Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನದ 5.7 ಮಿಲಿಯನ್ ಪ್ರವಾಹ...

ಪಾಕಿಸ್ತಾನದ 5.7 ಮಿಲಿಯನ್ ಪ್ರವಾಹ ಸಂತ್ರಸ್ತರು ಆಹಾರ ಬಿಕ್ಕಟ್ಟಿನ ಅಪಾಯದಲ್ಲಿ : ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ3 Oct 2022 9:47 PM IST
share
ಪಾಕಿಸ್ತಾನದ 5.7 ಮಿಲಿಯನ್ ಪ್ರವಾಹ ಸಂತ್ರಸ್ತರು ಆಹಾರ ಬಿಕ್ಕಟ್ಟಿನ ಅಪಾಯದಲ್ಲಿ : ವಿಶ್ವಸಂಸ್ಥೆ

ವಿಶ್ವಸಂಸ್ಥೆ, ಅ.3: ಪಾಕಿಸ್ತಾನದ 5.7 ಮಿಲಿಯನ್ ಪ್ರವಾಹ ಸಂತ್ರಸ್ತರು ಮುಂದಿನ ಮೂರು ತಿಂಗಳಲ್ಲಿ ಗಂಭೀರ ಆಹಾರ ಬಿಕ್ಕಟ್ಟನ್ನು ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ವಿಭಾಗ(ಒಸಿಎಚ್ಎ) ಎಚ್ಚರಿಕೆ ನೀಡಿದೆ.

ಪಾಕಿಸ್ತಾನದಲ್ಲಿ ಕಳೆದ ತಿಂಗಳು ಸುರಿದ ಅಸಾಮಾನ್ಯ ಮುಂಗಾರು ಮಳೆಯಿಂದ ಉಂಟಾದ ವಿನಾಶಕಾರಿ ಪ್ರವಾಹದಿಂದ 33 ಮಿಲಿಯನ್ ಮಂದಿ ಸಂಕಷ್ಟಕ್ಕೆ ಸಿಲುಕಿದ್ದು 1,695 ಮಂದಿ ಮೃತಪಟ್ಟಿದ್ದಾರೆ. 2 ಮಿಲಿಯನ್ಗೂ ಅಧಿಕ ಮನೆಗಳು ಹಾನಿಗೊಳಗಾಗಿದ್ದು ಲಕ್ಷಾಂತರ ಮಂದಿ ಸ್ಥಳಾಂತರಗೊಂಡಿದ್ದಾರೆ. ಸ್ಥಳಾಂತರಗೊಂಡವರನ್ನು ತಾತ್ಕಾಲಿಕ ಶಿಬಿರದಲ್ಲಿ ನೆಲೆಗೊಳಿಸಲಾಗಿದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವರದಿ ಮಾಡಿದೆ.

ಈ ವಿನಾಶಕಾರಿ ಪ್ರವಾಹವು ಪಾಕಿಸ್ತಾನದಲ್ಲಿ ಆಹಾರದ ಅಭದ್ರತೆಯನ್ನು ಉಲ್ಬಣಗೊಳಿಸುವ ನಿರೀಕ್ಷೆಯಿದೆ ಮತ್ತು ಪ್ರವಾಹ ಸಂತ್ರಸ್ತ ಪ್ರದೇಶದ 5.7 ಮಿಲಿಯನ್ ಜನತೆ ಮುಂದಿನ 3 ತಿಂಗಳಲ್ಲಿ ಆಹಾರದ ಬಿಕ್ಕಟ್ಟನ್ನು ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ವಿಭಾಗದ ಇತ್ತೀಚಿನ ವರದಿಯಲ್ಲಿ ಎಚ್ಚರಿಸಲಾಗಿದೆ.
  
ಪ್ರವಾಹಕ್ಕೂ ಮುಂಚೆಯೇ 16% ಜನಸಂಖ್ಯೆಯು ಮಧ್ಯಮ ಅಥವಾ ತೀವ್ರ ಆಹಾರ ಅಭದ್ರತೆಯಲ್ಲಿ ವಾಸಿಸುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ಗೋಧಿಯ ದಾಸ್ತಾನು ಮುಂದಿನ ಸುಗ್ಗಿಯವರೆಗೆ ಸಾಕಾಗುವಷ್ಟಿದೆ ಮತ್ತು ಸರಕಾರ ಇನ್ನಷ್ಟನ್ನು ಆಮದು ಮಾಡಿಕೊಳ್ಳುತ್ತಿರುವುದರಿಂದ ಆಹಾರ ಪೂರೈಕೆಯ ಬಗ್ಗೆ ಸದ್ಯಕ್ಕೆ ಯಾವುದೇ ಆತಂಕವಿಲ್ಲ ಎಂದು ಪಾಕ್ ಸರಕಾರ ಹೇಳುತ್ತಿದೆ.
   
ಒಸಿಎಚ್ಎ ಹಾಗೂ ಇತರ ಏಜೆನ್ಸಿಗಳು, ಪಾಲುದಾರರು ಪ್ರವಾಹದ ಸಂಕಷ್ಟಕ್ಕೆ ಕ್ಷಿಪ್ರವಾಗಿ ಸ್ಪಂದಿಸಿ ಪ್ರವಾಹದಿಂದ ನೇರವಾಗಿ ಪೀಡಿತ 1.6 ಮಿಲಿಯನ್ ಜನತೆಗೆ ನೆರವನ್ನು ಒದಗಿಸಿವೆ ಎಂದು ವಿಶ್ವಸಂಸ್ಥೆ ಸೋಮವಾರ ಟ್ವೀಟ್ ಮಾಡಿದೆ. ಪ್ರವಾಹದಿಂದ ಅತ್ಯಧಿಕ ಹಾನಿಗೊಳಗಾದ ಸಿಂಧ್ ಮತ್ತು ನೈಋತ್ಯದ ಬಲೂಚಿಸ್ತಾನ ಪ್ರಾಂತದಲ್ಲಿ ನೀರಿನಿಂದ ಹರಡುವ ಮತ್ತು ಇತರ ರೋಗಗಳು ಉಲ್ಬಣಿಸಿವೆ ಎಂದು ಒಸಿಎಚ್ಎ ಹೇಳಿದೆ.
 
ಬಲೂಚಿಸ್ತಾನದ ಬಹುತೇಕ ಜಿಲ್ಲೆಗಳು ಕಳೆದ ವಾರದಿಂದ ಸಹಜ ಸ್ಥಿತಿಗೆ ಮರಳುತ್ತಿವೆ. ಸಿಂಧ್ ಪ್ರಾಂತದಲ್ಲಿ ಸಿಂಧೂ ನದಿಯ ನೀರಿನ ಮಟ್ಟವೂ ಸಾಮಾನ್ಯ ಸ್ಥಿತಿಗೆ ಮರಳಿದೆ. ಸಿಂಧ್ ಪ್ರಾಂತದ 22 ಜಿಲ್ಲೆಗಳಲ್ಲಿ 18ರಲ್ಲಿ ನೆರೆನೀರಿನ ಮಟ್ಟ 34%ದಷ್ಟು ಕಡಿಮೆಯಾಗಿದ್ದರೆ, ಕೆಲವು ಜಿಲ್ಲೆಗಳಲ್ಲಿ 78%ದಷ್ಟು ಕಡಿಮೆಯಾಗಿದೆ ಎಂದು ಒಸಿಎಚ್ಎ ವರದಿ ಹೇಳಿದೆ.
 
ಪ್ರವಾಹದಿಂದ ಬದುಕುಳಿದವರಿಗೆ ಜೀವರಕ್ಷಿಸುವ ಅಗತ್ಯಗಳನ್ನು ಪೂರೈಸಲು ಅಂತರಾಷ್ಟ್ರೀಯ ಸಮುದಾಯದಿಂದ ಹೆಚ್ಚುವರಿ 800 ಮಿಲಿಯನ್ ಡಾಲರ್ ಆರ್ಥಿಕ ನೆರವನ್ನು ಎದುರು ನೋಡುತ್ತಿರುವುದಾಗಿ ವಿಶ್ವಸಂಸ್ಥೆ ಹೇಳಿದೆ. ಅಶಕ್ತ ಕುಟುಂಬಗಳಿಗೆ ಆಹಾರವನ್ನು ಒದಗಿಸಲಾಗಿದೆ, ಆದರೆ ಜನತೆಯ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಇದು ಸಾಕಾಗದು ಎಂದು ಕಳೆದ ವಾರ ವಿಶ್ವಸಂಸ್ಥೆ ಹೇಳಿದೆ. ಪ್ರವಾಹದಿಂದ 440 ಸೇತುವೆ, ಸಾವಿರಾರು ಕಿ.ಮೀ ರಸ್ತೆಗಳು ಸಂಪೂರ್ಣ ನಾಶವಾಗಿದ್ದು ರೈಲು, ರಸ್ತೆ ಸಂಪರ್ಕಕ್ಕೆ ತೀವ್ರ ಹಾನಿಯಾಗಿದೆ. ಸುಮಾರು 30 ಶತಕೋಟಿ ಡಾಲರ್ನಷ್ಟು ಆರ್ಥಿಕ ನಷ್ಟವಾಗಿದೆ ಎಂದು ಪಾಕ್ ಸರಕಾರ ಹೇಳಿದೆ.

ಆರೋಗ್ಯ ಸೇವೆಯ ಅಲಭ್ಯತೆ
  
ಪ್ರವಾಹದಿಂದ ಬದುಕುಳಿದವರು ಎದುರಿಸುತ್ತಿರುವ ಸಮಸ್ಯೆಯನ್ನು ಒಸಿಎಚ್ಎ ವರದಿ ಎತ್ತಿತೋರಿಸಿದೆ. ಅನೇಕರು ತಾತ್ಕಾಲಿಕ ಶಿಬಿರಗಳಲ್ಲಿ ಅನಾರೋಗ್ಯಕರ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಮೂಲಭೂತ ಸೇವೆಗಳ ಸೀಮಿತ ಲಭ್ಯತೆಯೊಂದಿಗೆ, ಪ್ರಮುಖ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿನ ಅಪಾಯವನ್ನು ಹೆಚ್ಚಿಸಿದೆ. ಸಾಧ್ಯವಾದಾಗ ತಾತ್ಕಾಲಿಕ ಶಿಬಿರಗಳಲ್ಲಿ ಗರ್ಭಿಣಿಯರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ಮತ್ತು ಸುಮಾರು 1,30,000 ಗರ್ಭಿಣಿಯರಿಗೆ ತುರ್ತು ಆರೋಗ್ಯ ಸೇವೆಯ ಅಗತ್ಯವಿದೆ. ಪ್ರವಾಹದ ಸಮಸ್ಯೆಗೂ ಮುನ್ನವೇ ಪಾಕಿಸ್ತಾನವು ಏಶ್ಯಾದಲ್ಲೇ ಅತೀ ಹೆಚ್ಚು ತಾಯಂದಿರ ಮರಣ ಪ್ರಮಾಣವನ್ನು ಹೊಂದಿತ್ತು, ಈಗ ಪ್ರವಾಹದ ಕಾರಣ ಈ ಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X