Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ವಾಯು ಪ್ರದೇಶದಲ್ಲಿ ಇರಾನ್...

ಭಾರತೀಯ ವಾಯು ಪ್ರದೇಶದಲ್ಲಿ ಇರಾನ್ ವಿಮಾನಕ್ಕೆ ಬಾಂಬ್ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ3 Oct 2022 1:00 PM IST
share
ಭಾರತೀಯ ವಾಯು ಪ್ರದೇಶದಲ್ಲಿ ಇರಾನ್ ವಿಮಾನಕ್ಕೆ ಬಾಂಬ್ ಬೆದರಿಕೆ

ಹೊಸದಿಲ್ಲಿ, ಅ. 3:  ಇರಾನ್‌ನಿಂದ ಚೀನಾಕ್ಕೆ ತೆರಳುತ್ತಿದ್ದ ಇರಾನ್‌ನ ಪ್ರಯಾಣಿಕರ ವಿಮಾನಕ್ಕೆ ಸೋಮವಾರ ಭಾರತೀಯ ವಾಯು ಪ್ರದೇಶ ಪ್ರವೇಶಿಸುತ್ತಿದ್ದಂತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೂಡಲೇ ಭಾರತೀಯ ವಾಯು ಪಡೆಯ ಸುಖೋಯ್ ಎಸ್‌ಯು-೩೦ ಯುದ್ಧ ವಿಮಾನಗಳನ್ನು  ಕಾರ್ಯಾಚರಣೆಗೆ ಸನ್ನದ್ಧಗೊಳಿಸಲಾಗಿತ್ತು.  
ಇರಾನ್‌ನ ಟೆಹ್ರಾನ್‌ನಿಂದ ಚೀನಾದ ಗುವಾಂಗ್‌ಝೌಗೆ ಪ್ರಯಾಣಿಸುತ್ತಿದ್ದ   ಇರಾನ್‌ನ ‘ಮಹಾನ್’ ವಾಯು ಯಾನ ಸಂಸ್ಥೆಯ ಪ್ರಯಾಣಿಕರ ವಿಮಾನಕ್ಕೆ ಭಾರತದಲ್ಲಿ ಇಳಿಯಲು ಎರಡು ಆಯ್ಕೆಗಳನ್ನು ನೀಡಲಾಯಿತು. ಆದರೆ, ವಿಮಾನ ಅದನ್ನು ನಿರಾಕರಿಸಿ ಪ್ರಯಾಣ ಮುಂದುವರಿಸಿತು ಎಂದು ವಾಯ ಪಡೆಯ ಹೇಳಿಕೆ ತಿಳಿಸಿದೆ. 
ಅನಂತರ ಭಾರತೀಯ ವಾಯು ಪಡೆಯ ಯುದ್ಧ ವಿಮಾನ ಸುಖೋಯ್-
30 ಸುರಕ್ಷಿತ ದೂರದಿಂದ ಇರಾನ್ ವಿಮಾನವನ್ನು ಅನುಸರಿಸಿತು. ಇರಾನ್ ವಿಮಾನ ಚೀನಾ ವಾಯು ಪ್ರದೇಶವನ್ನು ಪ್ರವೇಶಿಸಿರುವುದು ವಿಮಾನಗಳ ಹಾರಾಟವನ್ನು ಗುರುತಿಸುವ ‘‘ಫ್ಲೈಟ್‌ರಾಡರ್’’ಮೂಲಕ ತಿಳಿದು ಬಂತು ಎಂದು ಹೇಳಿಕೆ ತಿಳಿಸಿದೆ. 
ಇರಾನ್‌ನ ವಿಮಾನ ಬಾಂಬ್ ಬೆದರಿಕೆ ಕರೆಯನ್ನು ಬೆಳಗ್ಗೆ 9:20 ಕ್ಕೆ ಸ್ವೀಕರಿಸಿತು. ತರುವಾಯ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಮುನ್ನೆಚ್ಚರಿಕೆ ವಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 
‘‘ಮೊದಲು ಜೈಪುರದಲ್ಲಿ ಇಳಿಸಲು, ಅನಂತರ ಚಂಡಿಗಢದಲ್ಲಿ ಇಳಿಸಲು ಇರಾನ್‌ನ ವಿಮಾನಕ್ಕೆ ಆಯ್ಕೆ ನೀಡಲಾಗಿತ್ತು. ಆದರೆ, ಪೈಲಟ್ ಎರಡು ವಿಮಾನ ನಿಲ್ದಾಣಗಳಲ್ಲಿ ಒಂದರಲ್ಲಿ ಇಳಿಸಲು ಕೂಡ ಇಚ್ಛೆ ವ್ಯಕ್ತಪಡಿಸಲಿಲ್ಲ’’ ಎಂದು ಭಾರತೀಯ ವಾಯು ಪಡೆ ಹೇಳಿದೆ. 
ಬಾಂಬ್ ಭೀತಿಯನ್ನು ನಿರ್ಲಕ್ಷಿಸುವಂತೆ ಟೆಹ್ರಾನ್ ತಿಳಿಸಿದ ಬಳಿಕ ವಿಮಾನ ಚೀನಾದ ತನ್ನ ಗಮ್ಯದತ್ತ ಪ್ರಯಾಣ ಮುಂದುವರಿಸಿತು ಎಂದು ಹೇಳಿಕೆ ತಿಳಿಸಿದೆ. 
‘‘ನಾಗರಿಕ ವಿಮಾನ ಯಾನ ಸಚಿವಾಲಯ (ಎಂಒಸಿಎ) ಹಾಗೂ ನಾಗರಿಕ ವಿಮಾನ ಯಾನ ಭದ್ರತಾ ಬ್ಯುರೊ (ಬಿಸಿಎಎಸ್) ನಿಗದಿಪಡಿಸಿದ ಕಾರ್ಯ ವಿಧಾನದಂತೆ ಭಾರತೀಯ ವಾಯು ಪಡೆ (ಐಎಎಫ್) ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಇರಾನ್‌ನ ವಿಮಾನ ಭಾರತೀಯ ವಾಯು ಪ್ರದೇಶದಲ್ಲಿ ಇರುವಾಗ ವಾಯು ಪಡೆ ನಿಕಟ ರಾಡರ್ ಕಣ್ಗಾವಲು ಇರಿಸಿತ್ತು’’ ಎಂದು ಅದು ಹೇಳಿದೆ. 

ಈ ನಡುವೆ ಇರಾನ್‌ನ ವಿಮಾನ ಯಾನ ಸಂಸ್ಥೆ ‘ಮಹಾನ್ ಏರ್’ನ ಟೆಹ್ರಾನ್‌ನಿಂದ ಗುವಾಂಗ್‌ಝೌಗೆ ತೆರಳುತ್ತಿದ್ದ ವಿಮಾನ ಚೀನಾದ ತನ್ನ ಗಮ್ಯವನ್ನು ಸುರಕ್ಷಿತವಾಗಿ ಹಾಗೂ ಸರಿಯಾದ ಸಮಯಕ್ಕೆ ತಲುಪಿದೆ ಎಂದು ಇರಾನ್ ಅರೆ ಸರಕಾರಿ ಸಂಸ್ಥೆ ಐಎಸ್‌ಎನ್‌ಎ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X