Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ಪರ್ಧಾತ್ಮಕ ಕಾಲಘಟ್ಟದ ಸವಾಲು...

ಸ್ಪರ್ಧಾತ್ಮಕ ಕಾಲಘಟ್ಟದ ಸವಾಲು ಸಮರ್ಥವಾಗಿ ಎದುರಿಸಿ ಮುನ್ನಡೆಯಿರಿ: ಮುಹಮ್ಮದ್ ಮೊಬಿನ್

​ಪಿ.ಎ‌.ಇಂಜಿನಿಯರಿಂಗ್ ಕಾಲೇಜು ಪದವಿ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ2 Oct 2022 4:48 PM IST
share
ಸ್ಪರ್ಧಾತ್ಮಕ ಕಾಲಘಟ್ಟದ ಸವಾಲು ಸಮರ್ಥವಾಗಿ ಎದುರಿಸಿ ಮುನ್ನಡೆಯಿರಿ: ಮುಹಮ್ಮದ್ ಮೊಬಿನ್

ಕೊಣಾಜೆ: ಇಂದಿನ  ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಎದುರಾಗುವ ಸವಾಲುಗಳನ್ನು ಕಠಿಣ ಪರಿಶ್ರಮ, ಕೌಶಲದೊಂದಿಗೆ ಮುನ್ನಡೆದರೆ ಯಶಸ್ವಿ ಜೀವನವನ್ನು ಕಂಡುಕೊಳ್ಳಬಹುದು. ನಾವು ಜೀವನದಲ್ಲಿ ಗಳಿಸಿದ ಯಶಸ್ಸು ಗಳಿಸಿದ ನಂತರ ಬೆಳೆದು ಬಂದ ಹಾದಿಯನ್ನು  ಎಂದಿಗೂ ಮರೆಯದೆ ಮುನ್ನಡೆಯಬೇಕು ಎಂದು ಬೆಂಗಳೂರು ಸೈಬರ್ ಸೆಕ್ಯೂರಿಟಿ ನೊವಿಗೋ ಸೊಲ್ಯುಷನ್ ಇದರ ಉಪಾಧ್ಯಕ್ಷರಾದ ಮುಹಮ್ಮದ್ ಮೊಬಿನ್ ಅವರು ಹೇಳಿದರು.

ಅವರು ರವಿವಾರ ನಡೆದ ಪಿ.ಎ.ಕಾಲೇಜು ಸಭಾಂಗಣದಲ್ಲಿ ಭಾನುವಾರ ನಡೆದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪದವಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪಿ.ಎ.ಸಿ.ಇ ಆಡಳಿತ ಟ್ರಸ್ಟಿ ಮಹಮ್ಮದ್ ಸಲ್ಮಾನ್ ಇಬ್ರಾಹಿಂ ಅವರು ಮಾತನಾಡಿ, ಅಧ್ಯಯನ ಎಂಬುದು ನಿರಂತರವಾದ ಪ್ರಕ್ರಿಯೆ. ಪದವಿಯೊಂದಿಗೆ ನಾವು ಬೆಳೆಸಿಕೊಳ್ಳುವ ಕೌಶಲ್ಯವು ಜೀವನದಲ್ಲಿ ಅಗತ್ಯ. ಅವಕಾಶಗಳು ಬಹಳಷ್ಟಿದ್ದರೂ ಅದನ್ನು ಸದುಪಯೋಗ ಪಡಿಸುವ ಚಾಕಚಕ್ಯತೆ ನಮ್ಮಲ್ಲಿರಬೇಕು ಎಂದರು.

ಪಿ.ಎ.ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ  ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಾವು ಯಾವುದೇ ಕ್ಷೇತ್ರದಲ್ಲಿ ಇದ್ದರೂ ನಮ್ಮಲ್ಲಿರುವ ಮಾನವೀಯ ಮೌಲ್ಯಗಳು ನಮ್ಮ ಶ್ರೇಷ್ಠತೆ ಕಾರಣ ಆಗುತ್ತದೆ.  ಕಷ್ಟಕಾಲದಲ್ಲಿ ಪರಸ್ಪರ ಹೇಗೆ ಸಹಾಯವಾಗಬೇಕು ಎನ್ನುವುದನ್ನು ಕೊರೋನ ಕಾಲಘಟ್ಟ. ನಮಗೆ ಕಲಿಸಿಕೊಟ್ಟಿದೆ. ಪದವಿಯೊಂದಿಗೆ ನಾವು ಬೆಳೆಸಿಕೊಳ್ಳುವ ಮಾನವೀಯತೆ ಮಹತ್ವದ್ದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಟ್ರಸ್ಟಿ ಝುಬೈರ್ ಇಬ್ರಾಹಿಂ, ಪಿಎಸಿಟಿ ಎಜಿಎಂ ಸರ್ಫುದ್ದೀನ್, ಹಣಕಾಸು ವ್ಯವಸ್ಥಾಪಕ ಅಹಮ್ಮದ್ ಕುಟ್ಟಿ, ಸುಲ್ತಾನ್ ಇಬ್ರಾಹಿಂ,‌ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ.,ಉಪಪ್ರಾಶುಪಾಲೆ ಡಾ.ಶರ್ಮಿಳಾ ಕುಮಾರಿ,  ಡಾ.ಸಯ್ಯದ್ ಅಮೀನ್ ಅಹ್ಮದ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಸಂಯೋಜಕ ಪ್ರೊ.ಇಸ್ಮಾಯಿಲ್ ಶಾಫಿ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಡಾ.ಶರ್ಮಿಳಾ ಕುಮಾರಿ ವಂದಿಸಿದರು. ಪ್ರೊ.ಫಾತಿಮತ್ ರೈಹಾನ ಹಾಗೂ ನಝೀಮ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X