ನಾವು ಚಂಡಮಾರುತಗಳನ್ನು ಎದುರಿಸಿದ್ದೇವೆ, ಒಟ್ಟಾಗಿ ಭಾರತವನ್ನು ಒಗ್ಗೂಡಿಸುತ್ತೇವೆ: ರಾಹುಲ್ ಗಾಂಧಿ
ಮಂಡ್ಯ: 2 ದಿನ ವಿಶ್ರಾಂತಿ ಬಳಿಕ ಕರ್ನಾಟಕದಲ್ಲಿ 5ನೇ ದಿನದ ಭಾರತ್ ಜೋಡೊ ಯಾತ್ರೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಡ್ಯ ಜಿಲ್ಲೆಯ ಬೆಳ್ಳಾಳೆಯಿಂದ ಮತ್ತೆ ಆರಂಭಿಸಿದ್ದಾರೆ.
ಈ ನಡುವೆ ತಾಯಿ ಸೋನಿಯಾ ಗಾಂಧಿ ಜೊತೆ ಇರುವ ಫೋಟೋ ಒಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, 'ನಾವು ಹಿಂದೆಯೂ ಚಂಡಮಾರುತದಿಂದ ನೌಕೆಯನ್ನು ಹೊರಗೆಳೆದು ತಂದವರು. ಇಂದಿಗೂ ಪ್ರತಿ ಸವಾಲುಗಳನ್ನು ಮೆಟ್ಟಿ ನಡೆಯುತ್ತೇವೆ, ನಾವು ಒಟ್ಟಾಗಿ ಭಾರತವನ್ನು ಒಗ್ಗೂಡಿಸುತ್ತೇವೆ' ಎಂದು ಬರೆದುಕೊಂಡಿದ್ದಾರೆ.
ಅ.3ರಂದೇ ರಾಜ್ಯಕ್ಕೆ ಬಂದಿದ್ದ ಸೋನಿಯಾ ಗಾಂಧಿ, ಎಚ್.ಡಿ.ಕೋಟೆ ತಾಲೂಕಿನ ಬೀರಂಬಳ್ಳಿಯ ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ 2 ದಿನ ವಾಸ್ತವ್ಯ ಹೂಡಿದ್ದರು.
हम पहले भी तूफानों से कश्ती निकाल कर लाए हैं, हम आज भी हर चुनौतियों की हदें तोड़ेंगे, मिलकर भारत जोड़ेंगे। pic.twitter.com/RCR46zYXZJ
— Rahul Gandhi (@RahulGandhi) October 6, 2022
Next Story