Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ನಂತೂರ್ ವೃತ್ತದ ಬಳಿ ರಸ್ತೆಗಳ...

ಮಂಗಳೂರು: ನಂತೂರ್ ವೃತ್ತದ ಬಳಿ ರಸ್ತೆಗಳ ಅವ್ಯವಸ್ಥೆ ಖಂಡಿಸಿ ಯುವಕನಿಂದ ಮತ್ತೆ ಏಕಾಂಗಿ ಪ್ರತಿಭಟನೆ

‘ಮೋದಿ ಹೆ ತೋ ಮುಮ್ಕಿನ್ ಹೆ’ ಪೋಸ್ಟರ್ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ28 Sept 2022 2:07 PM IST
share
ಮಂಗಳೂರು: ನಂತೂರ್ ವೃತ್ತದ ಬಳಿ ರಸ್ತೆಗಳ ಅವ್ಯವಸ್ಥೆ ಖಂಡಿಸಿ ಯುವಕನಿಂದ ಮತ್ತೆ ಏಕಾಂಗಿ ಪ್ರತಿಭಟನೆ

ಮಂಗಳೂರು, ಸೆ.28: ಕೆಲ ಸಮಯದ ಹಿಂದೆ ನಗರದ ರಸ್ತೆಯ ಅವ್ಯವಸ್ಥೆಯಿಂದಾಗಿ ಅವಘಡಕ್ಕೀಡಾಗಿ ಮೃತಪಟ್ಟ ಯುವಕನ ಸಾವಿಗೆ ನ್ಯಾಯಕ್ಕೆ ಆಗ್ರಹಿಸಿ ನಗರದಲ್ಲಿ ಏಕಾಂಗಿ ಪ್ರತಿಭಟನೆಯ ಮೂಲಕ ಗಮನ ಸೆಳೆದಿದ್ದ ಯುವಕ ಲಿಖಿತ್ ರೈ ಇಂದು ಮತ್ತೆ ಪ್ರತಿಭಟನೆ ನಡೆಸಿದ್ದಾರೆ.

‘ಮೋದಿ ಹೆ ತೋ ಮುಮ್ಕಿನ್ ಹೆ’ ಎಂಬ ಬ್ಯಾನರ್ ಹಿಡಿದು ನಗರದ ನಂತೂರ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಲಿಖಿತ್‌ರೈ ಪ್ರಧಾನಿ ಮೋದಿಯವರು ಮತ್ತು ಮಂಗಳೂರಿಗೆ ಬನ್ನಿ ಆ ಮೂಲಕವಾದರೂ ರಸ್ತೆಗಳ ಹೊಂಡ ಮುಚ್ಚಲಿ ಎಂದು ಆಗ್ರಹಿಸಿದರು.

‘‘ರಾಷ್ಟ್ರೀಯ ಹೆದ್ದಾರಿಗಳು, ನಗರದ ರಸ್ತೆಗಳು ಮತ್ತೆ ಹೊಂಡಗಳಿಂದ ತುಂಬಿದ್ದರೂ ಯಾರೂ ಕೇಳುವವರಿಲ್ಲ. ಕೆಲ ಸಮಯದ ಹಿಂದೆ ನಾನು ರಸ್ತೆಗಿಳಿದು ಪ್ರತಿಭಟಿಸಿದ ಬಳಿಕ ಕೆಲವೆಡೆ ರಸ್ತೆ ದುರಸ್ತಿ ಕಾರ್ಯ, ಹೊಂಡ ತುಂಬಿಸುವ ಕಾರ್ಯ ಮಾಡಲಾಗಿತ್ತು. ಮತ್ತೆ ಅದೇ ಪರಿಸ್ಥಿತಿ. ಮಾಡಿರುವ ಪ್ಯಾಚ್‌ವರ್ಕ್ ಎದ್ದು ಹೋಗಿದೆ. ಪ್ರಧಾನಿ ಮೋದಿಯವರು ಮಂಗಳೂರಿಗೆ ಬರುವಾಗ ಎರಡು ದಿನದಲ್ಲಿ ಅವರು ಬರುವ ಕೂಳೂರು ರಸ್ತೆಯನ್ನು ಮೇಕಪ್ ಮಾಡಿ ಚಂದ ಮಾಡಲಾಗಿತ್ತು. ಅದರ ಹಿಂದೆ ಅದೆಷ್ಟು ಸಮಯ ಆ ರಸ್ತೆಯನ್ನು ಕೇಳುವವರಿರಲಿಲ್ಲ. ಬ್ಯಾಂಕ್ ಹಗರಣ ಇನ್ಯಾವುದೋ ರೀತಿಯ ಹಗರಣಗಳ ಬಗ್ಗೆ ನಾವು ಕೇಳಿದ್ದೇವೆ. ಆದರೆ ನಮ್ಮ ಅಧಿಕಾರಿಗಳು, ಜನಪ್ರತಿನಿಧಿಗಳು ನಮ್ಮ ದೇಶದ ಪ್ರಧಾನಿಯವರಿಗೆ ಮೋಸ ಮಾಡಿದ್ದಾರೆ. ಅವರು ಬರುವಾಗ ರಸ್ತೆ ಅಂದಗೊಳಿಸಿ ಮಂಗಳೂರು ಸ್ಮಾರ್ಟ್ ಸಿಟಿ ಆಗಿದೆ ಎಂಬುದನ್ನು ಬಿಂಬಿಸಲಾಗಿದೆ. ಆದರೆ ಇವರ ಹಣೆಬರಹ ನಮಗೆ ಗೊತ್ತು. ಪ್ರಧಾನಿಯವರು ಒಮ್ಮೆ ಸಕಲೇಶಪುರ ರಸ್ತೆಯಿಂದ ಮಂಗಳೂರಿಗೆ ಬರಲಿ’’ ಎಂದು ಪ್ರತಿಭಟನಾ ನಿರತ ಲಿಖಿತ್ ರೈ ಹೇಳಿದರು.

‘‘ನಮ್ಮ ದೇಶದ ಪ್ರಧಾನಿಗೆ ನಾವು ಗೌರವ ಕೊಡುತ್ತೇವೆ. ಅದರಿಂದಾಗಿಯೇ ಅಂದು ಅವರು ಬರುವ ಸಂದರ್ಭದಲ್ಲಿಯೂ ಅವರಿಗೆ ಗೌರವ ನೀಡಿ ಯಾವುದೇ ಪ್ರತಿಭಟನೆ ನಡೆಸಿಲ್ಲ. ಮೋದಿಯವರ ಮೇಲೆ ನಂಬಿಕೆ ಇನ್ನೂ ಇದೆ. ನನಗೆ ಯಾವುದೇ ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಮೇಲೆ ಯಾವುದೇ ದ್ವೇಷ ಇಲ್ಲ. ನಾನು ಈ ಹಿಂದೆ ಬೀದಿಗಿಳಿದು ಪ್ರತಿಭಟಿಸಿದಾಗ ಮನಪಾ ಅಧಿಕಾರಿಗಳು ಬಂದು ಒಂದಷ್ಟು ದಿನಗಳು ಬೇಕು ಎಂದು ಹೇಳಿಕೊಂಡಿದ್ದರು. ಅದರಂತೆ ಸುಮ್ಮನಿದ್ದೆ. ಆದರೆ ಇಷ್ಟು ದಿನ ಆದರೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಮಾತ್ರ ಇನ್ನೂ ನಿದ್ದೆಯಿಂದ ಎದ್ದಂತಿಲ್ಲ’’ ಎಂದು ಲಿಖಿತ್ ರೈ ದೂರಿದರು.

ಅಪಘಾತ ಆಗಿ ಯುವಕ ಮೃತಪಟ್ಟ ಬಗ್ಗೆ ಪ್ರತಿಕ್ರಿಯಿಸಿರುವ ಅಧಿಕಾರಿಗಳು ಅದು ಆತ ವೇಗವಾಗಿ ಚಲಾಯಿಸಿದ ಕಾರಣ ಎಂದಿದ್ದಾರೆ. 2018ರಿಂದ 2020 ರವರೆಗೆ ಮಂಗಳೂರಿನಿಂದ ಬೆಂಗಳೂರು ರಸ್ತೆಯಲ್ಲಿ ಹೊಂಡಗಳಿಂದ ಸುಮಾರು ಐದು ಸಾವಿರದಷ್ಟು ಪ್ರಯಾಣಿಕರು ಈ ರಸ್ತೆಗಳ ಅವ್ಯವಸ್ತೆಯಿಂದ ಸಾವಿಗೀಡಾಗಿದ್ದಾರೆ. ಲಾಕ್‌ಡೌನ್ ಸಂದರ್ಬದಲ್ಲಿಯೂ ಅಪಘಾತಗಳಿಗೆ ಬಲಿಯಾಗಿದ್ದಾರೆ. ಇದಕ್ಕೆ ಯಾರು ಹೊಣೆ. ಪ್ರಧಾನಿ ಮೋದಿ ಬರುವಾಗ ರಸ್ತೆ ದುರಸ್ತಿ ಮಾಡಲು ಆಗುತ್ತದೆ ಎಂದಾದರೆ ಅವರು ಮತ್ತೆ ಮಂಗಳೂರಿಗೆ ರಸ್ತೆ ಮಾರ್ಗವಾಗಿ ಬರಲಿ’’ ಎಂದು ಹೇಳಿದರು.

‘‘ ಇಂತಹ ರಸ್ತೆಗಳಿಗೆ ನಾವು ರಸ್ತೆ ತೆರಿಗೆ, ದಂಡ ಯಾಕೆ ಕಟ್ಟಬೇಕು. ನಾವು ಕಟ್ಟಿರುವ ತೆರಿಗೆ ಹಣವನ್ನು ನಮಗೆ ವಾಪಾಸು ಕೊಡಿಸಿ. ಮಂಗಳೂರು ದಸರಾ ಸಂಭ್ರಮಕ್ಕೆ ನಮ್ಮ ಸ್ನೇಹಿತರು, ಕುಟುಂಬದವರನ್ನು ಮಂಗಳೂರಿಗೆ ಕರೆಸುವುದಾದರೂ ಯಾವ ಧೈರ್ಯದಲ್ಲಿ. ಅವರು ಬರುವ ರಸ್ತೆಯಲ್ಲಿ ಜೀವಕ್ಕೆ ರಕ್ಷಣೆಯೇ ಇಲ್ಲ. ಗುಂಡಿಗಳ ನಡುವೆ ರಾತ್ರಿ ಹೊತ್ತು ಹೆದ್ದಾರಿ ರಸ್ತೆಗಳಲ್ಲಿ ಬೀದಿ ದೀಪಗಳೂ ಸಮರ್ಪಕವಾಗಿಲ್ಲ. ಆರು ವರ್ಷದಿಂದ ನಾನು ಬಿಜೆಪಿಗೆ ಮತ ಚಲಾಯಿಸಿದ್ದೇನೆ. ನನ್ನ ತೆರಿಗೆ ಹಣ, ನನ್ನ ಮತಕ್ಕಾಗಿ ನ್ಯಾಯ ಕೇಳುವ ಅಧಿಕಾರ ನನಗಿದೆ. ಅದಕ್ಕಾಗಿ ಬೀದಿಗಿಳಿದಿದ್ದೇನೆ’’ ಎಂದು ಲಿಖಿತ್ ರೈ ಆಕ್ರೋಶ ವ್ಯಕ್ತಪಡಿಸಿದರು.

‘‘ನಾನು ಕಾಂಗ್ರೆಸ್ಸಿಗ, ನಾನು ಕಮ್ಯುನಿಸ್ಟ್, ಪ್ರತಿಭಟನೆಗೆ ನನಗೆ ಹಣ ಬಂದಿದೆ ಎಂದೆಲ್ಲಾ ಆರೋಪ ಮಾಡಲಾಗಿದೆ. ನಾನು ಉದ್ಯೋಗ ಮಾಡುತ್ತೇನೆ. ನನ್ನ ಅಕೌಂಟ್ ಬಗ್ಗೆ ತನಿಖೆ ನಡೆಸಲಿ. ಈ ರೀತಿ ಆರೋಪ ಮಾಡಿ ಮೋಸ ಮಾಡುವುದು ಬೇಡ. ಮತ ಹಾಕಿ ಮನೆಯಲ್ಲಿ ಕುಳಿತರೆ ಮಾತ್ರವೇ ದೇಶಭಕ್ತರಾಗುವುದೇ? ಮತ ಚಲಾಯಿಸಿ, ನಮ್ಮ ಹಕ್ಕಗಾಗಿ ರಸ್ತೆಗಿಳಿದಿದರೆ ಅದು ಪ್ರಚಾರ, ದೇಶದ್ರೋಹ ಹೇಗಾಗುತ್ತದೆ. ಪ್ರಧಾನಿ ಮೋದಿಯವರಿಗೆ ಈವರೆಗೂ ಬೆಂಬಲ ನೀಡಿ ನಾನು ಇಲ್ಲಿ ಧೈರ್ಯವಾಗಿ ನಿಂತಿದ್ದೇನೆ. ಮತ ಚಲಾಯಿಸಿ ನಮಗೆ ಕೇಳುವ ಹಕ್ಕಿಲ್ಲ ಎಂದಾದರೆ ಇದಕ್ಕಿಂತ ದುರ್ಗತಿ ಬೇರೆ ಏನಿದೆ?’’ ಎಂದು ಲಿಖಿತ್ ರೈ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X