ವಿಜಯದಶಮಿ | ಚಾಮುಂಡೇಶ್ವರಿ ಉತ್ಸವಮೂರ್ತಿ ಮೆರವಣಿಗೆಗೆ ಚಾಲನೆ

ಮೈಸೂರು, ಅ.5: ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.
ಜಂಬೂ ಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದಸ್ವರ ತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.
ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.
ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡುಬದಿ ಭಕ್ತ ಸಮೂಹವೇ ನೆರೆದಿತ್ತು.