Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಹಣ ಬಲ ಬಳಸಿ ರಾಜಕೀಯ ಪಕ್ಷಗಳನ್ನು...

ಬಿಜೆಪಿ ಹಣ ಬಲ ಬಳಸಿ ರಾಜಕೀಯ ಪಕ್ಷಗಳನ್ನು ದುರ್ಬಲಗೊಳಿಸುತ್ತಿದೆ: ರಾಕೇಶ್ ಟಿಕಾಯತ್

ವಾರ್ತಾಭಾರತಿವಾರ್ತಾಭಾರತಿ30 Sept 2022 11:42 PM IST
share
ಬಿಜೆಪಿ ಹಣ ಬಲ ಬಳಸಿ ರಾಜಕೀಯ ಪಕ್ಷಗಳನ್ನು ದುರ್ಬಲಗೊಳಿಸುತ್ತಿದೆ: ರಾಕೇಶ್ ಟಿಕಾಯತ್

ಬಹರಾಯಿಚ್, ಸೆ. 30: ಬಿಜೆಪಿ ‘‘ಹಣ ಬಲ’’ ಬಳಸಿ ಎಲ್ಲ ರಾಜಕೀಯ ಪಕ್ಷಗಳನ್ನು ದುರ್ಬಲಗೊಳಿಸುತ್ತಿದೆ. ಇದರಿಂದ ಅದು ಏಕಾಂಗಿಯಾಗಿ ದೇಶವನ್ನು ಆಳಲು ಸಾಧ್ಯವಾಗಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು) ನಾಯಕ ಟಿಕಾಯತ್ ಶುಕ್ರವಾರ ಆರೋಪಿಸಿದ್ದಾರೆ.

ಈ ವರ್ಷ  ಆರಂಭದಲ್ಲಿ ನಡೆದ ಉತ್ತರಪ್ರದೇಶ ಚುನಾವಣೆಯ ಸಂದರ್ಭ 100ಕ್ಕೂ ಅಧಿಕ ವಿಧಾನ ಸಭೆ ಸ್ಥಾನಗಳ ಫಲಿತಾಂಶವನ್ನು ಚುನಾವಣಾ ಅಧಿಕಾರಿಗಳು ತಿರುಚಿದ್ದಾರೆ. ಇವಿಎಂ ಬಿಜೆಪಿಯ ಅಣತಿಯಂತೆ ಕಾರ್ಯ ನಿರ್ವಹಿಸುತ್ತದೆ ಎಂದು ಅವರು ಹೇಳಿದ್ದಾರೆ.
ಶ್ರಾವಷ್ಠಿಗೆ ತೆರಳುತ್ತಿದ್ದ ಟಿಕಾಯತ್ ಅವರ ವಾಹನವನ್ನು ಇಲ್ಲಿನ ಜಿಲ್ಲಾಧಿಕಾರಿ ಕಾರ್ಯಾಲಯದ ಎದುರು ತಡೆದು ನಿಲ್ಲಿಸಲಾಗಿತ್ತು. ಈ ಸಂದರ್ಭ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

‘‘ಅವರು (ಬಿಜೆಪಿ) ಪ್ರತಿಪಕ್ಷವನ್ನು ಸಂಪೂರ್ಣವಾಗಿ ನಾಶಗೊಳಿಸಲು ಬಯಸಿದ್ದಾರೆ. ಆದುದರಿಂದ ಏಕೈಕ ಪಕ್ಷ ದೇಶದ ಆಡಳಿತ ನಡೆಸುತ್ತಿದೆ. ಅವರು ಹಣ ಬಲವನ್ನು ಬಳಸಿ ಎಲ್ಲ ರಾಜಕೀಯ ಪಕ್ಷಗಳನ್ನು ದುರ್ಬಲಗೊಳಿಸುತ್ತಿದ್ದಾರೆ’’ ಎಂದು ಅನೌಪಚಾರಿಕ ಸಂವಾದದ ಸಂದರ್ಭ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ಅವರು ಹೇಳಿದರು.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಪ್ರಶ್ನಿಸಿದಾಗ ಟಿಕಾಯತ್, ದೇಶವನ್ನು ಸಂಘಟಿಸಲು ಇದು ಸರಿಯಾದ ನಡೆ. ಆದರೆ, ಇದನ್ನು ಈ ಮೊದಲೇ ನಡೆಸಬೇಕಿತ್ತು ಎಂದರು. ‘‘ಸಂಪೂರ್ಣ ಪ್ರತಿಪಕ್ಷ ಬೀದಿಗಿಳಿಯಬೇಕು. ಇಲ್ಲದೇ ಇದ್ದರೆ, ಮುಂದಿನ ದಿನಗಳಲ್ಲಿ ಎಲ್ಲ ಚಳುವಳಿಗಳು ಹಾಗೂ ರಾಜಕೀಯ ಪಕ್ಷಗಳು ನಿಷೇಧಕ್ಕೆ ಒಳಗಾಗಲಿವೆ’’ ಎಂದು ಟಿಕಾಯತ್ ಹೇಳಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಕ್ಕೆ ಕೇಂದ್ರ ಸರಕಾರ ನಿಷೇಧ ವಿಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಪ್ಪೆಸಗುತ್ತಿರುವ ಯಾವುದೇ ಸಂಘಟನೆಯನ್ನು ನಿಯಂತ್ರಿಸುವುದನ್ನು ಸಮರ್ಥಿಸಿಕೊಳ್ಳಬಹುದು. ಆದರೆ, ಸರಕಾರ ಯಾವುದೇ ಸಮುದಾಯ ವಿರುದ್ಧ ತಾರತಮ್ಯ ಎಸಗಬಾರದು ಎಂದರು. ಬೆಳೆಗೆ ಕನಿಷ್ಠ ಬೆಂಬಲ ನೀಡುವಂತೆ ಹಾಗೂ ಅದಾನಿಯಂತಹ ಕಾರ್ಪೊರೇಟರ್‌ಗಳು ಭೂಮಿಯನ್ನು ಲೂಟಿಗೈಯುವುದನ್ನು ತಡೆಯುವಂತೆ ಆಗ್ರಹಿಸಿ ರೈತರು ದೇಶಾದ್ಯಂತ ಚಳವಳಿ ನಡೆಸಲಿದ್ದಾರೆ ಎಂದು ಟಿಕಾಯತ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X