Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೊಜ್ಜು, ಹಸಿವಿನ ಸಮಸ್ಯೆ ನಿವಾರಣೆಗೆ...

ಬೊಜ್ಜು, ಹಸಿವಿನ ಸಮಸ್ಯೆ ನಿವಾರಣೆಗೆ ಶತಕೋಟಿ ಡಾಲರ್ ಯೋಜನೆ ಘೋಷಿಸಿದ ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ29 Sept 2022 12:09 AM IST
share
ಬೊಜ್ಜು, ಹಸಿವಿನ ಸಮಸ್ಯೆ ನಿವಾರಣೆಗೆ ಶತಕೋಟಿ ಡಾಲರ್ ಯೋಜನೆ ಘೋಷಿಸಿದ ಅಮೆರಿಕ

ವಾಷಿಂಗ್ಟನ್, ಸೆ.28: ಅಮೆರಿಕ ಎದುರಿಸುತ್ತಿರುವ ಅವಳಿ ಸವಾಲುಗಳಾದ ಸ್ಥೂಲಕಾಯತೆ ಮತ್ತು ಹಸಿವಿನ ಸಮಸ್ಯೆಯನ್ನು ಅಂತ್ಯಗೊಳಿಸಲು ಪ್ರಮುಖ ಸಂಸ್ಥೆಗಳ ನೆರವಿನೊಂದಿಗೆ ಬಹು ಮಿಲಿಯ ಡಾಲರ್ ಮೊತ್ತದ ಯೋಜನೆಯನ್ನು ಶ್ವೇತಭವನ ಬುಧವಾರ ಘೋಷಿಸಿದೆ.

ಅಮೆರಿಕದ ಸುಮಾರು 42% ವಯಸ್ಕರು ಸ್ಥೂಲಕಾಯವನ್ನು ಹೊಂದಿದ್ದಾರೆ ಮತ್ತು ಅಮೆರಿಕದ ಸುಮಾರು 10% ಕುಟುಂಬ ಆಹಾರ ಅಭದ್ರತೆಯಿಂದ ಬಳಲುತ್ತಿರುವುದಾಗಿ ಅಮೆರಿಕ ಸರಕಾರದ ಅಂಕಿಅಂಶ ಹೇಳಿದೆ. ಈ ಹಿನ್ನೆಲೆಯಲ್ಲಿ, ಅವಳಿ ಸವಾಲುಗಳಿಗೆ ಸಮರ್ಪಕ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೈಡನ್ ಸರಕಾರ ಆಹಾರ, ಪೌಷ್ಟಿಕಾಂಶ ಮತ್ತು ಆಹಾರ ಪದ್ಧತಿ(ಪಥ್ಯ)ದ ಕುರಿತು ಶೃಂಗಸಭೆಯನ್ನು ಆಯೋಜಿಸಿದೆ. 

ಅಮೆರಿಕದಲ್ಲಿ 2030ರೊಳಗೆ ಹಸಿವು ಹಾಗೂ ಆಹಾರ ಪದ್ಧತಿಗೆ ಸಂಬಂಧಿಸಿದ ಕಾಯಿಲೆಗಳನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಸರಕಾರ, ಸಂಸತ್ತು, ಖಾಸಗಿ ಸಂಸ್ಥೆಗಳು ಹಾಗೂ ಸಮಾಜ ಜತೆಗೂಡಿ ಕಾರ್ಯನಿರ್ವಹಿಸುವ ಅಗತ್ಯವನ್ನು ಶೃಂಗಸಭೆಯಲ್ಲಿ ಬೈಡನ್ ಪ್ರತಿಪಾದಿಸಲಿದ್ದಾರೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಆಹಾರ ಪದ್ಧತಿಗೆ ಸಂಬಂಧಿಸಿದ ಇಂತಹ ಬೃಹತ್ ಯೋಜನೆಗೆ ಸಂಸತ್ ನಿಧಿ ಒದಗಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ , ಅಧ್ಯಕ್ಷ ಸ್ಥಾನದ ಅಧಿಕಾರವನ್ನು ಬಳಸಿಕೊಂಡು ಈ ಯೋಜನೆಯಲ್ಲಿ ಖಾಸಗಿ ವಲಯದ ಬೃಹತ್ ಸಂಸ್ಥೆಗಳನ್ನು ತೊಡಗಿಸಿಕೊಳ್ಳುವ ಪ್ರಯತ್ನದಲ್ಲಿ  ಬೈಡನ್ ಯಶಸ್ವಿಯಾಗಿದ್ದಾರೆ ಮತ್ತು ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಡೀ ಸಮಾಜದ ಪ್ರತಿಕ್ರಿಯೆಗಳನ್ನು ಒಟ್ಟುಗೂಡಿಸಿದರೆ ಮಾತ್ರ ನಾವು ಯಶಸ್ವಿಯಾಗಲಿದ್ದೇವೆ ಎಂಬುದು ನಮಗೆ ತಿಳಿದಿದೆ. ಆಸ್ಪತ್ರೆಗಳಿಂದ ಟೆಕ್ ಸಂಸ್ಥೆಗಳವರೆಗೆ ಸರಕಾರ ಮತ್ತು ಖಾಸಗಿ ಕ್ಷೇತ್ರದ  100ಕ್ಕೂ ಅಧಿಕ ಸಂಘಟನೆಗಳು 8 ಶತಕೋಟಿ ಡಾಲರ್ ನೆರವಿನ ವಾಗ್ದಾನ ನೀಡಿವೆ  ಎಂದು ಅಧಿಕಾರಿಗಳು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X