Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು; ದಸರಾದಲ್ಲಿ ಭಾಗವಹಿಸಿದ್ದ...

ಮೈಸೂರು; ದಸರಾದಲ್ಲಿ ಭಾಗವಹಿಸಿದ್ದ ಆನೆಗಳಿಗೆ ಅರಮನೆಯಿಂದ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ7 Oct 2022 9:36 PM IST
share
ಮೈಸೂರು; ದಸರಾದಲ್ಲಿ ಭಾಗವಹಿಸಿದ್ದ ಆನೆಗಳಿಗೆ ಅರಮನೆಯಿಂದ ಬೀಳ್ಕೊಡುಗೆ

ಮೈಸೂರು,ಅ.8: ದಸರಾ ಜಂಬೂ ಸವಾರಿ ಯಶಸ್ವಿಗೆ ಕಾರಣರಾದ ಗಜಪಡೆಯ ಕಾವಾಡಿ ಮತ್ತು ಮಾವುತರಿಗೆ ಅರಮನೆ ಆಡಳಿತ ಮಂಡಳಿ ವತಿಯಿಂದ ಗೌರವ ಧನ ನೀಡಿ ಸನ್ಮಾನಿಸಲಾಯಿತು.

ಯಶಸ್ವಿ ದಸರಾ ಮಹೋತ್ಸವದ ಬಳಿಕ ಗಜಪಡೆ ಮತ್ತು ಕಾವಾಡಿ,ಮಾವುತ  ಕುಟುಂಬ ತವರಿಗೆ ಹಿಂದಿರುಗುತ್ತಿದ್ದು, ಶುಕ್ರವಾರ  ಮಾವುತ ಮತ್ತು ಕಾವಾಡಿಗಳಿಗೆ ತಲಾ 10 ಸಾವಿರ ನೀಡಿ  ಜಿಲ್ಲಾಡಳಿತದ ವತಿಯಿಂದ ಸನ್ಮಾನ ಮಾಡಲಾಯಿತು. ಎರಡು ತಿಂಗಳಿಂದ ನಾಡಿಗೆ ಹೊಂದಿಕೊಂಡಿದ್ದ ಮಾವುತ ಕಾವಾಡಿ ಕುಟುಂಬ ಭಾರವಾದ ಮನಸ್ಸಿನಲ್ಲಿ ತವರಿಗೆ ಪಯಣ ಬೆಳೆಸಿದರು.

ಯಶಸ್ವಿ ದಸರಾ ಆಚರಣೆಗೆ ಕಾರಣರಾದ ಎಲ್ಲರಿಗೂ ಡಿಸಿಎಫ್ ಕರಿಕಾಳನ್ ಧನ್ಯವಾದ ತಿಳಿಸಿದರು.  ಶ್ರೀ ಚಾಮುಂಡಿ ತಾಯಿಯ ಆಶೀರ್ವಾದದಿಂದ ಈ ಬಾರಿ ಅದ್ದೂರಿ ದಸರಾ ನಡೆಯಿತು. ನಾನು ಆರೇಳು ವರ್ಷಗಳಿಂದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಈ ಬಾರಿಯ ದಸರಾ ಮಹೋತ್ಸವದ ಜಂಬೂಸವಾರಿಗೆ ಭಾರಿ ಜನಸ್ತೋಮ ಸೇರಿತ್ತು. ಅದ್ದೂರಿಯಾಗಿ ದಸರಾ ಜಂಬೂಸವಾರಿ ಜರುಗಿತು. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಧನ್ಯವಾದಗಳು ಎಂದರು.

ದಸರಾ ಗಜಪಡೆಗೆ ಇಂದು ಬೀಳ್ಕೊಟ್ಟ ಬಳಿಕ ಆನೆಗಳನ್ನ ಲಾರಿಗೆ ಏರಿಸಲು ಮುಂದಾದ ವೇಳೆ ಲಾರಿ ಏರಲು ಭೀಮ ಮತ್ತು ಶ್ರೀರಾಮ ಆನೆ ಹಿಂದೇಟು ಹಾಕಿದ ಘಟನೆ ನಡೆಯಿತು. ಕಳೆದ ಎರಡು ತಿಂಗಳಿಂದ ನಾಡಿನಲ್ಲೇ ಇದ್ದು  ಈಗ ಕಾಡಿಗೆ ಹೋಗಲು ಭೀಮ ಮತ್ತು ಶ್ರೀರಾಮ ಆನೆಗಳು ಹಿಂದೇಟು ಹಾಕಿದವು. ಈ ವೇಳೆ ಲಾರಿಗೆ ಏರಿಸಲು ಮಾವುತರು ಹರಸಾಹಸಪಟ್ಟರು.

ಅಭಿಮನ್ಯುವಿನ ಮೂಲಕ ನೂಕಿಸಿದರೂ ಶ್ರೀರಾಮ ಆನೆ ಲಾರಿ ಏರದೇ ನಿಂತಲ್ಲೇ ಮಲಗಿತು. ಶ್ರೀರಾಮ ಆನೆ ಒಡೆದು ಬಡಿದರೂ ಲಾರಿ ಏರಲಿಲ್ಲ. ಕೊನೆಗೂ ಲಾರಿ ಏರದೆ ವಾಪಸ್ಸಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಒಟ್ಟು 12 ಆನೆಗಳು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಂಡು ಇಂದು ತವರಿಗೆ ಪಯಣ ಬೆಳೆಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X