Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 11ರ ಬಾಲಕಿ ಮೇಲೆ ಶಾಲೆಯಲ್ಲೇ ಹಿರಿಯ...

11ರ ಬಾಲಕಿ ಮೇಲೆ ಶಾಲೆಯಲ್ಲೇ ಹಿರಿಯ ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ7 Oct 2022 8:41 AM IST
share
11ರ ಬಾಲಕಿ ಮೇಲೆ ಶಾಲೆಯಲ್ಲೇ ಹಿರಿಯ ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಕೇಂದ್ರೀಯ ವಿದ್ಯಾಲಯದ ಶೌಚಾಲಯದಲ್ಲಿ ಹನ್ನೊಂದು ವರ್ಷದ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆಪಾದಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೇಂದ್ರೀಯ ವಿದ್ಯಾಲಯ ಸಂಘಟನೆಯ ಪ್ರಾದೇಶಿಕ ಕಚೇರಿ ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದೆ. ಈ ಘಟನೆ ಕಳೆದ ಜುಲೈನಲ್ಲಿ ನಡೆದಿದೆ ಎನ್ನಲಾಗಿದ್ದು, ದೆಹಲಿ ಮಹಿಳಾ ಆಯೋಗ ಈ ವಿಚಾರವನ್ನು ಬೆಳಕಿಗೆ ತಂದ ಬಳಿಕ ಮಂಗಳವಾರ ಸಂತ್ರಸ್ತೆ ಬಾಲಕಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿ ಮಹಿಳಾ ಆಯೋಗ ಈ ಪ್ರಕರಣವನ್ನು ಗಂಭೀರ ವಿಚಾರ ಎಂದು ಪರಿಗಣಿಸಿದ್ದು, ಈ ಸಂಬಂಧ ದೆಹಲಿ ಪೊಲೀಸರು ಹಾಗು ಶಾಲೆಯ ಪ್ರಾಚಾರ್ಯರಿಗೆ ನೋಟಿಸ್ ನೀಡಿದೆ. ಈ ಪ್ರಕರಣವನ್ನು ಏಕೆ ಪೊಲೀಸರ ಗಮನಕ್ಕೆ ತಂದಿಲ್ಲ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಶಾಲೆಯ ಅಧಿಕಾರಿಗಳಿಗೆ ಸೂಚಿಸಿದೆ.

ಆದರೆ ಸಂತ್ರಸ್ತೆ ಅಥವಾ ಆಕೆಯ ಕುಟುಂಬದವರು ಶಾಲಾ ಪ್ರಾಚಾರ್ಯರಿಗೆ ಈ ವಿಷಯವನ್ನು ತಿಳಿಸಿಲ್ಲ. ಪೊಲೀಸ್ ತನಿಖೆ ನಡೆದ ಬಳಿಕವಷ್ಟೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಕೇಂದ್ರೀಯ ವಿದ್ಯಾಲಯ ಸಂಘಟನೆಯ ಅಧಿಕಾರಿಗಳು ಸಬೂಬು ಹೇಳಿದ್ದಾರೆ. ಕೇಂದ್ರೀಯ ವಿದ್ಯಾಲಯ ಸಂಘಟನೆ, ಶಿಕ್ಷಣ ಸಚಿವಾಲಯದ ಅಧೀನದ ಸ್ವಾಯತ್ತ ಸಂಸ್ಥೆಯಾಗಿದ್ದು, ದೇಶದ 25 ಪ್ರದೇಶಗಳಲ್ಲಿ 1200ಕ್ಕೂ ಹೆಚ್ಚು ಕೇಂದ್ರೀಯ ವಿದ್ಯಾಲಯಗಳನ್ನು ನಿರ್ವಹಿಸುವ ಹೊಣೆ ಹೊಂದಿದೆ.

"ಶಾಲೆಯ ಒಳಗೆ ಹನ್ನೊಂದು ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಗಂಭೀರ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಪ್ರಕರಣವನ್ನು ಮುಚ್ಚಿಹಾಲಕು ಶಾಲೆಯ ಶಿಕ್ಷಕರು ಪ್ರಯತ್ನಿಸಿದ್ದಾರೆ ಎಂದು ಬಾಲಕಿ ಆಪಾದಿಸಿದ್ದಾಳೆ. ರಾಜಧಾನಿಯಲ್ಲಿ ಶಾಲೆಗಳು ಮಕ್ಕಳಿಗೆ ಅಸುರಕ್ಷಿತವಾಗಿರುವುದು ದುರದೃಷ್ಟಕರ" ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಳಿವಾಳ್ ಹೇಳಿದ್ದಾರೆ. ಈ ಬಗ್ಗೆ ndtv.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X