Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019ರ ದೇಶದ್ರೋಹ ಪ್ರಕರಣದಲ್ಲಿ ಶರ್ಜೀಲ್‌...

2019ರ ದೇಶದ್ರೋಹ ಪ್ರಕರಣದಲ್ಲಿ ಶರ್ಜೀಲ್‌ ಇಮಾಮ್‌ಗೆ ಜಾಮೀನು ನೀಡಿದ ದಿಲ್ಲಿ ಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ30 Sept 2022 4:31 PM IST
share
2019ರ ದೇಶದ್ರೋಹ ಪ್ರಕರಣದಲ್ಲಿ ಶರ್ಜೀಲ್‌ ಇಮಾಮ್‌ಗೆ ಜಾಮೀನು ನೀಡಿದ ದಿಲ್ಲಿ ಕೋರ್ಟ್‌

ಹೊಸದಿಲ್ಲಿ,ಸೆ.22: 2019ರಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾನಿಲಯದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಜವಾಹರಲಾಲ್ ನೆಹರೂ ವಿವಿ ವಿದ್ಯಾರ್ಥಿ ಶರ್ಜಿಲ್ ಇಮಾಮ್ಗೆ ದೇಶದ್ರೋಹದ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.

ದಿಲ್ಲಿಯ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಅನುಜ್ ಅಗರ್ವಾಲ್ ಈ ಪ್ರಕರಣದಲ್ಲಿ ಶರ್ಜಿಲ್ ಇಮಾಮ್ಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.

2019ರ ಡಿಸೆಂಬರ್ 13ರಂದು ಶಜಿಲ್ರ್ ಇಮಾಮ್ ಮಾಡಿದ ಭಾಷಣವು, ದಿಲ್ಲಿಯ ನ್ಯೂಫ್ರೆಂಡ್ಸ್ ಕಾಲನಿ ಪ್ರದೇಶದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತೆಂದು ಆರೋಪಿಸಿ ದಿಲ್ಲಿ ಪೊಲೀಸರು ಆತನ ವಿರುದ್ಧ ಭಾರತೀಯ ದಂಡಸಂಹಿತೆಯ 12ಎ (ದೇಶದ್ರೋಹ) ಹಾಗೂ 153ಎ ( ವಿವಿಧ ವರ್ಗಗಳ ನಡುವೆ ಶತ್ರುತ್ವಕ್ಕೆ ಪ್ರಚೋದನೆ) ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿದ್ದಾರೆ.

ಶರ್ಜಿಲ್ ಇಮಾಮ್ 2020ರ ಜನವರಿಯಿಂದೀಚೆಗೆ ನ್ಯಾಯಾಂಗ ಕಸ್ಟಡಿಯಲ್ಲಿದ್ದಾರೆ. 2020 ದಿಲ್ಲಿ ಗಲಭೆ ಪ್ರಕರಣದ ಸಂಚಿನಲ್ಲಿ ಶರ್ಜಿಲ್ ಆರೋಪಿಯೆಂದು ದಿಲ್ಲಿ ಪೊಲೀಸರು ಪರಿಗಣಿಸಿರುವುದರಿಂದ ಅವರು ಜೈಲಿನಲ್ಲಿಯೇ ಉಳಿಯಬೇಕಾಗಿದೆ. ಶರ್ಜಿಲ್ ಅವರನ್ನು 2020, ಜನವರಿ 28ರಂದು ಬಿಹಾರದ ಜಹನಾಬಾದ್ನಲ್ಲಿ ಬಂಧಿಸಲಾಗಿತ್ತು. 2020ರ ಫೆಬ್ರವರಿ ಕೊನೆಯಲ್ಲಿ ದಿಲ್ಲಿ ಗಲಭೆ ಭುಗಿಲೆದ್ದಿತ್ತು.

ಪೌರತ್ವ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿ ಆಂದೋಲನದ ಪ್ರಮುಖ ನಾಯಕರಾದ ಶರ್ಜಿಲ್ಅವರ ವಿರುದ್ಧ ದಿಲ್ಲಿಯಲ್ಲಿ ಎರಡು ಪ್ರಕರಣಗಳು ಬಾಕಿಯುಳಿದಿರುವುದಾಗಿ ಅವರ ಸೋದರ ಮುಝಾಮ್ಮಿಲ್ ಇಮಾಮ್ ಟ್ವಿಟ್ಟರ್ನಲ್ಲಿ ಬರೆದಿದ್ದಾರೆ.

ಅಸ್ಸಾಂ, ಮಣಿಪುರ ಹಾಗೂ ಅರುಣಾಚಲ ಪ್ರದೇಶಗಳಲ್ಲಿಯೂ ಶರ್ಜಿಲ್ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾಷಣ ವಾಡಿದ ಸಂದರ್ಭದಲ್ಲಿ ಶರ್ಜಿಲ್ ಅವರು  ಅಸ್ಸಾಂನ ಹೆದ್ದಾರಿಗಳಲ್ಲಿ ವಾಹನ ಸಂಚಾರ ತಗೆ ಚಕ್ಕಾ ಜಾಮ್ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಈ ಪ್ರತಿಭಟನೆಯಿಂದ ಈಶಾನ್ಯ ಭಾರತವು ಭಾರತದ ಉಳಿದ ಭಾಗದಿಂದ ಸಂಪರ್ಕವನ್ನುಕಡದುಕೊಳ್ಳಲಿದ್ದು,ಸರಕಾರವು ನಿರ್ವಾಹವಿಲ್ಲದೆ ಪ್ರತಿಭಟನಕಾರರ ಬೇಡಿಕೆಗಳನ್ನು ಆಲಿಸಬೇಕಾಗುತ್ತದೆಎಂದುಹೇಳಿದ್ದರು.

ತಾನು ಈಗಾಗಲೇ ಜೈಲಿನಲ್ಲಿ 31 ತಿಂಗಳುಗಳನ್ನು ಕಳೆದಿರುವುದರಿಂದ ಭಾರತೀಯ ದಂಡಸಂಹಿತೆಯ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 436 ಎ ಅನ್ವಯ ತನಗೆ ಜಾಮೀನು ಬಿಡುಗಡೆಗೊಳಿಸಬೇಕೆಂದು ಕೋರಿ ಶರ್ಜಿಲ್ ಮೇಲ್ಮನವಿ ಸಲ್ಲಿಸಿದ ಬಳಿಕ ಅವರ ಅರ್ಜಿಯನ್ನು ಪರಿಶೀಲಿಸುವ ದಿಲ್ಲಿ ಹೈತಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ತಿಳಿಇತ್ತು.

 ಇದೇ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಬಿಡುಗಡೆ ಕೋರಿ 2021ರಲ್ಲಿ ಶಾರ್ಜಿಲ್ ಇಮಾಮ್ ಸಲ್ಲಿಸಿದ ಅರ್ಜಿಯನ್ನು ದಿಲ್ಲಿ ನ್ಯಾಯಾಲಯವು ತಿರಸ್ಕರಿಸಿತ್ತು. ಶಾರ್ಜಿಲ್ ಮಾಡಿದ ಭಾಷಣವು ಪ್ರಚೋದನಕಾರಿಯಾಗಿತ್ತು ಎಂದು ಅದು ಅಭಿಪ್ರಾಯಿಸಿತ್ತು. ಶಾರ್ಜಿಲ್ ವಿರುದ್ಧ ಪ್ರಕರಣಗಳಿಗೆ ಸಂಬಂಧಿಸಿ ದಿಲ್ಲಿ ಪೊಲೀಸರ ನಿಯಮಗಳನ್ನು ಉಲ್ಲಂಘಿಸಿ ತನಿಖೆಗಳನ್ನು ನಡೆಸಿದ್ದಾರೆಂದು ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X