Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಗಮನ ಸೆಳೆದ ಸರ್ವಧರ್ಮೀಯರ...

ಬೆಂಗಳೂರು: ಗಮನ ಸೆಳೆದ ಸರ್ವಧರ್ಮೀಯರ ಮಸೀದಿ ದರ್ಶನ..!

ವಾರ್ತಾಭಾರತಿವಾರ್ತಾಭಾರತಿ26 Sept 2022 9:56 PM IST
share
ಬೆಂಗಳೂರು: ಗಮನ ಸೆಳೆದ ಸರ್ವಧರ್ಮೀಯರ ಮಸೀದಿ ದರ್ಶನ..!

ಬೆಂಗಳೂರು, ಸೆ. 26: ಜಮಾಅತೆ ಇಸ್ಲಾಮಿ ಹಿಂದ್ ಜಯನಗರ ಘಟಕ ಇಲ್ಲಿನ ಬನ್ನೇರುಘಟ್ಟ ಮುಖ್ಯ ರಸ್ತೆಯ ಬಿಲಾಲ್ ಮಸೀದಿಯಲ್ಲಿ ಆಯೋಜಿಸಿದ್ದ ಮಸೀದಿ ದರ್ಶನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಮಸೀದಿಗೆ ಭೇಟಿ ನೀಡಿದ ಸರ್ವಧರ್ಮೀಯ ಮಹಿಳೆಯರು ಹಾಗು ಪುರುಷರು ಮಸೀದಿಯೊಳಗೆ ಬಂದು ಅಲ್ಲಿನ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ನಮಾಝ್ (ಪ್ರಾರ್ಥನೆ)ಗೆ ಕರೆಯುವ ಅಝಾನ್, ಪ್ರಾರ್ಥನೆಗೆ ಮುನ್ನ ನೆರೆವೇರಿಸುವ ವಝೂ (ಕೈ, ಕಾಲು, ಮುಖ ಸ್ವಚ್ಛಗೊಳಿಸುವ ಪ್ರಕ್ರಿಯೆ), ನಮಾಝ್ ಮಾಡುವ ಸಭಾಂಗಣ, ಖುತ್ಬಾ (ಪ್ರವಚನ) ನೀಡುವ ಸ್ಥಳ, ಗ್ರಂಥಾಲಯ, ಮಸೀದಿಯಲ್ಲಿ ಮಾಡುವ ಪ್ರಾರ್ಥನೆ, ಪ್ರವಚನಗಳ ಅರ್ಥ ಸಹಿತ  ಎಲ್ಲ ಮಾಹಿತಿ ಪಡೆದರು. ಮಸೀದಿ, ಮದ್ರಸ, ಕುರ್ ಆನ್ ಇತ್ಯಾದಿಗಳ ಬಗ್ಗೆ ತಮಗಿದ್ದ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು. 

ಜಮಾಅತೆ ಇಸ್ಲಾಮಿ ಹಿಂದ್ ಸಂಸ್ಥೆಯ ಕರೆಯಂತೆ ಇಡೀ ದೇಶದಲ್ಲಿ ಮಸ್ಜಿದ್ ದರ್ಶನ ನಡೆಯುತ್ತಿದೆ ಎಂದು ಆಯೋಜಕರು ಮಾಹಿತಿ ನೀಡಿ ಇಸ್ಲಾಮ್ ಧರ್ಮದ ಮೂಲ ತತ್ವಗಳ ಕುರಿತ ಮಾಹಿತಿ  ಪುಸ್ತಕಗಳನ್ನು ದರ್ಶನಕ್ಕೆ ಬಂದವರಿಗೆ ನೀಡಲಾಯಿತು.

ಮಸೀದಿಗೆ ಭೇಟಿ ನೀಡಿದ್ದ  ಹಿರಿಯ ಸಾಹಿತಿ ಡಾ.ಕೆ.ಮರಳುಸಿದ್ದಪ್ಪ, ನನ್ನ ಬಹುದಿನಗಳ ಆಸೆ ಈಡೇರಿದೆ. ಹಿಂದುತ್ವ, ಹಿಂದೂ ಧರ್ಮ ಎನ್ನುವುದರಲ್ಲೇ ನೂರೆಂಟು ಜಾತಿಗಳಿವೆ. ಬೇರೆ-ಬೇರೆ ಧರ್ಮ ಜಾತಿಗಳ ನಡುವೆ ಶಾಂತಿ, ಸಮಾನತೆಯ ಸಾರವನ್ನು ಅಗತ್ಯವಾಗಿ ಹರಡಬೇಕಿದೆ ಎಂದು ನುಡಿದರು.

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಮಾತನಾಡಿ, ಮಸೀದಿ ಕುರಿತು ಇರುವ ಗೊಂದಲ ಮತ್ತು ಆರೋಪಗಳ ಕುರಿತ ವಾಸ್ತವವನ್ನು ತಿಳಿಸಿ ಪರಸ್ಪರರ ನಡುವೆ ಕತ್ತಲಾಗುತ್ತಿರುವ ಸಂಶಯದ ಗೋಡೆ ಕೆಡವಿ ವಿಶ್ವಾಸದ ಸೇತುವೆ ನಿರ್ಮಿಸುವ ಉದ್ದೇಶದಿಂದ    ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X