Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು | ಮೊಬೈಲ್‍ನಲ್ಲೇ ಸಮಸ್ಯೆ...

ಚಿಕ್ಕಮಗಳೂರು | ಮೊಬೈಲ್‍ನಲ್ಲೇ ಸಮಸ್ಯೆ ಪರಿಹರಿಸುವುದಾಗಿ ನಂಬಿಸಿ ಮಹಿಳೆಗೆ ವಂಚನೆ ಆರೋಪ: ಜ್ಯೋತಿಷಿ ಬಂಧನ

ವಾರ್ತಾಭಾರತಿವಾರ್ತಾಭಾರತಿ8 Oct 2022 7:36 PM IST
share
ಚಿಕ್ಕಮಗಳೂರು | ಮೊಬೈಲ್‍ನಲ್ಲೇ ಸಮಸ್ಯೆ ಪರಿಹರಿಸುವುದಾಗಿ ನಂಬಿಸಿ ಮಹಿಳೆಗೆ ವಂಚನೆ ಆರೋಪ: ಜ್ಯೋತಿಷಿ ಬಂಧನ

ಚಿಕ್ಕಮಗಳೂರು, ಅ.8: ಮೊಬೈಲ್ ಮೂಲಕ ಕರೆ ಮಾಡಿಯೇ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಫೇಸ್‍ಬುಕ್ ಪೇಜ್‍ನಲ್ಲಿದ್ದ ಬರಹ ನೋಡಿ ಮಹಿಳೆಯೊಬ್ಬರು ಜ್ಯೋತಿಷಿಗೆ ಕರೆ ಮಾಡಿದ್ದು, ಆತ ವಿವಿಧ ಪೂಜೆಗಳ ನೆಪ ಹೇಳಿಕೊಂಡು ಲಕ್ಷಾಂತರ ರೂ. ಪಡೆದು ವಂಚಿಸಿರುವ ಘಟನೆ ಕಾಫಿನಾಡಿನಲ್ಲಿ ನಡೆದಿದ್ದು, ಮಹಿಳೆಯ ದೂರಿನ ಮೇರೆಗೆ ಜಿಲ್ಲೆಯ ಸಿಇಎನ್ ಪೊಲೀಸರು ಆರೋಪಿ ಜ್ಯೋತಿಷಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಸಹಕಾರ ನಗರದ ನಿವಾಸಿ ಹಾಗೂ ಜ್ಯೋತಿಷಿ ಗಣೇಶ್ ಗೊಂದಳೆ(27) ಬಂಧಿತ ಆರೋಪಿಯಾಗಿದ್ದು, ಈತ ಪೇಸ್‍ಬುಕ್‍ನ "ಪಂಡಿತ್ ಮೋದಿ ಬೆಟ್ಟಪ್ಪ ಆಸ್ಟ್ರಾಲಜಿ" ಎಂಬ ಪೇಜ್‍ನಲ್ಲಿ ಸಾರ್ವಜನಿಕರ ಎಲ್ಲ ರೀತಿಯ ಸಮಸ್ಯೆಗಳನ್ನು ಕೇವಲ ಮೊಬೈಲ್‍ನಲ್ಲೇ ಪರಿಹರಿಸುವುದಾಗಿ ಜಾಹೀರಾತು ಹಾಕಿಕೊಂಡಿದ್ದ. ಇದನ್ನು ನಂಬಿದ್ದ ನಗರದ ಮಹಿಳೆಯೊಬ್ಬರು ಜ್ಯೋತಿಷಿ ಗಣೇಶ್‍ನ ಮೊಬೈಲ್ ನಂಬರ್‍ಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡಿದ್ದರು.

ಮಹಿಳೆಯ ಸಮಸ್ಯೆ ಆಲಿಸಿದ ಆರೋಪಿ ಗಣೇಶ್, ಆರಂಭದಲ್ಲಿ ಮಹಿಳೆಯ ಹೆಸರಿನಲ್ಲಿ ಪೂಜೆ ಮಾಡಬೇಕಿದ್ದು, ಅದಕ್ಕೆ 7 ಸಾವಿರ ರೂ. ಖರ್ಚಾಗುತ್ತದೆ ಎಂದು ಹೇಳಿ, ಗೂಗಲ್ ಪೇ ಮೂಲಕ 7 ಸಾವಿರ ಪಡೆದುಕೊಂಡಿದ್ದ. ನಂತರ ಮತ್ತೆ ಕರೆ ಮಾಡಿ, ವಿವಿಧ ಪೂಜೆಗಳನ್ನು ಮಾಡಬೇಕು, ಇದರಿಂದ ನಿಮ್ಮ ಎಲ್ಲ ಸಮಸೆಗಳೂ ಪರಿಹಾರ ಕಾಣಲಿವೆ ಎಂದು ನಂಬಿಸಿ ಒಟ್ಟು 1 ಲಕ್ಷ 16 ಸಾವಿರ ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದ. ಇಷ್ಟಕ್ಕೆ ಸುಮ್ಮನಾಗದ ಜ್ಯೋತಿಷಿ ಗಣೇಶ್ ಮತ್ತೆ ಕರೆ ಮಾಡಿ ಮತ್ತಷ್ಟು ಪೂಜೆ ಮಾಡಬೇಕು, ಹಣ ಹಾಕಿ ಎಂದು ಪದೇ ಪದೇ ಕರೆ ಮಾಡುತ್ತಿದ್ದ. ಜ್ಯೋತಿಷಿಯ ಕಾಟಕ್ಕೆ ಬೇಸತ್ತ ಮಹಿಳೆ ಚಿಕ್ಕಮಗಳೂರು ಪೊಲೀಸ್ ಇಲಾಖೆ ಮೊರೆ ಹೋಗಿದ್ದರು.

ಮಹಿಳೆಯಿಂದ ದೂರು ಪಡೆದ ಚಿಕ್ಕಮಗಳೂರು ಸಿಇಎನ್ ವಿಭಾಗದ ಪೊಲೀಸರು ತನಿಖೆ ನಡೆಸಿ ಬೆಂಗಳೂರು ಮೂಲದ ಜ್ಯೋತಿಷಿ ವೃತ್ತಿಯ ಗಣೇಶ್ ಗೊಂದಳೆಯನ್ನು ಬಂಧಿಸಿದ್ದು, ಬಂಧಿತ ಆರೋಪಿಯಿಂದ 87,500 ರೂ. ನಗದು, 1 ಮೊಬೈಲ್, 2 ಎಟಿಎಂ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಎಸ್ಪಿ ಉಮಾಪ್ರಶಾಂತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಿಇಎನ್ ವಿಭಾಗದ ಪಿಐ ಮುತ್ತುರಾಜ್, ಪಿಎಸ್ಸೈಗಳಾದ ನಾಸಿರ್‍ಹುಸೇನ್, ರಘುನಾಥ್, ಎಸ್ಸೈ ಪ್ರಕಾಶ್, ಸಿಬ್ಬಂದಿ ವಿನಾಯಕ್, ಅನ್ವರ್ ಪಾಶ ತನಿಖಾ ತಂಡದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X