವನ್ನು ದಾಖಲಿಸುವುದರೊಂದಿಗೆ ದಿನದ ವಹಿವಾಟನ್ನು ಮುಕ್ತಾಯಗೊಳಿಸಿದೆ. ಇದರೊಂದಿಗೆ ಸತತ ಎಂಟನೇ ವಹಿವಾಟು ದಿನವೂ ರೂಪಾಯಿ ಪತನಗೊಂಡಿದೆ.ರೂಪಾಯಿ ಶುಕ್ರವಾರ ಮೊದಲ ಬಾರಿಗೆ 81ರ ಗಡಿಯಿಂದ ಕೆಳಕ್ಕಿಳಿದಿತ್ತು. ಅಂದು ಅದು 80.98ರ ಸಾರ್ವಕಾಲಿಕ ಕನಿಷ್ಠ ದಾಖಲೆಯೊಂದಿಗೆ ಮುಕ್ತಾಯಗೊಂಡಿತ್ತು.

 ಉಕ್ರೇನ್‌ನಲ್ಲಿ ಹೆಚ್ಚುತ್ತಿರುವ ಭೂರಾಜಕೀಯ ಅಪಾಯ ಮತ್ತು ಅಮೆರಿಕದ ಫೆಡರಲ್ ರಿಸರ್ವ್‌ನಿಂದ ಬಡ್ಡಿದರ ಏರಿಕೆಗಳು ರೂಪಾಯಿ
ಮೌಲ್ಯ ಕುಸಿಯಲು ಕಾರಣಗಳಾಗಿವೆ ಎಂದು ವಿದೇಶಿ ವಿನಿಮಯ ವ್ಯಾಪಾರಿಗಳು ಬೆಟ್ಟು ಮಾಡಿದ್ದಾರೆ.

ಈ ವಾರ ನಡೆಯಲಿರುವ ಆರ್‌ಬಿಐ ಸಭೆಯ ಮೇಲೆ ಈಗ ಗಮನ ಕೇಂದ್ರೀಕೃತವಾಗಿದೆ ಎಂದು ಹೇಳಿದ ರಿಲಯನ್ಸ್ ಸೆಕ್ಯೂರಿಟಿಸ್‌ನ ಹಿರಿಯ ಸಂಶೋಧನಾ ವಿಶ್ಲೇಷಕ ಶ್ರೀರಾಮ ಅಯ್ಯರ್ ಅವರು, ‘ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸಲು ಮತ್ತು ರೂಪಾಯಿ ಇನ್ನಷ್ಟು ದುರ್ಬಲಗೊಳ್ಳುವುದನ್ನು ತಡೆಯಲು ಆರ್‌ಬಿಐ ಬಡ್ಡಿದರಗಳನ್ನು 50 ಪೈಸೆಗಳಷ್ಟು ಹೆಚ್ಚಿಸುತ್ತದೆ ಎಂದು ನಾವು ನಿರೀಕ್ಷಿಸಿದ್ದೇವೆ ’ ಎಂದು ಹೇಳಿದರು.

ರೂಪಾಯಿ ಅಪಮೌಲ್ಯದ ನಡುವೆಯೇ ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೋ ಅವರು,‘ವಿತ್ತ ಸಚಿವಾಲಯದ ಮೇಲೆ ಹೆಚ್ಚು ಮತ್ತು ಬಾರಾಮತಿಯ ಮೇಲೆ ಕಡಿಮೆ’ ಗಮನವನ್ನು ಕೇಂದ್ರೀಕರಿಸುವಂತೆ ಸೋಮವಾರ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಗ್ರಹಿಸಿದ್ದಾರೆ. ಪುಣೆ ಜಿಲ್ಲೆಯಲ್ಲಿರುವ ಬಾರಾಮತಿ ಪಟ್ಟಣವು ಎನ್‌ಸಿಪಿ ವರಿಷ್ಠ ಶರದ ಪವಾರ್ ಅವರ ತವರು ಮತ್ತು ಭದ್ರಕೋಟೆಯಾಗಿದೆ.

144 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸಲು ಬಿಜೆಪಿಯ ಅಭಿಯಾನದ ಅಂಗವಾಗಿ ಸೀತಾರಾಮನ್ ಕಳೆದ ವಾರ ಬಾರಾಮತಿಗೆ ಮೂರು ದಿನಗಳ ಭೇಟಿ ನೀಡಿದ್ದರು.

ಇತರ ಕರೆನ್ಸಿಗಳಿಗೆ ಹೋಲಿಸಿದರೆ ಡಾಲರ್‌ನೆದುರು ರೂಪಾಯಿ ದೃಢವಾಗಿ ನಿಂತಿದೆ ಎಂದು ಶನಿವಾರ ಹೇಳಿದ್ದ ಸೀತಾರಾಮನ್,ವಿತ್ತ ಸಚಿವಾಲಯ ಮತ್ತು ಆರ್‌ಬಿಐ ರೂಪಾಯಿಯ ಮೇಲೆ ನಿಕಟ ನಿಗಾಯಿರಿಸಿವೆ ಎಂದು ತಿಳಿಸಿದ್ದರು.

ರೂಪಾಯಿ ಮುಂದಿನ ತಿಂಗಳು 81.50ಕ್ಕೆ ಅಪಮೌಲ್ಯಗೊಳ್ಳುವ ಸಾಧ್ಯತೆಯಿದೆ ಎಂದು ಐಸಿಐಸಿಐ ಸೆಕ್ಯೂರಿಟಿಸ್ ಕಳೆದ ವಾರ ಹೇಳಿತ್ತು.

ಈ ನಡುವೆ ಭಾರತೀಯ ಶೇರು ಮಾರುಕಟ್ಟೆಗಳು ಸತತ ನಾಲ್ಕನೇ ದಿನವಾದ ಸೋಮವಾರವೂ ಪತರಗುಟ್ಟಿವೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 953.70 ಅಂಕಗಳ ನಷ್ಟದೊಂದಿಗೆ 57,145.22ರಲ್ಲಿ ಮುಕ್ತಾಯಗೊಂಡಿದ್ದರೆ ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ ಫಿಫ್ಟಿ 311.05 ಅಂಕಗಳ ಕುಸಿತದೊಂದಿಗೆ 17,016.30ಕ್ಕೆ ದಿನದಾಟವನ್ನು ಮುಗಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X