Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶದ ಜನಹಿತಕ್ಕಾಗಿ ಪ್ರವಾದಿಯ ತತ್ವಾದರ್ಶ...

ದೇಶದ ಜನಹಿತಕ್ಕಾಗಿ ಪ್ರವಾದಿಯ ತತ್ವಾದರ್ಶ ಅತ್ಯಗತ್ಯ: ವೈ.ಎಸ್.ವಿ. ದತ್ತ

ಸೀರತ್ ಅಭಿಯಾನದ ಅಂಗವಾಗಿ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ7 Oct 2022 10:22 PM IST
share
ದೇಶದ ಜನಹಿತಕ್ಕಾಗಿ ಪ್ರವಾದಿಯ ತತ್ವಾದರ್ಶ ಅತ್ಯಗತ್ಯ: ವೈ.ಎಸ್.ವಿ. ದತ್ತ

ಮಂಗಳೂರು, ಅ.7: ಪ್ರವಾದಿ ಪೈಗಂಬರ್‌ರ ಬದುಕು ಹೂವಿನ ಹಾಸಿಗೆಯಾಗಿರಲಿಲ್ಲ. ಕಲ್ಲುಮುಳ್ಳುಗಳ ಪಯಣ ಅವರದ್ದಾಗಿತ್ತು. ತನ್ನ ಶತ್ರುಗಳು ಯಾರು, ಮಿತ್ರರು ಯಾರು ಎಂಬುದನ್ನು ತಿಳಿಯಲಾಗದ ಗೊಂದಲಗಳಿಂದ ಕೂಡಿದ ಸಮಾಜದ ಮಧ್ಯೆ ಅವರ ಬದುಕು ಸಾಗುತ್ತಿತ್ತು. ಅಂದಿನ ಕಾಲಘಟ್ಟದ ಸಾಮಾಜಿಕ, ರಾಜಕೀಯ ಸ್ಥಿತಿಗತಿಯ ಮಧ್ಯೆಯೂ ಅವರು ನೂರಾರು ಸಮಸ್ಯೆಗಳನ್ನು ಎದುರಿಸಿದರೂ ಪ್ರೀತಿ, ವಿಶ್ವಾಸ, ನಂಬಿಕೆ, ಮನುಷ್ಯತ್ವದ ಮೇಲೆ ಜಗತ್ತನ್ನೂ ಗೆದ್ದರು. ದೇಶದ ಇಂದಿನ ವಿಷಮ ಪರಿಸ್ಥಿತಿಯನ್ನು ಎದುರಿಸಲು, ಜನರ ಹಿತವನ್ನು ಕಾಪಾಡಲು ಪ್ರವಾದಿಯ ತತ್ವಾದರ್ಶವು ಅತ್ಯಗತ್ಯವಾಗಿದೆ ಎಂದು ಮಾಜಿ ಶಾಸಕ, ಚಿಂತಕ ವೈ.ಎಸ್.ವಿ ದತ್ತ ಹೇಳಿದರು.

ಜಮಾಅತೆ ಇಸ್ಲಾಮೀ ಹಿಂದ್ ‘ಪ್ರವಾದಿ ಮುಹಮ್ಮದ್(ಸ)ರನ್ನು ಅರಿಯೋಣ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ಹಮ್ಮಿಕೊಂಡ ಸೀರತ್ ಅಭಿಯಾನದ ಪ್ರಯುಕ್ತ ‘ದೇಶದ ಹಿತಚಿಂತನೆ: ಪ್ರವಾದಿ ಮುಹಮ್ಮದ್ (ಸ) ಚಿಂತನೆಗಳ ಬೆಳಕಿನಲ್ಲಿ’ ಎಂಬ ವಿಷಯದಲ್ಲಿ ನಗರದ ಪುರಭವನದಲ್ಲಿ ಶುಕ್ರವಾರ ಏರ್ಪಡಿಸಿದ ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಪ್ರವಾದಿ ಪೈಗಂಬರ್ ಮತ್ತು ಬಸವಣ್ಣನ ಸಂದೇಶ, ಬದುಕಿನ ಮಧ್ಯೆ ತುಂಬಾ ಸಾಮ್ಯತೆ ಇದೆ. ಬಹುರೂಪಿ ವ್ಯಕ್ತಿತ್ವದ ಪ್ರವಾದಿಯು ಸಮಾನತೆಯ ಸಾಮ್ರಾಜ್ಯವನ್ನೇ ಕಟ್ಟಿದ್ದರು. ಅಂತಹ ಪ್ರವಾದಿಯ ಜೀವನ ಮೌಲ್ಯವನ್ನು ಸರ್ವರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ. ಆ ಮೂಲಕ ಜನಸಾಮಾನ್ಯರ ಆತಂಕ, ಅನುಮಾನ ದೂರವಾಗುವಂತಹ ಸುಂದರ ದಿನಗಳು ನಮ್ಮೆಲ್ಲರದ್ದಾಗಲಿ ಎಂದು ವೈ.ಎಸ್.ವಿ ದತ್ತ  ಆಶಿಸಿದರು.
 
*ಧರ್ಮದ ಸಂದೇಶಗಳು ಮಸೀದಿ, ಮಂದಿರ, ಚರ್ಚ್‌ಗೆ ಸೀಮಿತವಾಗಬಾರದು ಎಂಬ ಕಲ್ಪನೆಯಂತೆಯೇ ಪ್ರವಾದಿಯ ಜೀವನವು ಕೂಡ ಕೇವಲ ಮುಸಲ್ಮಾನರಿಗೆ ಮಾತ್ರ ಸೀಮಿತವಾಗಬಾರದು. ಅವರ ಬದುಕು ಪ್ರತಿಯೊಬ್ಬರದ್ದಾಗಬೇಕು. ಇಸ್ಲಾಂ ಧರ್ಮವನ್ನು ಅಲ್ಪಸ್ವಲ್ಪ ತಿಳಿದವರು ಈಗಲೂ ಪ್ರವಾದಿಯ ಬಗ್ಗೆ ತಪ್ಪುಕಲ್ಪನೆಗಳನ್ನು ಬಿತ್ತುತ್ತಿದ್ದಾರೆ. ಧರ್ಮವನ್ನು ಗುತ್ತಿಗೆ ಪಡೆದ ಕೆಲವರು ತನ್ನ ರಾಜಕೀಯ ಲಾಭಕ್ಕೋಸ್ಕರ ಹಿಂದೂ, ಮುಸ್ಲಿಂ, ಕ್ರೈಸ್ತ ಧರ್ಮವನ್ನು ಕೇವಲ ‘ಶಬ್ದ’ಗಳಾಗಿ ಮಾರ್ಪಡಿಸುತ್ತಿದ್ದಾರೆ. ಅವುಗಳನ್ನು ಮತಗಳಾಗಿಯೂ ಪರಿವರ್ತಿಸುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದರು.

ಮನುಷ್ಯರ ಮಧ್ಯೆ ದ್ವೇಷ ಕಟ್ಟುವುದು ಧರ್ಮದ ಕೆಲಸವಲ್ಲ. ಸೇತುವೆ ನಿರ್ಮಿಸುವುದೇ ಧರ್ಮದ ಕೆಲಸವಾಗಿದೆ. ಜಾತಿ, ಧರ್ಮಗಳು  ಇಂದಿನ ಸಮಸ್ಯೆಗಳೇ ಅಲ್ಲ. ಪ್ರಮುಖ ಸಮಸ್ಯೆಗಳಾದ ನಿರುದ್ಯೋಗ, ಅಸಮಾನತೆ, ಹಸಿವು, ಬಡತನ ಇತ್ಯಾದಿಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪ್ರವಾದಿಯ, ಬಸವಣ್ಣನ, ಸ್ವಾಮಿ ವಿವೇಕಾನಂದರ, ನಾರಾಯಣಗುರುಗಳ ತತ್ವವನ್ನು ಅರ್ಥಮಾಡಿಕೊಂಡು ಬಲಿಷ್ಠ ಭಾರತವನ್ನು ಕಟ್ಟಬೇಕಿದೆ ಎಂದು ನಿಕೇತ್ ರಾಜ್ ಮೌರ್ಯ ಅಭಿಪ್ರಾಯಪಟ್ಟರು.

*ಪ್ರವಾದಿಯ ಬದುಕೇ ನಮಗೆ ದಾರಿದೀಪಗಳಾಗಿವೆ. ಅವರು ಹಚ್ಚಿದ ಬೆಳಕಿನಲ್ಲೇ ನಾವು ನಡೆಯೋಣ. ಪ್ರವಾದಿಯ ಮಾತನ್ನು ಆಲಿಸಿದರೆ ಸಾಲದು. ಅದನ್ನು ಪಾಲಿಸಬೇಕಿದೆ ಎಂದು ಕುಲಶೇಖರ ಹೋಲಿಕ್ರಾಸ್ ಚರ್ಚ್‌ನ ಧರ್ಮಗುರು ಫಾ. ಕ್ಲಿಫರ್ಡ್ ಫೆರ್ನಾಂಡೀಸ್ ಹೇಳಿದರು.

ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ವಿಷಯ ಮಂಡಿಸಿದರು. ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾಧ್ಯಕ್ಷ ಡಾ. ಬೆಳ್ಗಾಮೀ ಮುಹಮ್ಮದ್ ಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಪ್ರವಾದಿ ಮುಹಮ್ಮದ್ (ಸ) ಸಮಗ್ರ ವ್ಯಕ್ತಿತ್ವ’ ಕೃತಿಯನ್ನು ವೈಎಸ್‌ವಿ ದತ್ತ ಹಾಗೂ ‘ಪ್ರವಾದಿ ಮುಹಮ್ಮದ್ (ಸ) ವಿವಾಹಗಳು ಮತ್ತು ವಿಮರ್ಶೆಗಳು’ ಕೃತಿಯನ್ನು ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಬಿಡುಗಡೆಗೊಳಿಸಿದರು.

ಅಬ್ದುಲ್ಲತೀಫ್ ಆಲಿಯಾ ಕಿರಾಅತ್ ಪಠಿಸಿದರು. ಜಮಾಅತೆ ಇಸ್ಲಾಮೀ ಹಿಂದ್‌ನ ದ.ಕ.ಜಿಲ್ಲಾ ಸಂಚಾಲಕ ಅಮೀನ್ ಅಹ್ಸನ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕ ಅಬ್ದುಲ್ ಗಫೂರ್ ಕುಳಾಯಿ ವಂದಿಸಿದರು. ಡಾ. ಜಮಾಲುದ್ದೀನ್ ಹಿಂದಿ ಮತ್ತು ಲುಬ್ನಾ ಝಕಿಯ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X