ಕೆಪಿಸಿಸಿ ವಕ್ತಾರರಾಗಿ ಎ.ಸಿ.ವಿನಯರಾಜ್ ನೇಮಕ
ಮಂಗಳೂರು, ಸೆ.27: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ, ಕೆಪಿಸಿಸಿ ಕೋ- ಆರ್ಡಿನೇಟರ್ ಆಗಿರುವ ಎ.ಸಿ.ವಿನಯರಾಜ್ ಅವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವಿನಯರಾಜ್ ಅವರು ಎನ್.ಎಸ್.ಯು.ಐ. ಘಟಕ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ, ಪ್ಯಾನಲಿಸ್ಟ್ ಆಗಿ ಕಾರ್ಯನಿರ್ವಹಿಸಿದ ಅನುಭವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೊಸ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರು ವಹಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story