Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ವಿನೋದಕ್ಕಿಂತಲೂ ಇಲ್ಲಿ ವಿಚಾರ...

ವಿನೋದಕ್ಕಿಂತಲೂ ಇಲ್ಲಿ ವಿಚಾರ ಮುಖ್ಯವಾಗುತ್ತದೆ

ಎಸ್. ಆರ್. ವಿಜಯಶಂಕರಎಸ್. ಆರ್. ವಿಜಯಶಂಕರ27 Sept 2022 10:35 AM IST
share
ವಿನೋದಕ್ಕಿಂತಲೂ ಇಲ್ಲಿ ವಿಚಾರ ಮುಖ್ಯವಾಗುತ್ತದೆ

ಇಲ್ಲಿನ ಲೇಖನಗಳು ಪ್ರಬಂಧದ ಸ್ವರೂಪದಲ್ಲಿದ್ದರೂ, ಅವುಗಳಲ್ಲಿ ಹಲವು ಲಲಿತ ಪ್ರಬಂಧಗಳ ಲಕ್ಷಣಗಳನ್ನೂ ಹೊಂದಿವೆ. ಆತ್ಮೀಯ ಶೈಲಿ, ಭಾರವಲ್ಲದ ವೈಚಾರಿಕತೆ ಹಾಗೂ ವಿನೋದದ ಧಾಟಿ ಲಲಿತ ಪ್ರಬಂಧದ ಮುಖ್ಯ ಗುಣಗಳು. ಇಲ್ಲಿನ ಪ್ರಬಂಧಗಳಲ್ಲಿ ವಿನೋದದ ಧಾಟಿಗೆ ಪ್ರಾಮುಖ್ಯವಿಲ್ಲ. ಅದರ ಬದಲು ಅವುಗಳು ನೆನಪುಗಳನ್ನು ಹೆಚ್ಚು ನಂಬಿವೆ. ಹಾಗಾಗಿ ಇಲ್ಲಿನ ಬರಹಗಳು ಪ್ರಬಂಧಗಳನ್ನು ನೆನಪಿಸುತ್ತವೆ. ಉದಾಹರಣೆಗೆ ‘ಕರುಬುವವರಿರಬೇಕಿರಬೇಕು...’ ಪ್ರಬಂಧ ಸಾಕಷ್ಟು ವಿನೋದವನ್ನು ಒಳಗೊಳ್ಳಲು ಅನುಕೂಲವಿರುವ ಬರಹ. ಆದರೆ ಉಮಾದೇವಿಯವರು ಅಲ್ಲಿ ವಿಶ್ಲೇಷಣೆ ಮತ್ತು ವಿವರಣೆಗಳ ಹದನಾದ ವೈಚಾರಿಕ ಬಂಧವನ್ನು ಆತ್ಮೀಯವಾದ ಶೈಲಿಯಲ್ಲಿಯೇ ಹೇಳಿದ್ದಾರೆ. ಅವರಿಗೆ ವಿನೋದಕ್ಕಿಂತಲೂ ವಿಚಾರ ಮುಖ್ಯ ಎಂಬುದು ಸಂಕಲನದ ಮೊದಲಿಗೇ ಭಾಸವಾಗುತ್ತದೆ. ಹಾಗಾಗಿ ಅವರಿಗೆ ಇನ್ನೊಬ್ಬರ ಭಾಗ್ಯಕ್ಕೆ ಕರುಬದೆ ತನ್ನ ಭಾಗ್ಯವನ್ನು ಬೇರೊಂದೆಡೆ ಕಾಣುವ ಸುರೇಶ ಸದಾ ನೆನಪಿನಲ್ಲುಳಿಯುತ್ತಾನೆ. ನೆನಪು ಅವರಿಗೆ ಪೂರಕ ಅನುಭವ. ಬದುಕಿನ ಹಲವು ವಿವರಗಳ ಬಂಧ ಅವರ ಪ್ರಬಂಧ. ಹಲವು ಸಲ ಅಲ್ಲಿನ ಲಾಲಿತ್ಯ ಗುಣದಿಂದಾಗಿ ಲಲಿತವಾದ ಪ್ರಬಂಧಗಳಂತೆ ಭಾಸವಾಗುತ್ತದೆ. ಭಾಷೆ, ವಿಚಾರ, ವಿವರಗಳು ಎಲ್ಲೂ ಓದುಗನಿಗೆ ತಲೆ ಮೇಲಿನ ಭಾರ ಅನಿಸುವುದಿಲ್ಲ. ಕುವೆಂಪು ಹೇಳಿರುವ ಹಾಗೆ ನಮ್ಮ ಮುಗ್ಧತೆ ಸದಾ ‘‘ಮಕ್ಕಳ ಸಂಗದೊಳೆಚ್ಚರಗೊಳ್ಳಲಿ ಆನಂದದ ಆ ದಿವ್ಯ ಶಿಶು.’’ ಪ್ರತೀ ಮನುಷ್ಯನೊಳಗೂ ಅಂತಹ ಒಂದು ಮುಗ್ಧ ಭಾವ ಇರುತ್ತದೆ. ಹಲವು ಸಲ ಅರಿವಿಗೆ ಬಾರದೆ ಅಡಗಿರುತ್ತದೆ. ಆನಂದ ಅದರ ಭಾವ ಮಾರ್ಗ. ಲೋಕಗ್ರಹಿಕೆಯ ಅಂತಹ ಒಂದು ಮುಗ್ಧಭಾವ ಇಲ್ಲಿನ ಹಲವು ಬರಹಗಳ ಪ್ರೇರಣೆ. ಅಂತಹ ಪ್ರಬಂಧಗಳನ್ನು ಕನ್ನಡಿಗರು ಸ್ವಾಗತಿಸಿ ಓದಲಿ ಎಂಬ ಹಾರೈಕೆ-ನನ್ನದು.

ಕೃತಿ: ಮುಳ್ಳುಬೇಲಿಯ ಹೂಬಳ್ಳಿ

ಪ್ರಬಂಧ ಸಂಕಲನ

ಲೇಖಕರು: ಕೆ. ಆರ್. ಉಮಾದೇವಿ ಉರಾಳ

ಬೆಲೆ: 120 ರೂ.

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೇಟ್ ಲಿ., ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001

ದೂರವಾಣಿ:080-22161900/ 22161901/ 22161902

share
ಎಸ್. ಆರ್. ವಿಜಯಶಂಕರ
ಎಸ್. ಆರ್. ವಿಜಯಶಂಕರ
Next Story
X