Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಖಿಂಪುರಖೇರಿ ಹಿಂಸಾಚಾರ ಸಂತ್ರಸ್ತರ...

ಲಖಿಂಪುರಖೇರಿ ಹಿಂಸಾಚಾರ ಸಂತ್ರಸ್ತರ ಕುಟುಂಬಕ್ಕೆ ಇದುವರೆಗೆ ಪರಿಹಾರ ಸಿಕ್ಕಿಲ್ಲ: ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸ

ವಾರ್ತಾಭಾರತಿವಾರ್ತಾಭಾರತಿ1 Oct 2022 1:53 PM IST
share
ಲಖಿಂಪುರಖೇರಿ ಹಿಂಸಾಚಾರ ಸಂತ್ರಸ್ತರ ಕುಟುಂಬಕ್ಕೆ ಇದುವರೆಗೆ ಪರಿಹಾರ ಸಿಕ್ಕಿಲ್ಲ: ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸ

ಹೊಸದಿಲ್ಲಿ, ಅ. 9: ಕಳೆದ ವರ್ಷ ಲಖಿಂಪುರಖೇರಿಯಲ್ಲಿ ನಡೆದ  ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಇದುವರೆಗೆ ಪರಿಹಾರ ಸಿಕ್ಕಿಲ್ಲ  ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದೆ ಪತ್ರದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.‘‘ಮೃತಪಟ್ಟ ರೈತರು ಹಾಗೂ ಪ್ರತಿಭಟನಕಾರರೊಂದಿಗೆ ಸರಕಾರ ಒಪ್ಪಂದಕ್ಕೆ ಬಂದಿತ್ತು. ಆದರೆ, ಈ ಒಪ್ಪಂದದ ಹೆಚ್ಚಿನ ಅಂಶಗಳು ಇದುವರೆಗೆ ಅನುಷ್ಠಾನಗೊಂಡಿಲ್ಲ’’ ಎಂದು ಪತ್ರದಲ್ಲಿ ಹೇಳಲಾಗಿದೆ. 

ಕೇಂದ್ರ ಸಚಿವ ಅಜಯ್ ಮಿಶ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಅವರನ್ನು ಆಗ್ರಹಿಸಿದೆ. ಕಳೆದ ವರ್ಷ ಅಕ್ಟೋಬರ್ ೩ರಂದು ಲಖಿಂಪುರಖೇರಿಯಲ್ಲಿ ನಡೆದ ಹಿಂಸಾಚಾರ ಭಾಗಿಯಾದ ಆರೋಪಿಗಳಲ್ಲಿ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಕೂಡ ಇದ್ದಾರೆ.ಕೇಂದ್ರ ಸರಕಾರದ ಕೃಷಿ ಕಾಯ್ದೆಗಳ ವಿರುದ್ಧ ಲಖಿಂಪುರಖೇರಿ ಜಿಲ್ಲೆಯಲ್ಲಿ ಅಕ್ಟೋಬರ್ ೩ರಂದು ನಡೆದ ಪ್ರತಿಭಟನೆ ಸಂದರ್ಭ ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ೮ ಮಂದಿ ಮೃತಪಟ್ಟಿದ್ದರು. ಪ್ರತಿಭಟನಕಾರರ ಮೇಲೆ ಹರಿದ ವಾಹನ ಆಶಿಶ್ ಮಿಶ್ರಾ ಅವರಿಗೆ ಸೇರಿದ್ದು ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಈ ಕೃಷಿ ಕಾಯ್ದೆಗಳನ್ನು ಕೇಂದ್ರ ಸರಕಾರ ಅನಂತರ ಹಿಂಪಡೆದುಕೊಂಡಿತ್ತು. 

ಈ ಪ್ರಕರಣದಲ್ಲಿ ಮಿಶ್ರಾ ಅವರನ್ನು ಅಕ್ಟೋಬರ್ ೯ರಂದು ಮೊದಲು ಬಂಧಿಸಲಾಗಿತ್ತು. ಫೆಬ್ರವರಿ ೧೦ರಂದು ಅಲಹಾಬಾದ್ ಉಚ್ಚ ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು. ಅನಂತರ ಫೆಬ್ರವರಿ ೧೫ರಂದು ಅವರು ಜೈಲಿನಿಂದ ಬಿಡುಗಡೆಯಗಿದ್ದರು.ಆಶಿಶ್ ಮಿಶ್ರಾ ಅವರಿಗೆ ಜಾಮೀನು ನೀಡಿರುವುದನ್ನು ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಉಚ್ಚ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು ಹಾಗೂ ಆಶಿಶ್ ಮಿಶ್ರಾನ ಜಾಮೀನನ್ನು ಎಪ್ರಿಲ್ ೧೮ರಂದು ರದ್ದುಗೊಳಿಸಿತ್ತು. ಆಶಿಶ್ ಮಿಶ್ರಾ ಪ್ರಸಕ್ತ ಲಖಿಂಪುರ  ಕಾರಾಗೃಹದಲ್ಲಿ ಇದ್ದಾರೆ.

ಪತ್ರದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ, ಮಿಶ್ರಾ ಅವರನ್ನು ಸಚಿವರನ್ನಾಗಿ ಮುಂದುವರಿಸಿರುವುದು ಅವಮಾನಕಾರಿ. ಅಲ್ಲದೆ, ಕೇಂದ್ರ ಸರಕಾರ ಅವರನ್ನು ರಕ್ಷಿಸುತ್ತಿದೆ ಎಂದು ಹೇಳಿದೆ.ಪ್ರತಿ ಸಂತ್ರಸ್ತರ ಕುಟುಂಬದ ಸದಸ್ಯನಿಗೆ ಸರಕಾರಿ ಉದ್ಯೋಗ ನೀಡುವ ಭರವಸೆಯನ್ನು ಕೇಂದ್ರ ಸರಕಾರ ಪೂರೈಸಿಲ್ಲ. ಸರಕಾರ ದಾಖಲಿಸಿದ ಸುಳ್ಳು ಪ್ರಕರಣದಿಂದ ನಾಲ್ವರು ಪ್ರತಿಭಟನಕಾರರು ಈಗಲೂ ಕಾರಾಗೃಹದಲ್ಲಿ  ಇದ್ದಾರೆ ಎಂದು ಅದು ಆರೋಪಿಸಿದೆ.

ಅವರ ವಿರುದ್ಧದ ಆರೋಪವನ್ನು ಹಿಂಪಡೆಯಲಾಗುವುದು ಹಾಗೂ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಸರಕಾರ ನಮಗೆ ತಿಳಿಸಿತ್ತು  ಎಂದು ಪತ್ರದಲ್ಲಿ ಹೇಳಲಾಗಿದೆ. ಹಿಂಸಾಚಾರದ ಮೊದಲ ವರ್ಷದ ಹಿನ್ನೆಲೆಯಲ್ಲಿ ಅಕ್ಟೋಬರ್ ೩ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X